ಗ್ಯಾರಂಟಿ ಯೋಜನೆಯಿಂದ ಮದ್ಯದ ದರ ಹೆಚ್ಚಳ: ಅಲ್ಕೋಡ್‌ ಹನಮಂತಪ್ಪ

Published : Apr 28, 2024, 12:26 PM IST
ಗ್ಯಾರಂಟಿ ಯೋಜನೆಯಿಂದ ಮದ್ಯದ ದರ ಹೆಚ್ಚಳ: ಅಲ್ಕೋಡ್‌ ಹನಮಂತಪ್ಪ

ಸಾರಾಂಶ

₹100 ಇದ್ದ ಮದ್ಯದ ದರ ₹ 250 ಆಗಿದೆ, ಮದ್ಯಪ್ರಿಯ ಅಣ್ತಮ್ಮಂದಿರು ಕುಡಿಯೋದು ಬಿಟ್ಟು ಸರ್ಕಾರಕ್ಕೆ ಹಿಡಿ‌ಶಾಪ ಹಾಕುತ್ತಿದ್ದಾರೆ. ಯಾಕೆ ಬೇಕು ಇಂಥ ಕೆಟ್ಟ ಸರ್ಕಾರ ಎನ್ನುತ್ತಿದ್ದಾರೆ: ಅಲ್ಕೋಡ್‌ ಹನಮಂತಪ್ಪ 

ಗದಗ(ಏ.28):  ಕಾಂಗ್ರೆಸ್‌ ಸರ್ಕಾರ ಮಾತೆತ್ತಿದರೆ ಗ್ಯಾರಂಟಿ ಎನ್ನುತ್ತಿದೆ. ಇವರ ಗ್ಯಾರಂಟಿಗೆ ಮದ್ಯದ ದರ ಹೆಚ್ಚಿಸಿದ್ದರಿಂದ ಮದ್ಯ ಸೇವನೆ ಮಾಡಲು ಜನರು ಪರದಾಡುವಂತಾಗಿದೆ ಎಂದು ಮಾಜಿ ಸಚಿವ, ಜೆಡಿಎಸ್ ಹಿರಿಯ ಮುಖಂಡ ಅಲ್ಕೋಡ್‌ ಹನಮಂತಪ್ಪ ಲೇವಡಿ ಮಾಡಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ₹100 ಇದ್ದ ಮದ್ಯದ ದರ ₹ 250 ಆಗಿದೆ, ಮದ್ಯಪ್ರಿಯ ಅಣ್ತಮ್ಮಂದಿರು ಕುಡಿಯೋದು ಬಿಟ್ಟು ಸರ್ಕಾರಕ್ಕೆ ಹಿಡಿ‌ಶಾಪ ಹಾಕುತ್ತಿದ್ದಾರೆ. ಯಾಕೆ ಬೇಕು ಇಂಥ ಕೆಟ್ಟ ಸರ್ಕಾರ ಎನ್ನುತ್ತಿದ್ದಾರೆ.
ಗ್ಯಾರಂಟಿ ಯೋಜನೆ ಜಾರಿ ಮಾಡಿ ಬಡವರ ಕುಟುಂಬದಲ್ಲಿ ನೆಮ್ಮದಿ ಹಾಳು ಮಾಡಿದ್ದಾರೆ, ₹ 2 ಸಾವಿರದಲ್ಲಿ ನಿನಗೊಂದು ಸಾವಿರ ನನಗೊಂದು ಸಾವಿರ ಅಂತ ಗಂಡ-ಹೆಂಡತಿ ಜಗಳ ಆಡುತ್ತಿದ್ದಾರೆ. ಇಂಥ ಪರಿಸ್ಥಿತಿ ಕರ್ನಾಟಕದಲ್ಲಿ ಕಾಂಗ್ರೆಸ್ ತಂದಿಟ್ಟಿದೆ ಎಂದರು.

ಮೋದಿ ಗ್ಯಾರಂಟಿ-ಶಾಶ್ವತ ಗ್ಯಾರಂಟಿ, ಬಡತನ ನಿರ್ಮೂಲನೆಯೇ ನಮ್ಮ ಗುರಿ: ಬೊಮ್ಮಾಯಿ

ಸುದ್ದಿಗೋಷ್ಟಿಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಜಣ್ಣ ಕುರುಡಗಿ, ಅನಿಲ ಅಬ್ಬಿಗೇರಿ, ಬಸವರಾಜ ಅಪ್ಪಣ್ಣವರ, ಎಂ.ಎಸ್.ಕರಿಗೌಡ್ರ, ಅಶೋಕ ಸಂಕಣ್ಣವರ, ಮುಧೋಳ, ಈರಣ್ಣ ಬಾಳಿಕಾಯಿ, ಎಂ.ಎಸ್. ಪರ್ವತಗೌಡ್ರ, ಮಂಜುಳಾ ಮೇಟಿ ಮುಂತಾದವರು ಹಾಜರಿದ್ದರು.

ಗ್ಯಾರಂಟಿ ಯೋಜನೆಯಿಂದ ಶಾಲಾ ಕಾಲೇಜುಗಳಿಗೆ ಹೋಗುವ ಮಕ್ಕಳಿಗೆ ತೀವ್ರ ತೊಂದರೆಯಾಗಿದೆ. ಸಾಕಷ್ಟು ವಿದ್ಯಾರ್ಥಿಗಳು ಕೈ ಕಾಲು ಮುರಿದುಕೊಂಡಿದ್ದಾರೆ. ನೀವು ಯೋಜನೆ ಜಾರಿ ಮಾಡಿ, ಆದರೆ ಹೆಚ್ಚಿನ ಹೊಸ ಬಸ್ ಕೊಡಿ, ಗಂಡು ಮಕ್ಕಳು ಹಣ ಕೊಟ್ಟರೂ ಬಸ್ ನಲ್ಲಿ ಸಂಚರಿಸಲು ಸಾಧ್ಯವಿಲ್ಲದಂತ ಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗಿದೆ‌ ಎಂದು ಅಲ್ಕೋಡ ಆಕ್ರೋಶ ವ್ಯಕ್ತ ಪಡಿಸಿದರು.

ದಲಿತ ಸಂಘಟನೆಗಳು ಕಾಂಗ್ರೆಸ್ ಬೆಂಬಲಿಸಬೇಕು ಎಂದು ಹೇಳುತ್ತಿರುವುದು ಹಾಸ್ಯಾಸ್ಪದ ಸಂಗತಿ, ಕಾಂಗ್ರೆಸ್ ದಲಿತರನ್ನು ಇದುವರೆಗೂ ಓಟ್ ಬ್ಯಾಂಕ್ ಆಗಿ ಬಳಸಿಕೊಂಡಿದೆ. ಆದರೆ ಯಾರಾದರೂ ಒಬ್ಬ ದಲಿತ ನಾಯಕನನ್ನು ಅವರು ಬೆಳೆಸಿದ್ದಾರಾ ಅಥವಾ ಬೆಳೆಯಲು ಬಿಟ್ಟಿದ್ದಾರಾ? ಎಂದು ಅಲ್ಕೋಡ ಹನಮಂತಪ್ಪ ಪ್ರಶ್ನಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!