ಪ್ರಲ್ಹಾದ್ ಜೋಶಿಗೆ ಸಿಎಂ ಪಟ್ಟಕಟ್ಟಲು ಲಿಂಗಾಯತರ ಕಡೆಗಣನೆ: ಎಸ್ ಎಂ ಪಾಟೀಲ

By Kannadaprabha NewsFirst Published Apr 26, 2023, 12:22 AM IST
Highlights

ಜೋಶಿ ಅವರಿಗೆ ಪಟ್ಟಕಟ್ಟುವ ಉದ್ದೇಶದಿಂದ ಬಿಜೆಪಿ ಲಿಂಗಾಯತರನ್ನು ಕಡೆಗಣಿಸುತ್ತಿದ್ದು, ಸಾರ್ವಜನಿಕವಾಗಿ ಲಿಂಗಾಯತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿದೆ ಎಂದು ಕಾಂಗ್ರೆಸ್‌ ವಕ್ತಾರ ಎಸ್‌.ಎಂ.ಪಾಟೀಲ ಗಣಿಹಾರ ಬಿಜೆಪಿ ವರಿಷ್ಠರ ವಿರುದ್ಧ ಹರಿಹಾಯ್ದರು.

ವಿಜಯಪುರ (ಏ.25): ಜೋಶಿ ಅವರಿಗೆ ಪಟ್ಟಕಟ್ಟುವ ಉದ್ದೇಶದಿಂದ ಬಿಜೆಪಿ ಲಿಂಗಾಯತರನ್ನು ಕಡೆಗಣಿಸುತ್ತಿದ್ದು, ಸಾರ್ವಜನಿಕವಾಗಿ ಲಿಂಗಾಯತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿದೆ ಎಂದು ಕಾಂಗ್ರೆಸ್‌ ವಕ್ತಾರ ಎಸ್‌.ಎಂ.ಪಾಟೀಲ ಗಣಿಹಾರ ಬಿಜೆಪಿ ವರಿಷ್ಠರ ವಿರುದ್ಧ ಹರಿಹಾಯ್ದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರ ಮೇಲೆ ಬಿಜೆಪಿ ನಾಯಕರು ಲಿಂಗಾಯತ ವಿರೋಧಿ ಎಂದು ಟೀಕಾ ಪ್ರಹಾರ ಮಾಡುತ್ತಿದ್ದಾರೆ. ಆದರೆ, ಸಿದ್ದರಾಮಯ್ಯ ಅವರು ಬಸವಣ್ಣನವರ ಆದ್ಯ ಭಕ್ತರು. ಬಸವ ತತ್ವದ ಮೇಲೆ ಆಡಳಿತ ನಡೆಸಿದ ಮಹಾನ್‌ ನಾಯಕ ಎಂದು ಸಮರ್ಥಿಸಿಕೊಂಡರು.

Latest Videos

 

ಲಿಂಗಾಯತರು ಪಕ್ಷ ಬಿಟ್ಟು ಹೋಗಲ್ಲ, ಅವರೇ ಬಿಜೆಪಿಯ ಭದ್ರಕೋಟೆ: ಸಿಸಿ ಪಾಟೀಲ

ಬಿಜೆಪಿ ಕಟ್ಟಿದ ಬಿ.ಬಿ.ಶಿವಪ್ಪ ಕಡೆಗಣನೆ, ಬಿ.ಎಸ್‌.ಯಡಿಯೂರಪ್ಪ ಅವರನ್ನು ಅವಧಿ ಪೂರ್ವ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ್ದು ಬಿಜೆಪಿಯೇ. ಇದು ಲಿಂಗಾಯತರಿಗೆ ಅವಹೇಳನ ಮಾಡಿದಂತೆ ಆಗುವುದಿಲ್ಲವೇ? ಬಿ.ಎಸ್‌.ಯಡಿಯೂರಪ್ಪನವರಿಗೆ ಕಣ್ಣೀರು ಹಾಕಿಸಿದ್ದು ಲಿಂಗಾಯತರಿಗೆ ಮಾಡಿದ ಅವಮಾನವಲ್ಲವೇ? ಎಂದು ಪ್ರಶ್ನಿಸಿದರು.

ಬಿ.ಎಸ್‌.ಯಡಿಯೂರಪ್ಪ(BS Yadiyurappa) ಅವರನ್ನು ಕೆಳಗಿಳಿಸಿ ಪ್ರಹ್ಲಾದ ಜೋಶಿ (Pralhad joshi)ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಪ್ರತಿಷ್ಠಾಪಿಸಲು ಬಿಜೆಪಿ ಎಲ್ಲ ಕಾರ್ಯ ಯೋಜನೆ ರೂಪಿಸಿತ್ತು. ಅನೇಕರು ಜೋಶಿ ಅವರಿಗೆ ಅಭಿನಂದನೆ ಸಲ್ಲಿಸಿದರು. ಆದರೆ ಲಿಂಗಾಯತ ಮಠಾಧೀಶರ ವಿರೋಧದಿಂದಾಗಿ ಹೆದರಿ ಬೊಮ್ಮಾಯಿ ಅವರಿಗೆ ಮುಖ್ಯಮಂತ್ರಿ ಹುದ್ದೆ ನೀಡಿತು ಎಂದರು.

ಬೇರೆ ಪಕ್ಷದ ಶಾಸಕರನ್ನು ಸೆಳೆದು ಬಿ.ಎಸ್‌.ಯಡಿಯೂರಪ್ಪ ಮುಖ್ಯಮಂತ್ರಿ ಆದರು. ಅಧಿಕಾರಕ್ಕೆ ಬರುವವರೆಗೂ ಅವರನ್ನು ಮುಖ್ಯಮಂತ್ರಿಯಾಗಿಸಿ, ನಂತರ ಕೆಳಗಳಿಸಿದ್ದು ಅನ್ಯಾಯವಲ್ಲವೇ? ಕಾರಣವಿಲ್ಲದೇ ಅವರನ್ನು ಅಧಿಕಾರದಿಂದ ಕೆಳಗಿಳಿಸಿದ ಕುರಿತು ಇಲ್ಲಿಯವರೆಗೂ ಬಿಜೆಪಿ ಹೈಕಮಾಂಡ್‌ ಸ್ಪಷ್ಟೀಕರಣ ನೀಡಿಲ್ಲವೇಕೆ? ಎಂದು ಪ್ರಶ್ನಿಸಿದರು.

ಪಕ್ಷ ಕಟ್ಟಿದ ಜಗದೀಶ ಶೆಟ್ಟರ್‌, ಡಿಸಿಎಂ ಆಗಿದ್ದ ಲಕ್ಷ್ಮಣ ಸವದಿ ಅವರಿಗೆ ಪಕ್ಷ ಬಿಡುವ ವಾತಾವರಣ ನಿರ್ಮಿಸಿದ್ದು ಲಿಂಗಾಯತರ ಕಡೆಗಣನೆ ಅಲ್ಲವೇ? ಲಿಂಗಾಯತರನ್ನು ಕಡೆಗಣಿಸಿದ್ದು ಬಿಜೆಪಿ ಎಂದು ಘಂಟಾಘೋಷವಾಗಿ ಹೇಳಬಲ್ಲೆ ಎಂದು ಹೇಳಿದರು.

ಕಾಂಗ್ರೆಸ್‌ ಪಕ್ಷ ಲಿಂಗಾಯತರನ್ನು ಅತ್ಯಂತ ಗೌರವದಿಂದ ಕಂಡಿದೆ. ಅಧಿಕಾರ ನೀಡಿ ಗೌರವಿಸಿದೆ. ಕಾಂಗ್ರೆಸ್‌ ಕಟ್ಟುವಲ್ಲಿ ಲಿಂಗಾಯತ, ಒಕ್ಕಲಿಗ, ಅಲ್ಪಸಂಖ್ಯಾತ, ದಲಿತರ ಒಗ್ಗಟ್ಟಿನ ಹೋರಾಟವಿದೆ. ಲಿಂಗಾಯತರ ಸಹಭಾಗಿತ್ವ ಪಕ್ಷದಲ್ಲಿ ಪ್ರಮುಖವಾಗಿದೆ ಎಂದು ಪಾಟೀಲ ಹೇಳಿದರು.

ಸಮುದಾಯ ಅವಹೇಳನ ಮಾಡಿಲ್ಲ:

ಇರುವ ಲಿಂಗಾಯತ ಮುಖ್ಯಮಂತ್ರಿ ಭ್ರಷ್ಟರು ಇದ್ದಾರೆ ಎಂದು ಬೊಮ್ಮಾಯಿ ಅವರನ್ನುದ್ದೇಶಿಸಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರೇ ಹೊರತು ಲಿಂಗಾಯತ ಸಮುದಾಯಕ್ಕೆ ಎಲ್ಲಿಯೂ ಅವಹೇಳನ ಮಾಡಿಲ್ಲ ಎಂದರು. ಬಿ.ಎಲ….ಸಂತೋಷ ಅವರಿಗೆ ಕೇವಲ ಮತೀಯ ಭಾವನೆ ಕೆರಳಿಸುವುದು ಮಾತ್ರ ಗೊತ್ತಿದೆ ಹೊರತು ಜನರ ಮಧ್ಯೆ ಬೆಳೆದು ಬಂದಿಲ್ಲ ಎಂದರು.

ಲಿಂಗಾಯತ ಸಿಎಂ: ಬಿಜೆಪಿ-ಕಾಂಗ್ರೆಸ್‌ ನಾಯಕರ ನಡುವೆ ಜಟಾಪಟಿ

ಕಾಂಗ್ರೆಸ್‌ ಮುಖಂಡ ಡಾ.ರವಿ ಬಿರಾದಾರ ಮಾತನಾಡಿ, ಮೀಸಲಾತಿ ಹೆಸರಿನಲ್ಲಿ ಒಕ್ಕಲಿಗ, ಲಿಂಗಾಯತ, ಮುಸ್ಲಿಂರಿಗೆ ಬಿಜೆಪಿ ಮೋಸ ಮಾಡುವ ಕಾರ್ಯದಲ್ಲಿ ತೊಡಗಿಕೊಂಡಿದೆ ಎಂದು ಆರೋಪಿಸಿದರು.

ಕೃಷ್ಣಾ ಕಾಡಾ ಮಾಜಿ ಅಧ್ಯಕ್ಷ ಜಕ್ಕಪ್ಪ ಯಡವೆ, ಅಹಿಂದ ಮುಖಂಡರಾದ ಅಡಿವೆಪ್ಪ ಸಾಲಗಲ್ಲ, ನಾಗರಾಜ ಲಂಬು, ಫಯಾಜ್‌ ಕಲಾದಗಿ, ವಸಂತ ಹೊನಮೋಡೆ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

click me!