
ತಿರುವನಂತಪುರ (ಏ.15): ರಾಷ್ಟ್ರಪ್ರಶಸ್ತಿ ವಿಜೇತ ನಟಿ ಹಾಗೂ ಖ್ಯಾತ ಶಾಸ್ತ್ರೀಯ ನೃತ್ಯಗಾರ್ತಿ ಶೋಭನಾ ಭಾನುವಾರ ತಿರುವನಂತಪುರದ ಬಿಜೆಪಿ ಅಭ್ಯರ್ಥಿ ರಾಜೀವ್ ಚಂದ್ರಶೇಖರ್ ಅವರಿಗೆ ಬೆಂಬಲ ವ್ಯಕ್ತಪಡಿಸಿದರು.
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ತಿರುವನಂತಪುರಂನಲ್ಲಿ ರಾಜೀವ್ ತಮ್ಮ ಅದೃಷ್ಟ ಪರೀಕ್ಷಿಸಿಕೊಳ್ಳುತ್ತಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ನಾವು ಅವರ ಬೆಂಬಲಕ್ಕೆ ನಿಲ್ಲುತ್ತಿರುವುದು ವಿಶೇಷ ಎಂದರು. ಇಲ್ಲಿ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸುವ ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸಲಾಗಿದೆ ಎಂದರು.
ಶೋಭನಾ ಅವರ ಬೆಂಬಲಕ್ಕೆ ರಾಜೀವ್ ಸಂತೋಷ ವ್ಯಕ್ತಪಡಿಸಿದ್ದು, ‘ಮಣಿಚಿತ್ರತಾಳು’ ಚಿತ್ರದ ನಟಿ ಸ್ಫೂರ್ತಿದಾಯಕ ತಾರೆ ಎಂದು ಶ್ಲಾಘಿಸಿದರು.
ನನ್ನ ಮೊದಲ ಲೋಕಸಭಾ ಚುನಾವಣೆಗೆ ಎದುರು ನೋಡುತ್ತಿದ್ದೇನೆ: ರಾಜೀವ್ ಚಂದ್ರಶೇಖರ್
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.