
ಬೆಂಗಳೂರು (ಮಾ.24): ಲೋಕಸಭೆ ಟಿಕೆಟ್ ಹಂಚಿಕೆ ವಿಚಾರದಲ್ಲಿ ಹಲವು ನಾಯಕರ ಅಸಮಧಾನ ತಣ್ಣಗಾಗುತ್ತಿಲ್ಲ. ಈ ವಿಚಾರ ಪಕ್ಷಗಳ ನಾಯಕರಿಗೊಂದು ದೊಡ್ಡ ತಲೆ ನೋವಾಗಿ ಪರಿಣಮಿಸಿದೆ. ಇದರ ನಡುವೆ ಹಿರಿಯ ನಾಯಕರೊಬ್ಬರು ಬ್ರಹ್ಮನೇ ಬಂದರೂ ರಾಜಿ ಆಗುವುದಿಲ್ಲ ಎಂದು ಹೇಳಿಕೆ ನೀಡಿ ತಮ್ಮ ಗಟ್ಟಿನಿಲುವನ್ನು ಸ್ಪಷ್ಟಪಡಿಸಿದ್ದಾರೆ.
ಹೀಗಾಗಿ ಅವರನ್ನು ಸಮಾಧಾನ ಪಡಿಸಲು ಹಲವು ಮಾರ್ಗಗಳನ್ನು ಅನ್ಷೇಷಿಸುತ್ತಲೇ ಪಕ್ಷದ ನಾಯಕರು ಮತ್ತೊಂದು ವಿಭಿನ್ನ ಮಾರ್ಗಕ್ಕೆ ಕೈ ಹಾಕಿದ್ದಾರೆ. ದೇವಲೋಕದ ರಂಭೆ, ಊರ್ವಷಿ, ಮೇನಕೆ ಹಾಗೂ ತಿಲೋತ್ತಮೆಯರನ್ನು ಕರೆಸಲು ತೀರ್ಮಾನಿಸಿದ್ದಾರೆ. ಅದಕ್ಕಾಗಿ ತಪೋವನ ನಿರ್ಮಾಣಕ್ಕೆ ಮುಂದಾಗಿದ್ದಾರೆ. ನಿರ್ಮಿಸಿದ ಬಳಿಕ ಕಾರ್ಯಕರ್ತರೆಲ್ಲ ಒಂದಾಗಿ ತಪಸ್ಸು ಮಾಡಲಿದ್ದಾರೆ ಎಂಬ ಸುದ್ದಿ ಸುಳ್ಸುದ್ದಿಗೆ ಲಭಿಸಿದೆ. ಹೀಗಾಗಿ ಇದು ಸುಳ್ಳು ಸುದ್ದಿ ಎಂಬುದು ಸ್ಪಷ್ಟ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.