ಬಡವರು, ದಲಿತರ ಪರ ಅಂತಾ ಇದ್ರೆ ಅದು ಮೋದಿ ಸರ್ಕಾರ: ಸುಮಲತಾ ಅಂಬರೀಶ್

By Ravi JanekalFirst Published Apr 28, 2024, 4:26 PM IST
Highlights

ಇಂದು ಇಡೀ ದೇಶದ ಜನರ ಮುಂದಿರುವ ಒಂದೇ ಒಂದು ಆಯ್ಕೆ ಅದು ಬಿಜೆಪಿಯಾಗಿದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಭಾರತ, ಆ ಮೂಲಕ ನಮ್ಮ ಭವಿಷ್ಯ ಸುಭದ್ರವಾಗಿರುತ್ತದೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ವೈಖರಿ ಕೊಂಡಾಡಿದರು.

ದಾವಣಗೆರೆ (ಏ.28): ದಾವಣಗೆರೆ ಜಿಲ್ಲೆಯೊಂದಿಗೆ ನನಗೆ ಪ್ರೀತಿಯ ಒಡನಾಟ ಇದೆ. ದಾವಣಗೆರೆ ಬೆಣ್ಣೆ ದೋಸೆ ಅಂಬರೀಶ್ ಅವರಿಗೆ ಅತ್ಯಂತ ಇಷ್ಟವಾದ ಆಹಾರವಾಗಿತ್ತು. ನಾನು ಸಂಸದರಾದ ಮೇಲೆ ಮೊದಲ ಬಾರಿಗೆ ಜಿಎಂ ಸಿದ್ದೇಶ್ವರ ಅವರು ಅಶೀರ್ವಾದ ಮಾಡಿದ್ರು. ಲೋಕಸಭಾ ಚುನಾವಣೆಯಲ್ಲಿ ಜಿಎಂ ಸಿದ್ದೇಶ್ವರ ಇಡೀ ಕುಟುಂಬ ತಮ್ಮ ಫಲಿತಾಂಶಕ್ಕಿಂತ ನನ್ನ ಫಲಿತಾಂಶದ ಬಗ್ಗೆ ಹೆಚ್ಚು ಕುತೂಹಲ ಹೊಂದಿದ್ದರು ಎಂದು ಸ್ಮರಿಸಿದರು.
 
ಇಂದು ದಾವಣಗೆರೆಯಲ್ಲಿ ನಡೆದ ಮೋದಿ ಸಮಾವೇಶದಲ್ಲಿ ಮಾತನಾಡಿದ ಅವರು,  ಪ್ರಧಾನಿ ಮೋದಿಯವರನ್ನ ಇಂದು ವಿಶ್ವಗುರು ಸ್ಥಾನದಲ್ಲಿ ನಿಲ್ಲಿಸಿದೆ. ಒಂದು ಸದೃಢ ಭಾರತವನ್ನು ಕಟ್ಟುವ ಉದ್ದೇಶ ಮೋದಿಯವರಿಗೆ. ಹೀಗಾಗಿ ಮೋದಿ‌ ನಾಯಕತ್ವಕ್ಕೆ‌ ಎಲ್ಲರು ಮತ ನೀಡಬೇಕು. ದಲಿತರ ಪರ, ರೈತರರ ಪರ, ಯುವಕರ ಪರ ಸರ್ಕಾರ ಅಂತಾ ಇದ್ರೆ ಅದು ಮೋದಿ ಸರ್ಕಾರ ಎಂದರು.

ಪ್ರಧಾನಿ ಮೋದಿ 10 ವರ್ಷಗಳಿಂದ ಸುಳ್ಳು ಹೇಳುತ್ತ ಬಂದಿದ್ದಾರೆ: ಲಕ್ಷ್ಮಣ ಸವದಿ

ಇಂದು ಇಡೀ ದೇಶದ ಜನರ ಮುಂದಿರುವ ಒಂದೇ ಒಂದು ಆಯ್ಕೆ ಅದು ಬಿಜೆಪಿಯಾಗಿದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಭಾರತ, ಆ ಮೂಲಕ ನಮ್ಮ ಭವಿಷ್ಯ ಸುಭದ್ರವಾಗಿರುತ್ತದೆ. ಈ ಹಿಂದೆ ಅಧಿಕಾರದಲ್ಲಿದ್ದ ಎಲ್ಲರೂ ಮಾತನಾಡಿ ಹೋದ್ರು. ಆದರೆ ಮೋದಿ ಮಾತು ಕೊಟ್ಟಂತೆ ಶ್ರೀರಾಮ ಮಂದಿರ ಕಟ್ಟಿದರು. ಶ್ರೀರಾಮ 12 ವರ್ಷ ವನವಾಸ ಹೋಗಿದ್ದರು. ಆದರೆ ನಾವು 500 ವರ್ಷ ರಾಮನನ್ನು ವನವಾಸಕ್ಕೆ‌ ಕಳಿಸಿದ್ವಿ. ಅಂತಹ ರಾಮನನ್ನು ಮೋದಿ ಮತ್ತೆ ಕರೆತಂದಿದ್ದಾರೆ ಎಂದು ಮೋದಿಯವರನ್ನು ಹಾಡಿ ಹೊಗಳಿದರು.

ದಾವಣಗೆರೆ ಬೆಣ್ಣೆ ದೋಸೆಗೆ ತಯಾರಿ ಮಾಡಿ, ಗೆಲುವಿನ ಸಂಭ್ರಮಕ್ಕೆ ಸೂಚನೆ ನೀಡಿದ ಮೋದಿ!

ಮೋದಿ ಆಡಳಿತದಲ್ಲಿ ಭಾರತ ಸಾಕಷ್ಟು ಅಭಿವೃದ್ಧಿಯಾಗಿದೆ. ಎಲ್ಲ ಕ್ಷೇತ್ರಗಳಲ್ಲೂ ಬದಲಾವಣೆಯಾಗಿದೆ. ರೈಲ್ವೆ, ಕ್ರೀಡಾ ಕ್ಷೇತ್ರ, ತಂತ್ರಜ್ಞಾನ, ವಸತಿ ಹೀಗೆ ಪ್ರತಿಯೊಂದು ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡಿದ್ದಾರೆ. ಮುಂದಿನ ಬಾರಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಸರ್ಕಾರ ರಚನೆ ಆಗುತ್ತದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ನಿಶ್ಚಿತ. ಆಸೆ ಆಮಿಷೆಗಳಿಗೆ ಒಳಗಾಗದೆ ಪ್ರತಿಯೊಬ್ಬರು ಮೋದಿಯವರನ್ನ ಬೆಂಬಲಿಸಬೇಕು ಎಂದು ಕರೆ ನೀಡಿದರು.

click me!