
ಹೊಸಪೇಟೆ(ಜು.24): ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಈಗ ಹತಾಶರಾಗಿದ್ದಾರೆ. ಹಾಗಾಗಿ ರಾಜ್ಯ ಸರ್ಕಾರದ ವಿರುದ್ಧ ಸುಖಾಸುಮ್ಮನೆ ಟ್ವೀಟ್ ಮಾಡಿ ಟೀಕೆ ಮಾಡುತ್ತಿದ್ದಾರೆ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ತಿರುಗೇಟು ನೀಡಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗಲೇ ನೈಸ್ ತನಿಖೆ ಮಾಡಬಹುದಿತ್ತಲ್ಲ? ಯಾಕೆ ನೈಸ್ ರಸ್ತೆ ಬಗ್ಗೆ ಈಗ ಮಾತನಾಡ್ತಿದ್ದಾರೆ ಎಂದು ಪ್ರಶ್ನಿಸಿದರು.
ಅರಗಿಸಿಕೊಳ್ಳಲಾಗದ ಮಗನ ಸೋಲು, ರಾಜಕೀಯ ನಿವೃತ್ತಿಯತ್ತ ಆನಂದ ಸಿಂಗ್!
ಬಿಜೆಪಿಯನ್ನು ಒಂದು ಕಾಲದಲ್ಲಿ ಕುಮಾರಸ್ವಾಮಿ ಅವರು ಕಮ್ಯೂನಲ್ ಗ್ರೂಪ್ ಅಂತ ಕರೆದಿದ್ದರು. ಈಗ ಅವರ ಜತೆಗೇ ಇದ್ದಾರೆ, ಜೆಡಿಎಸ್ ಅಂತ ಅವರ ಪಕ್ಷದ ಹೆಸರು ಇದೆ. ಈಗ ಆ ಸೆಕ್ಯುಲರ್ ಅನ್ನೋದನ್ನು ತೆಗೆದು ಬಿಡಲಿ ಎಂದರು.
ಬಿಜೆಪಿ ಹಾಗೂ ಜೆಡಿಎಸ್ನವರು ಇದೀಗ ಒಂದು ನಾಣ್ಯದ ಎರಡು ಮುಖಗಳಂತಾಗಿದ್ದಾರೆ. ವಿಧಾನಸಭೆ ಹಾಗೂ ವಿಧಾನಪರಿಷತ್ನಲ್ಲಿ ಒಬ್ಬ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗದಷ್ಟುಪ್ರತಿಪಕ್ಷಗಳು ಹೀನಾಯ ಸ್ಥಿತಿಗೆ ತಲುಪಿವೆ. ಕರ್ನಾಟಕದ ಕಾಂಗ್ರೆಸ್ ಗೆಲುವು ದೆಹಲಿಯವರೆಗೆ ತಲುಪಲಿದೆ. ಎಷ್ಟೇ ತಿಪ್ಪರಲಾಗ ಹಾಕಿದರೂ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.