ಲೋಕಸಭೆಗೆ ಭರ್ಜರಿ ಪ್ರಚಾರ ಆರಂಭ: ಮೊಳಗಿದ ಕಾಂಗ್ರೆಸ್ ಪ್ರಜಾಧ್ವನಿ ರಣಕಹಳೆ

Published : Apr 07, 2024, 05:23 AM IST
ಲೋಕಸಭೆಗೆ ಭರ್ಜರಿ ಪ್ರಚಾರ ಆರಂಭ: ಮೊಳಗಿದ ಕಾಂಗ್ರೆಸ್ ಪ್ರಜಾಧ್ವನಿ ರಣಕಹಳೆ

ಸಾರಾಂಶ

ಬಿಜೆಪಿಯವರು ನಮಗೆ ಮೋಸ ಮಾಡಿಬಿಟ್ಟರು. ಮೊದಲು ಅಕ್ಕಿ ಕೊಡುತ್ತೇವೆ ಎಂದಿದ್ದರು. ಆಮೇಲೆ ಕೊಡೋದಿಲ್ಲ ಎಂದು ಹೇಳಿದರು. ಮೋಸ ಮಾಡಿ ಅಕ್ಕಿಯನ್ನೇ ಕೊಡಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರದ ಮೋದಿ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದರು.   

ಕೋಲಾರ/ಮುಳಬಾಗಲು (ಏ.07): ಬಿಜೆಪಿಯವರು ನಮಗೆ ಮೋಸ ಮಾಡಿಬಿಟ್ಟರು. ಮೊದಲು ಅಕ್ಕಿ ಕೊಡುತ್ತೇವೆ ಎಂದಿದ್ದರು. ಆಮೇಲೆ ಕೊಡೋದಿಲ್ಲ ಎಂದು ಹೇಳಿದರು. ಮೋಸ ಮಾಡಿ ಅಕ್ಕಿಯನ್ನೇ ಕೊಡಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರದ ಮೋದಿ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದರು. ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಕುರುಡುಮಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೊತೆ ಶನಿವಾರ ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸಿ, 'ಪ್ರಜಾಧ್ವನಿ 2.0'ಕ್ಕೆ ಚಾಲನೆ ನೀಡುವ ಮೂಲಕ ಕಾಂಗ್ರೆಸ್ ಪ್ರಚಾರಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು. 

ಬಳಿಕ, ತಮ್ಮ ಪ್ರಚಾರ ಭಾಷಣದುದ್ದಕ್ಕೂ ಬಿಜೆಪಿ, ಪ್ರಧಾನಿ ಮೋದಿ ವಿರುದ್ಧ ಟೀಕಾಪ್ರಹಾರ ನಡೆಸಿದ ಸಿಎಂ, ಬಿಜೆಪಿಯವರು ಹೇಳಿದಂತೆ ನಡೆದುಕೊಂಡಿದ್ದಾರಾ? ಮೋದಿ ಹತ್ತು ವರ್ಷಗಳಲ್ಲಿ ನುಡಿದಂತೆ ನಡೆದುಕೊಂಡರಾ? ರೈತರ ಆದಾಯವನ್ನು ದುಪ್ಪಟ್ಟು ಮಾಡುವುದಾಗಿ ಹೇಳಿದ್ದರು. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ದರು. ಆದರೆ, ಯಾವುದನ್ನೂ ಜಾರಿಗೊಳಿಸಿಲ್ಲ ಎಂದರು. 15ನೇ ಹಣಕಾಸು ಆಯೋಗದವರು 5,498 ಕೋಟಿ ವಿಶೇಷ ಅನುದಾನ ಕೊಡ್ತೀವಿ ಅಂದ್ರು, ಕೊಟ್ಟಿಲ್ಲ. ಬರ ಪರಿಹಾರದ ಹಣ ನಯಾಪೈಸೆ ಬಂದಿಲ್ಲ. ಕೇಂದ್ರ ಬಜೆಟ್‌ನಲ್ಲಿ 5,300 ಕೋಟಿ ಕೊಡುವುದಾಗಿ ಹೇಳಿದ್ದರು. 

ಕರ್ನಾಟಕ ದ್ರೋಹಿ ಮೋದಿಗೆ ತಕ್ಕಪಾಠ ಕಲಿಸಿ: ಸಿಎಂ ಸಿದ್ದರಾಮಯ್ಯ ಕರೆ

ಫೆರಿಫೆರಲ್ ರಿಂಗ್ ರೋಡ್ ಹಾಗೂ ಕೆರೆಗಳ ಅಭಿವೃದ್ಧಿಗೆ ತಲಾ 3,000 ಕೋಟಿ ರು. ಕೊಡುವುದಾಗಿ ಹೇಳಿದ್ದರು. ಅದನ್ನೂ ಕೊಡಲಿಲ್ಲ ಎಂದು ಆರೋಪಿಸಿದರು. ಲೋಕಸಭಾ ಚುನಾವಣೆ ಬಳಿಕ ಸರ್ಕಾರ ಪತನ ಎಂಬ ಬಿಜೆಪಿಗರ ಹೇಳಿಕೆಗೆ ಪ್ರತಿಕ್ರಿಯಿಸಿ, ಸರ್ಕಾರಕ್ಕೆ 136 ಶಾಸಕರ ಬೆಂಬಲವಿದೆ. 43% ಮತ ಬಂದಿದೆ. ಬಿಜೆಪಿಗೆ 36% ಮತ ಬಂದಿದ್ದು, 64 ಶಾಸಕರು ಗೆದ್ದಿದ್ದಾರೆ. ಸರ್ಕಾರ ಪತನ ಸಾಧ್ಯನಾ ಎಂದು ಪ್ರಶ್ನಿಸಿದರು. ಬಿಜೆಪಿಯಿಂದಲೇ ಇನ್ನಷ್ಟು ಮುಖಂಡರು ಕಾಂಗ್ರೆಸ್‌ಗೆ ಬರಲಿದ್ದಾರೆ ಎಂದರು.  ಇದೇ ವೇಳೆ, ಜೆಡಿಎಸ್ ವಿರುದ್ಧವೂ ವಾಗ್ದಾಳಿ ನಡೆಸಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಕುಮಾರಸ್ವಾಮಿಯವರು ಬಿಜೆಪಿ ಜೊತೆ ಕೈಜೋಡಿಸಿದ್ದು, ಅವರೂ ಕೋಮುವಾದಿಗಳಾಗುತ್ತಿದ್ದಾರೆ ಎಂದು ಆರೋಪಿಸಿದರು.

ಸಿದ್ದರಾಮಯ್ಯನವರ ಆಡಳಿತಕ್ಕೂ ಅನುಭವಕ್ಕೂ ಬಹಳ ವ್ಯತ್ಯಾಸವಿದೆ: ಬೊಮ್ಮಾಯಿ

ಬೃಹತ್‌ ರೋಡ್ ಶೋ: ಇದಕ್ಕೂ ಮೊದಲು, ಬೆಂಗಳೂರಿನಿಂದ ಹೆಲಿಕಾಪ್ಟ‌ ಮೂಲಕ ಆಗಮಿಸಿದ ಸಿಎಂ, ಕುರುಡುಮಲೆಯ ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ, ಮುಳಬಾಗಿಲಿಗೆ ತೆರಳಿ, ಪಟ್ಟಣದಲ್ಲಿರುವ ಪುರಾತನ ದರ್ಗಾಗೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು. ಬಳಿಕ, ನಗರದ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ತೆರಳಿ, ವಿಶೇಷ ಪೂಜೆ ಸಲ್ಲಿಸಿದರು. ನಂತರ, ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಅಂಬೇಡ್ಕರ್‌ವೃತ್ತದಿಂದ ಸೌಂದರ್ಯ ಸರ್ಕಲ್ ವರೆಗೆ ತೆರೆದ ವಾಹನದಲ್ಲಿ 1 ಕಿಮೀ. ಬೃಹತ್ ರೋಡ್ ಶೋ ನಡೆಸಿದರು. ರೋಡ್ ಶೋನಲ್ಲಿ ವಿವಿಧ ಸಾಂಸ್ಕೃತಿಕ ಕಲಾ ತಂಡಗಳು ಭಾಗಿಯಾಗಿದ್ದವು. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಜಿ.ಪರಮೇಶ್ವರ್, ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್, ಹಲವು ಮುಖಂಡರು ಯಾತ್ರೆಯಲ್ಲಿಎಂ.ಸಿ.ಸುಧಾಕರ್‌ ಸೇರಿದಂತೆ ಪಾಲ್ಗೊಂಡಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ