ಮನೆಯಿಂದ ಮತ ಚಲಾಯಿಸಿದ ಅಡ್ವಾಣಿ, ಮನಮೋಹನ್ ಸಿಂಗ್

Published : May 19, 2024, 08:00 AM IST
ಮನೆಯಿಂದ ಮತ ಚಲಾಯಿಸಿದ ಅಡ್ವಾಣಿ, ಮನಮೋಹನ್ ಸಿಂಗ್

ಸಾರಾಂಶ

80 ವರ್ಷ ಮೇಲ್ಪಟ್ಟವರಿಗೆ ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ಮನೆಯಿಂದಲೇ ಮತದಾನ ಯೋಜನೆ ಅಡಿಯಲ್ಲಿ ದೆಹಲಿಯ ಮತದಾರರಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಮಾಜಿ ಉಪಪ್ರಧಾನಿ ಎಲ್‌.ಕೆ ಅಡ್ವಾಣಿ ಶನಿವಾರ ತಮ್ಮ ಮನೆಗಳಲ್ಲಿಯೇ ಮತ ಚಲಾಯಿಸಿದ್ದಾರೆ. 

ನವದೆಹಲಿ: 80 ವರ್ಷ ಮೇಲ್ಪಟ್ಟವರಿಗೆ ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ಮನೆಯಿಂದಲೇ ಮತದಾನ ಯೋಜನೆ ಅಡಿಯಲ್ಲಿ ದೆಹಲಿಯ ಮತದಾರರಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಮಾಜಿ ಉಪಪ್ರಧಾನಿ ಎಲ್‌.ಕೆ ಅಡ್ವಾಣಿ ಶನಿವಾರ ತಮ್ಮ ಮನೆಗಳಲ್ಲಿಯೇ ಮತ ಚಲಾಯಿಸಿದ್ದಾರೆ. 

ಸಿಂಗ್ ಮತ್ತು ಅಡ್ವಾಣಿಯವರಂತೆಯೇ , ಮಾಜಿ ಉಪ ಪ್ರಧಾನಿ ಮೊಹಮ್ಮದ್ ಹಮೀದ್ ಅನ್ಸಾರಿ ಮತ್ತು ಕೇಂದ್ರದ ಮಾಜಿ ಸಚಿವ ಮುರುಳಿ ಮನೋಹರ್ ಜೋಷಿ ಕೂಡ ದೆಹಲಿಯಲ್ಲಿ ತಮ್ಮ ನಿವಾಸದಲ್ಲಿಯೇ ಮತ ಚಲಾಯಿಸಿದ್ದಾರೆ. ದೆಹಲಿಯಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೇ.25ರಂದು ಮತದಾನ ನಡೆಯಲಿದೆ

ಆಂಧ್ರಪ್ರದೇಶದಲ್ಲಿ ಚುನಾವಣೆ ಮುಗಿದ ಬೆನ್ನಲ್ಲೇ ತಿರುಪತಿಯಲ್ಲಿ ಭಕ್ತ ಪ್ರವಾಹ 

ನಾಳೆ 5 ನೇ ಹಂತದ ಚುನಾವಣೆ

ಲೋಕಸಭೆಯ 5ನೇ ಹಂತದ ಚುನಾವಣೆ ಮೇ 20 ರಂದು ನಡೆಯಲಿದೆ. ಈ ಹಂತದಲ್ಲಿ 8 ರಾಜ್ಯಗಳ 49 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಒಟ್ಟು 695 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಶನಿವಾರಕ್ಕೆ ಅಂತ್ಯವಾಗಿದೆ.

ಉತ್ತರ ಪ್ರದೇಶದ 14 ಕ್ಷೇತ್ರಗಳು, ಮಹಾರಾಷ್ಟ್ರದ 13, ಪಶ್ಚಿಮ ಬಂಗಾಳದ 7, ಬಿಹಾರದ 5, ಒಡಿಶಾದ 5, ಜಾರ್ಖಂಡ್‌ 3 ಹಾಗೂ ಲಡಾಖ್‌ ಹಾಗೂ ಜಮ್ಮ ಮತ್ತು ಕಾಶ್ಮೀರದಲ್ಲಿ ತಲಾ ಒಂದು ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

ರಾಹುಲ್‌ ಗಾಂಧಿ ಹಿಡಿದಿರುವುದು ಭಾರತ ಅಲ್ಲ, ಚೀನಾ ಸಂವಿಧಾನ ಪುಸ್ತಕ : ಹಿಮಂತ

ರಾಹುಲ್ ಗಾಂಧಿ, ಸ್ಮೃತಿ ಇರಾನಿ, ಲಾಲು ಪ್ರಸಾದ್‌, ರಾಜ್‌ನಾಥ್‌ ಸಿಂಗ್‌, ಓಮರ್‌ ಅಬ್ದುಲ್ಲಾ, ಪಿಯೂಷ್‌ ಗೋಯಲ್‌, ರಾಜೀವ್‌ ಪ್ರತಾಪ್ ರೂಢಿ, ರೋಹಿಣಿ ಅಚಾರ್ಯ, ಚಿರಾಸ್‌ ಪಾಸ್ವಾನ್‌, ಸೇರಿದಂತೆ ಹಲವು ಅಭ್ಯರ್ಥಿಗಳು ಕಣದಲ್ಲಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಒಂದೇ ಕಾರಲ್ಲಿ ಪ್ರಯಾಣಿಸಿದ ಖರ್ಗೆ, ಡಿಕೆಶಿ: ತೀವ್ರ ರಾಜಕೀಯ ಕುತೂಹಲ
Karnataka News Live: BBK 12 - ಕಿಚ್ಚ ಸುದೀಪ್‌ ಮುಂದೆ ರೇಷ್ಮೆ ಶಾಲಿನಲ್ಲಿ ಹೊಡೆದಂತೆ ಸತ್ಯದರ್ಶನ ಮಾಡಿಸಿದ ಗಿಲ್ಲಿ ನಟ