ಬಿಜೆಪಿ 400 ಸೀಟು ಗೆದ್ದು ಸಂವಿಧಾನ ಬದಲಾಯಿಸುವ ಗುರಿ ಇಟ್ಟುಕೊಂಡಿದೆ: ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ

Published : Mar 31, 2024, 05:12 PM IST
ಬಿಜೆಪಿ 400 ಸೀಟು ಗೆದ್ದು ಸಂವಿಧಾನ ಬದಲಾಯಿಸುವ ಗುರಿ ಇಟ್ಟುಕೊಂಡಿದೆ: ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ

ಸಾರಾಂಶ

ಈ ಚುನಾವಣೆಯಲ್ಲಿ ಬಿಜೆಪಿ 400 ಸೀಟು ಗೆಲ್ಲಬೇಕೆಂದು ಹೊರಟಿದೆ. ಅದಕ್ಕೆ ಕಾರಣ ಏನು ಅನ್ನೋದು ಸಂಸದ ಅನಂತಕುಮಾರ ಹೆಗ್ಡೆ ಬಹಿರಂಗ ಪಡಿಸಿದ್ದಾರೆ ಎಂದು ಯತೀಂದ್ರ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಕಿಡಿಕಾರಿದರು.

ಕೊಡಗು (ಮಾ.31): ಈ ಚುನಾವಣೆಯಲ್ಲಿ ಬಿಜೆಪಿ 400 ಸೀಟು ಗೆಲ್ಲಬೇಕೆಂದು ಹೊರಟಿದೆ. ಅದಕ್ಕೆ ಕಾರಣ ಏನು ಅನ್ನೋದು ಸಂಸದ ಅನಂತಕುಮಾರ ಹೆಗ್ಡೆ ಬಹಿರಂಗ ಪಡಿಸಿದ್ದಾರೆ ಎಂದು ಯತೀಂದ್ರ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಕಿಡಿಕಾರಿದರು.

ಇಂದು ವಿರಾಜಪೇಟೆಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 400 ಸೀಟು ಗೆದ್ದು ದೇಶದ ಸಂವಿಧಾನ ಬದಲಾಯಿಸುವುದು ಗುರಿ ಇಟ್ಟುಕೊಂಡಿದೆ. ಇದು ಆರೆಸ್ಸೆಸ್ ಸಿದ್ಧಾಂತ. ಬಿಜೆಪಿ ಏನಿದ್ದರೂ ಅದರ ಮುಖವಾಡ ಅಷ್ಟೇ. ಆರೆಸ್ಸೆಸ್ 1925 ರಿಂದಲೂ ಸಮಾನತೆ ವಿರೋಧಿ ಕೆಲಸ ಮಾಡುತ್ತಿದೆ. ನಮ್ಮ ದೇಶದಲ್ಲಿ ಸಿಗುತ್ತಿರುವ ಸಮಾನತೆಯನ್ನು ತೆಗೆದು ಹಾಕಬೇಕು ಎನ್ನುವುದು ಆರೆಸ್ಸೆಸ್ ಸಿದ್ಧಾಂತವಾಗಿದೆ ಎಂದರು.

ಸಿದ್ದರಾಮಯ್ಯ ಏನು ಟ್ವೀಟ್ ಮಾಡಿದ್ದಾರೋ ಅದಕ್ಕೆ ಸದ್ಯದಲ್ಲೇ ಉತ್ತರ ಕೊಡ್ತೇನೆ: ಎಚ್‌ಡಿ ದೇವೇಗೌಡ ಗರಂ

ಸಂವಿಧಾನ ಬದಲಾವಣೆ ಮಾಡಿ ಹಿಂದೆ ಸನಾತನ ಧರ್ಮದಲ್ಲಿ ಇದ್ದ ಜಾತಿ ವ್ಯವಸ್ಥೆ ಪುನಃ ಸ್ಥಾಪಿಸಬೇಕು. ಪ್ರಬಲವಾದ ಜಾತಿಗಳು ಮಾತ್ರ ಆಡಳಿತ ನಡೆಸಬೇಕು, ಸಂಪತ್ತು ಅನುಭವಿಸಬೇಕು, ಮಿಕ್ಕವರೆಲ್ಲ ಅವರ ಕೈ ಕೆಳಗೆ ಇರಬೇಕು ಎನ್ನುವುದು ಆರೆಸ್ಸೆಸ್ ಸಿದ್ಧಾಂತವಾಗಿದೆ. ಆದರೆ ಅದಕ್ಕೆ ಅಡ್ಡಿಯಾಗಿರುವುದು ಸಂವಿಧಾನ. ಹೀಗಾಗಿ ಈ ಬಾರಿ 400 ಸೀಟು ಗೆಲ್ಲಲು ಇಷ್ಟೆಲ್ಲ ಪ್ರಯತ್ನ ಮಾಡುತ್ತಿದ್ದಾರೆ. ಈ ಬಾರಿ ಬಿಜೆಪಿ ಗೆದ್ದು ಮತ್ತೆ ಅಧಿಕಾರಕ್ಕೆ ಬಂದರೆ ಮೊದಲು ಅದೇ ಆಗಿರುತ್ತದೆ. ಹಾಗೇನಾದರೂ ಆದರೆ ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಹೋಗಿ ಸರ್ವಾಧಿಕಾರ ಬರುತ್ತದೆ. ಹೀಗಾಗಿ ಈ ಬಾರಿ ಕಾಂಗ್ರೆಸ್ ಬೆಂಬಲಿಸುವಂತೆ ಕರೆ ನೀಡಿದರು.

ಸಂವಿಧಾನ ಬದಲಾವಣೆ ಹೇಳಿಕೆ; ಅನಂತಕುಮಾರ ಹೆಗ್ಡೆಗೆ ಟಿಕೆಟ್ ನೀಡಬೇಡಿ; ಛಲವಾದಿ ನಾರಾಯಣಸ್ವಾಮಿ ಆಗ್ರಹ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಎಂ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್‌ ನೋಟೀಸ್: ವರುಣಾ ಕ್ಷೇತ್ರದ ಆಯ್ಕೆ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ
ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!