Lok Sabha Election 2024: ಸುದೀರ್ಘ ಸಭೆ ನಡೆಸಿದ ಬಿ.ಎಸ್‌.ಯಡಿಯೂರಪ್ಪ ಆ್ಯಂಡ್ ಟೀಮ್

Published : Mar 17, 2024, 05:23 AM IST
Lok Sabha Election 2024: ಸುದೀರ್ಘ ಸಭೆ ನಡೆಸಿದ ಬಿ.ಎಸ್‌.ಯಡಿಯೂರಪ್ಪ ಆ್ಯಂಡ್ ಟೀಮ್

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಅವರ ಕಲಬುರಗಿ ಕಾರ್ಯಕ್ರಮ ಮುಗಿಸಿಕೊಂಡು ಒಂದೇ ವಿಮಾನದಲ್ಲಿ ಹುಬ್ಬಳ್ಳಿಗೆ ಆಗಮಿಸಿದ ಮಾಜಿ ಸಿಎಂಗಳಾದ ಬಿ.ಎಸ್‌.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹಾಗೂ ವಿಧಾನಪರಿಷತ್‌ ಸದಸ್ಯ ಎನ್‌. ರವಿಕುಮಾರ ವಿಮಾನ ನಿಲ್ದಾಣದ ಲಾಂಜ್‌ನಲ್ಲೇ ಕೆಲಕಾಲ ಸಭೆ ನಡೆಸಿದರು.  

ಹುಬ್ಬಳ್ಳಿ (ಮಾ.17): ಪ್ರಧಾನಿ ನರೇಂದ್ರ ಮೋದಿ ಅವರ ಕಲಬುರಗಿ ಕಾರ್ಯಕ್ರಮ ಮುಗಿಸಿಕೊಂಡು ಒಂದೇ ವಿಮಾನದಲ್ಲಿ ಹುಬ್ಬಳ್ಳಿಗೆ ಆಗಮಿಸಿದ ಮಾಜಿ ಸಿಎಂಗಳಾದ ಬಿ.ಎಸ್‌.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹಾಗೂ ವಿಧಾನಪರಿಷತ್‌ ಸದಸ್ಯ ಎನ್‌. ರವಿಕುಮಾರ ವಿಮಾನ ನಿಲ್ದಾಣದ ಲಾಂಜ್‌ನಲ್ಲೇ ಕೆಲಕಾಲ ಸಭೆ ನಡೆಸಿದರು.

ಲೋಕಸಭೆ ಚುನಾವಣೆಯಲ್ಲಿ ಪಕ್ಷ ಕೈಗೊಳ್ಳಬೇಕಾಗಿದ್ದ ತಂತ್ರ- ಪ್ರತಿತಂತ್ರಗಾರಿಕೆ ಬಗ್ಗೆ ಚರ್ಚೆ ನಡೆಸಲಾಯಿತು. ಇದೇ ವೇಳೆ ಅಸಮಾಧಾನಗೊಂಡಿರುವ ಕೆ.ಎಸ್‌. ಈಶ್ವರಪ್ಪ ಸೇರಿದಂತೆ ಮತ್ತಿತರರ ಸಮಾಧಾನಪಡಿಸುವ ಕುರಿತಂತೆಯೂ ಸಮಾಲೋಚನೆ ನಡೆಸಿದರು. ಜಗದೀಶ ಶೆಟ್ಟರ್‌ ಟಿಕೆಟ್‌ ಹಂಚಿಕೆ ಕುರಿತು ಚರ್ಚೆ ನಡೆಯಿತು ಎಂದು ಮೂಲಗಳು ತಿಳಿಸಿವೆ.

ವರಿಷ್ಠರು ಸೂಚನೆ ನೀಡಿದರೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧ: ಜಗದೀಶ್ ಶೆಟ್ಟರ್‌

ಬಿಎಸ್‌ವೈ ಕಾಲಿಗೆರಗಿದ ಜೋಶಿ: ನಂತರ ಯಡಿಯೂರಪ್ಪ ವಿಮಾನ ನಿಲ್ದಾಣದಿಂದ ಹೊರ ಬಂದು ಕಾರು ಏರಲು ಮುಂದಾದಾಗ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಬಿಎಸ್‌ವೈ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದರು. ಜೋಶಿ ಹಾಗೂ ಬೊಮ್ಮಾಯಿ ಬೆನ್ನು ಚಪ್ಪರಿಸಿ ಯಡಿಯೂರಪ್ಪ ಕಾರು ಏರಿ ಶಿವಮೊಗ್ಗದತ್ತ ಪ್ರಯಾಣ ಬೆಳೆಸಿದರು.

ಉಪಕಾರ ಮಾಡಲು ಹೋದರೆ ಏನಾಗುತ್ತೆ ನೋಡಿ: ನನ್ನ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಕಾನೂನು ರೀತಿ ಎದುರಿಸುತ್ತೇನೆ. ಉಪಕಾರ ಮಾಡಲು ಹೋದರೆ ಏನಾಗುತ್ತದೆ ಎಂಬುದಕ್ಕೆ ಇದು ನಿದರ್ಶನ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. ತಮ್ಮ ನಿವಾಸದ ಬಳಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಒಂದೂವರೆ ತಿಂಗಳ ಹಿಂದೆ ತಾಯಿ ಮಗಳು ಕಣ್ಣೀರು ಹಾಕುವುದನ್ನು ನೋಡಿ ಒಳಗೆ ಕರೆಸಿ ಕೂರಿಸಿ ಸಮಸ್ಯೆ ಆಲಿಸಿದೆ. ಅನ್ಯಾಯ ಆಗಿದೆ ಎಂದು ನೋವು ತೋಡಿಕೊಂಡಿದ್ದರಿಂದ ಪೊಲೀಸ್ ಆಯುಕ್ತರಿಗೆ ಫೋನ್‌ ಮಾಡಿ ನ್ಯಾಯ ಒದಗಿಸುವಂತೆ ತಿಳಿಸಿದೆ. 

ಸಾಮಾನ್ಯರಿಗೆ ಉನ್ನತ ಸ್ಥಾನ ನೀಡುವ ಪಕ್ಷ ಬಿಜೆಪಿ: ಮಾಜಿ ಸಚಿವ ಹಾಲಪ್ಪ ಆಚಾರ್‌

ಆ ಬಳಿಕ ಈ ಮಹಿಳೆ ಇದನ್ನ ಬೇರೆ ರೀತಿ ಮಾಡಿ ದೂರು ದಾಖಲಿಸಿದ್ದಾರೆ. ಕಷ್ಟ ಎಂದಿದ್ದಕ್ಕೆ ಸ್ವಲ್ಪ ಹಣ ಸಹ ಕೊಟ್ಟು ಕಳಿಹಿಸಿದೆ. ಆದರೂ ದೂರು ನೀಡಿದ್ದಾರೆ. ಪ್ರಕರಣವನ್ನು ಕಾನೂನು ರೀತಿ ಎದುರಿಸಲಾಗುವುದು ಎಂದರು. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಯಡಿಯೂರಪ್ಪ, ದೂರು ದಾಖಲಾಗಿರುವ ಹಿಂದೆ ರಾಜಕೀಯ ಪಿತೂರಿ ಇದೆ ಎನ್ನುವ ಆರೋಪವನ್ನು ಮಾಡುವುದಿಲ್ಲ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ