ಗೆದ್ದರೆ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸುತ್ತೇನೆ; 'ಹಿಂದಿ ಬರೊಲ್ಲ' ಎಂದ ಹೆಗ್ಡೆಗೆ ಕೋಟ ಶ್ರೀನಿವಾಸ ತಿರುಗೇಟು!

Published : Mar 24, 2024, 07:58 PM IST
ಗೆದ್ದರೆ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸುತ್ತೇನೆ; 'ಹಿಂದಿ ಬರೊಲ್ಲ' ಎಂದ ಹೆಗ್ಡೆಗೆ ಕೋಟ ಶ್ರೀನಿವಾಸ ತಿರುಗೇಟು!

ಸಾರಾಂಶ

ನಾನು ಪ್ರಮಾಣವಚನವನ್ನು ಕನ್ನಡದಲ್ಲೆ ತೆಗೆದುಕೊಳ್ಳುತ್ತೇನೆ. ಸದನಕ್ಕೆ ಪ್ರವೇಶ ಮಾಡಿದ ಆರು ತಿಂಗಳಲ್ಲಿ ಹಿಂದಿ ಕಲಿಯುತ್ತೇನೆ. ಹೆಗ್ಡೆಯವರಿಗೆ ಸಮಾಧಾನ ಆಗುವಷ್ಟು ಹಿಂದಿಯಲ್ಲಿ ಭಾಷಣ ಮಾಡಿ ಬರುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಚಾಲೆಂಜ್ ಮಾಡಿದರು.

ಚಿಕ್ಕಮಗಳೂರು (ಮಾ.24): ನಾನೊಬ್ಬ ಸಾಮಾನ್ಯ ಬಡ ಕೂಲಿ ಮಾಡುವ ಕುಟುಂಬದಲ್ಲಿ ಹುಟ್ಟಿದವನು. ಹಾಗಾಗಿ ಜಯಪ್ರಕಾಶ್ ಹೆಗ್ಡೆಯಷ್ಟು ಹಿಂದಿ, ಇಂಗ್ಲಿಷ್ ಮಾತಾಡಲು ನನಗೆ ಬರೊಲ್ಲ ಎಂದು ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

'ಕೋಟ ಶ್ರೀನಿವಾಸ ಪೂಜಾರಿಗೆ ಹಿಂದಿ ಬರೊಲ್ಲ' ಎಂಬ ಜಯಪ್ರಕಾಶ್ ಹೆಗ್ಡೆ ಹೇಳಿಕೆ ಸಂಬಂಧ ಬಾಳೆಹೊನ್ನೂರಿನ ರಂಭಾಪುರಿ ಪೀಠದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನನಗೆ ಹಿಂದಿ ಬರೊಲ್ಲ ಎಂದು ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ‌. ಹೆಗ್ಡೆಯವರು ನನ್ನ ಮೇಲಿನ ಅಭಿಮಾನ, ಪ್ರೀತಿಯಿಂದ ಮುಂದೆ ಮುಜುಗರ ಆಗಬಾರದು ಎಂಬ ದೃಷ್ಟಿಯಿಂದ ಹಾಗೆ ಹೇಳಿದ್ದಾರೆ ಎಂದರು. 

ವ್ಯಕ್ತಿಗತವಾಗಿ ಯಾವತ್ತೂ ಮೋದಿಗೆ ಬೈದಿಲ್ಲ, ಕೇಳಿದ ಪ್ರಶ್ನೆಗೆ ಉತ್ತರ ಕೊಡಲಾಗದೆ ದಿಕ್ಕು ತಪ್ಪಿಸುತ್ತಿದ್ದಾರೆ: ಸಂತೋಷ್ ಲಾಡ್

ನಾನು ಹೆಗ್ಡೆಯವರಿಗೆ ಮನವಿ ಮಾಡುತ್ತೇನೆ. ಹೆಗ್ಡೆಯವರಿಗೆ ನನ್ನ ಮೇಲಿನ ಪ್ರೀತಿ ಅರ್ಥವಾಗಿದೆ. ನಾನು ಪ್ರಮಾಣವಚನವನ್ನು ಕನ್ನಡದಲ್ಲೆ ತೆಗೆದುಕೊಳ್ಳುತ್ತೇನೆ. ಸದನಕ್ಕೆ ಪ್ರವೇಶ ಮಾಡಿದ ಆರು ತಿಂಗಳಲ್ಲಿ ಹಿಂದಿ ಕಲಿಯುತ್ತೇನೆ. ಹೆಗ್ಡೆಯವರಿಗೆ ಸಮಾಧಾನ ಆಗುವಷ್ಟು ಹಿಂದಿಯಲ್ಲಿ ಭಾಷಣ ಮಾಡಿ ಬರುತ್ತೇನೆ ಎಂದು ಚಾಲೆಂಜ್ ಮಾಡಿದರು.

ಕಾಂಗ್ರೆಸ್ ಪಕ್ಷ ಒಂದು ಕುಟುಂಬದ ಕೈಯಲ್ಲಿದೆ ಅಂತಾ ಮೋದಿ ಹೇಳ್ತಾರೆ, ಆದ್ರೆ ರಾಜ್ಯ ಬಿಜೆಪಿ ಯಾರ ಕೈಯಲ್ಲಿದೆ? ಈಶ್ವರಪ್ಪ ವಾಗ್ದಾಳಿ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನಾನು ಹತ್ತು ಲಕ್ಷದ ವಾಚಾದ್ರೂ ಕಟ್ಟುತ್ತೇನೆ, ಅದು ನನ್ನ ಆಸ್ತಿ: ಬಿಜೆಪಿಗೆ ತಿರುಗೇಟು ಕೊಟ್ಟ ಡಿಕೆಶಿ
ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!