ಮತಗಟ್ಟೆ ಗೋಡೆ ಮೇಲೆ 'ನಮ್ಮ ಮತ ನಮ್ಮ ಶಕ್ತಿ' ಬರಹ; ತೆಗೆಸಿದ ಬಿಜೆಪಿ ಶಾಸಕ ದಿನಕರ ಶೆಟ್ಟಿ!

Published : May 07, 2024, 04:36 PM ISTUpdated : May 07, 2024, 05:06 PM IST
ಮತಗಟ್ಟೆ ಗೋಡೆ ಮೇಲೆ 'ನಮ್ಮ ಮತ ನಮ್ಮ ಶಕ್ತಿ' ಬರಹ; ತೆಗೆಸಿದ ಬಿಜೆಪಿ ಶಾಸಕ ದಿನಕರ ಶೆಟ್ಟಿ!

ಸಾರಾಂಶ

ಮತಗಟ್ಟೆ ಕೇಂದ್ರದಲ್ಲಿ 'ನಮ್ಮ ಮತ ನಮ್ಮ ಹಕ್ಕು' ಬದಲು 'ನಮ್ಮ ಹಕ್ಕು ನಮ್ಮ ಶಕ್ತಿ' ಬರೆದಿದ್ದಕ್ಕೆ ಚುನಾವಣಾಧಿಕಾರಿಗೆ ಶಾಸಕ ದಿನಕರ ಶೆಟ್ಟಿ ತರಾಟೆಗೆ ತೆಗೆದುಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ಗಿಬ್ ಅಂಗ್ಲಮಾಧ್ಯಮ ಶಾಲೆಯ ಮತಗಟ್ಟೆಯಲ್ಲಿ ನಡೆದಿದೆ.

ಕಾರವಾರ, ಉತ್ತರಕನ್ನಡ (ಮೇ.7): ಮತಗಟ್ಟೆ ಕೇಂದ್ರದಲ್ಲಿ 'ನಮ್ಮ ಮತ ನಮ್ಮ ಹಕ್ಕು' ಬದಲು 'ನಮ್ಮ ಹಕ್ಕು ನಮ್ಮ ಶಕ್ತಿ' ಬರೆದಿದ್ದಕ್ಕೆ ಚುನಾವಣಾಧಿಕಾರಿಗೆ ಶಾಸಕ ದಿನಕರ ಶೆಟ್ಟಿ ತರಾಟೆಗೆ ತೆಗೆದುಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ಗಿಬ್ ಅಂಗ್ಲಮಾಧ್ಯಮ ಶಾಲೆಯ ಮತಗಟ್ಟೆಯಲ್ಲಿ ನಡೆದಿದೆ.

ಲೋಕಸಭಾ ಚುನಾವಣೆಗೆ 2ನೇ ಹಂತದ ಮತದಾನ ಹಿನ್ನೆಲೆ ಇಂದು ಕುಮಟಾ ಪಟ್ಟಣ ಗಿಬ್ ಅಂಗ್ಲಮಾಧ್ಯಮ ಶಾಲೆ ಮತಗಟ್ಟೆಗೆ  ಮತ ಚಲಾಯಿಸಲು ಬಂದಿದ್ದ ಶಾಸಕ. ಈ ವೇಳೆ ಗೋಡೆಯ ಮೇಲೆ "ನಮ್ಮ ಮತ ನಮ್ಮ ಶಕ್ತಿ' ಬರೆಹ ಕಂಡು ಸಿಡಿಮಿಡಿಗೊಂಡಿದ್ದಾರೆ. ತಕ್ಷಣ ಚುನಾವಣಾ ಸಿಬ್ಬಂದಿಯನ್ನ ಕರೆಯಿಸಿ ಬರಹ ಮರೆಮಾಚಿಸಿರುವ ಶಾಸಕ. ಬಳಿಕ ಚುನಾವಣಾಧಿಕಾರಿಯನ್ನ ತರಾಟೆಗೆ ತೆಗೆದುಕೊಂಡ ಶಾಸಕರು, ಮತಗಟ್ಟೆಯ ಗೋಡೆಯ ಮೇಲೆ ಈ ರೀತಿ ಬರೆಯುವಂತೆ ಹೇಳಿದವರು ಯಾರು? "ಶಕ್ತಿ' ಎಂಬ ಪದ ಯಾಕೆ ಬಳಕೆ ಮಾಡಿದ್ದೀರಿ? ಶಕ್ತಿ ಎನ್ನುವುದು ಗ್ಯಾರಂಟಿ ಯೋಜನೆಗಳಲ್ಲಿ ಒಂದು ಎಂಬುದು ನಿಮಗೆ ತಿಳಿದಿಲ್ಲವೇ? ಮತಗಟ್ಟೆಯಲ್ಲಿ ಈ ರೀತಿ ಬಹಳ ದೊಡ್ಡದಾಗಿ ಬರೆದಿರುವುದು ನನಗೆ ಅಸಮಾಧಾನ ತಂದಿದೆ ಎಂದು ಗರಂ ಆದರು. 'ಜಿಲ್ಲಾಧಿಕಾರಿಗಳ ಅನುಮತಿ ಪಡೆದು ಬರೆದಿದ್ದಾಗಿ ಚುನಾವಣಾಧಿಕಾರಿ ಸಮಜಾಯಿಷಿ ನೀಡಿದರು. ಅಷ್ಟಕ್ಕೂ ಸುಮ್ಮನಾಗದ ಶಾಸಕರು, ಈ ಕೂಡಲೇ ಗೋಡೆ ಬರಹವನ್ನು ತೆರವುಗೊಳಿಸುವಂತೆ ಸೂಚಿಸಿದರು.

ಗೀತಕ್ಕ ಗೆಲುವು ಗ್ಯಾರಂಟಿ: ಸಚಿವ ಮಧು ಬಂಗಾರಪ್ಪ ವಿಶ್ವಾಸ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ