ತಾಕತ್ತಿದ್ದರೆ ಬಿಜೆಪಿ ದೇಶಾದ್ಯಂತ ಗ್ಯಾರಂಟಿ ಜಾರಿಗೆ ತರಲಿ: ಸಿಎಂ ಸಿದ್ದರಾಮಯ್ಯ

Published : Aug 06, 2023, 10:00 PM IST
ತಾಕತ್ತಿದ್ದರೆ ಬಿಜೆಪಿ ದೇಶಾದ್ಯಂತ ಗ್ಯಾರಂಟಿ ಜಾರಿಗೆ ತರಲಿ: ಸಿಎಂ ಸಿದ್ದರಾಮಯ್ಯ

ಸಾರಾಂಶ

ವಿರೋಧ ಪಕ್ಷದವರಲ್ಲದೇ ಈ ದೇಶದ ಪ್ರಧಾನಿಗಳು ಕೂಡ ಗ್ಯಾರಂಟಿಗಳನ್ನು ಜಾರಿ ಮಾಡಿದರೆ ರಾಜ್ಯ ದಿವಾಳಿಯಾಗುತ್ತದೆ ಎಂದು ಹೇಳಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗಿಲ್ಲ. ಈ ದೇಶವನ್ನು ದಿವಾಳಿ ಮಾಡಿರುವುದು ನರೇಂದ್ರ ಮೋದಿಯವರು: ಸಿಎಂ ಸಿದ್ದರಾಮಯ್ಯ 

ಕಲಬುರಗಿ(ಆ.06):  ಬಿಜೆಪಿಗೆ ತಾಕತ್ತಿದ್ದರೆ ಐದು ಗ್ಯಾರಂಟಿಗಳನ್ನು ಇಡೀ ದೇಶದ ಎಲ್ಲಾ ರಾಜ್ಯಗಳಲ್ಲಿ ಜಾರಿ ಮಾಡುವ ತೀರ್ಮಾನವನ್ನು ಮಾಡಲಿ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿಗೆ ಸವಾಲು ಹಾಕಿದ್ದಾರೆ.
ಕಲಬುರಗಿ ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, 5 ಗ್ಯಾರಂಟಿಗಳ ಅನುಷ್ಠಾನದ ಬಗ್ಗೆ ಯಾರಿಗೂ ಅಪನಂಬಿಕೆ ಬೇಡ. ವಿರೋಧ ಪಕ್ಷದವರು ಈ ಬಗ್ಗೆ ಗುಲ್ಲೆಬ್ಬಿಸುತ್ತಿದ್ದಾರೆ. ಅವರ ಮಾತು ನಂಬಬೇಡಿ ಎಂದರು.

ವಿರೋಧ ಪಕ್ಷದವರಲ್ಲದೇ ಈ ದೇಶದ ಪ್ರಧಾನಿಗಳು ಕೂಡ ಗ್ಯಾರಂಟಿಗಳನ್ನು ಜಾರಿ ಮಾಡಿದರೆ ರಾಜ್ಯ ದಿವಾಳಿಯಾಗುತ್ತದೆ ಎಂದು ಹೇಳಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗಿಲ್ಲ. ಈ ದೇಶವನ್ನು ದಿವಾಳಿ ಮಾಡಿರುವುದು ನರೇಂದ್ರ ಮೋದಿಯವರು. ಕರ್ನಾಟಕ ಹಿಂದೆ ಎಲ್ಲ ಭರವಸೆಗಳನ್ನು ಈಡೇರಿಸಿದಾಗ ಆರ್ಥಿಕವಾಗಿ ಸುಭದ್ರವಾಗಿತ್ತು. ಬಿಜೆಪಿ ಅಧಿಕಾರದಲ್ಲಿದ್ದಾಗ ರಾಜ್ಯದ ಸಂಪತ್ತನ್ನು ಲೂಟಿ ಮಾಡಿ, ಬೆಲೆ ಏರಿಕೆ ಮಾಡಿ, ನಿರುದ್ಯೋಗದ ಸಮಸ್ಯೆಯನ್ನು ಹೆಚ್ಚು ಮಾಡಿ, ರಾಜ್ಯದ ಬಡವರಿಗೆ, ಹಿಂದುಳಿದವರಿಗೆ, ಅಲ್ಪಸಂಖ್ಯಾತರಿಗೆ ಅನ್ಯಾಯ ಮಾಡಿದ್ದು ಬಿಜೆಪಿ ಸರ್ಕಾರ ಎಂದರು.

ಶಾಸಕರು VS ಸಚಿವರು: ರಾಯರೆಡ್ಡಿ, ಬಿ.ಆರ್‌. ಪಾಟೀಲ್‌ ಬೆನ್ನಲ್ಲೇ ಮತ್ತೊಬ್ಬ ಶಾಸಕ ಅಸಮಾಧಾನ!

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ