ರಾಹುಲ್ ಗಾಂಧಿ ಬುದ್ಧಿ ಮೆದುಳಲ್ಲಿಲ್ಲ, ತೊಡೆಯಲ್ಲಿದೆ ಇಂಥವನಿಗೆ ದೇಶ ಕೊಡ್ತೀರಾ? ಯತ್ನಾಳ್ ವಾಗ್ದಾಳಿ

Published : Apr 26, 2024, 11:49 PM IST
ರಾಹುಲ್ ಗಾಂಧಿ ಬುದ್ಧಿ ಮೆದುಳಲ್ಲಿಲ್ಲ, ತೊಡೆಯಲ್ಲಿದೆ ಇಂಥವನಿಗೆ ದೇಶ ಕೊಡ್ತೀರಾ? ಯತ್ನಾಳ್ ವಾಗ್ದಾಳಿ

ಸಾರಾಂಶ

ರಾಹುಲ್ ಗಾಂಧಿಗೆ ಬುದ್ಧಿ ಮೆದುಳಿನಲ್ಲಿಲ್ಲ, ತೊಡೆಯಲ್ಲಿದೆ. ನಮ್ಮ ದೇಶ ಆಳಲು ರಾಹುಲ್ ಗಾಂಧಿ ಸಮರ್ಥನಿದ್ದಾನಾ? ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಹುಲ್ ಗಾಂಧಿ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದರು.

ಹುಬ್ಬಳ್ಳಿ, (ಏ.26): ರಾಹುಲ್ ಗಾಂಧಿಗೆ ಬುದ್ಧಿ ಮೆದುಳಿನಲ್ಲಿಲ್ಲ, ತೊಡೆಯಲ್ಲಿದೆ. ನಮ್ಮ ದೇಶ ಆಳಲು ರಾಹುಲ್ ಗಾಂಧಿ ಸಮರ್ಥನಿದ್ದಾನಾ? ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಹುಲ್ ಗಾಂಧಿ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದರು.

ಇಂದು ಧಾರವಾಡ ಜಿಲ್ಲೆಯ ಕುಂದಗೋಳದಲ್ಲಿ ನಡೆದ ಪ್ರಲ್ಹಾದ್ ಜೋಶಿ ಪರ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಯತ್ನಾಳ್, ಅವನು ಏನು ಮಾತಾಡ್ತಾನೆ ಅಂತಾ ಅವನನಿಗೆ ಗೊತ್ತಿಲ್ಲ. ಮೊನ್ನೆ ರಾಣೇಬೆನ್ನೂರು ಕಡೆ ಬಂದಿದ್ದ. ಈ ವೇಳೆ ಹುಚ್ಚರಾದ ಡಿಕೆ ಶಿವಕುಮಾರ್, ದಿನೇಶ್ ಗುಂಡೂರಾವ್ ಅವನಿಗೆ ಮೆಣಸಿನಕಾಯಿ ತೋರಿಸಿದ್ದರು. ಆಗ ರಾಹುಲ್ ಗಾಂಧಿ ಎಲ್ರೂ ಯಾಕೆ ಕೆಂಪು ಮೆಣಸಿನಕಾಯಿ ಬೆಳೆದಿದ್ದೀರಿ ಅಂತಾ ಕೇಳಿದ್ನಂತೆ ಇಂತವನಿಗೆ ನೀವು ದೇಶ ಕೊಡ್ತೀರಾ ಎಂದು ವ್ಯಂಗ್ಯ ಮಾಡಿದರು.. 

ಅನ್ನ ಕೊಟ್ಟ ಕಾಂಗ್ರೆಸ್ ಬೇಕಾ? ಬಡವರ ಹೊಟ್ಟೆ ಮೇಲೆ ಹೊಡೆದ ಬಿಜೆಪಿ ಬೇಕಾ? : ಸಿದ್ದರಾಮಯ್ಯ

ಈ ಚುನಾವಣೆಯಲ್ಲಿ ರಾಹುಲ್ ಗಾಂಧಿ ಗೆದ್ರೆ ಬಟಾಟೆಯಿಂದ ಬಂಗಾರ ಬರುತ್ತದೆ. ಇದನ್ನ ರಾಹುಲ್ ಗಾಂಧಿನೇ ಹೇಳಿದ್ದರು. ಅಲ್ಲಾ ಬಟಾಟೆಯಿಂದ ಬಂಗಾರವಂಗಿದ್ರ ನಮ್ಮ ದೇಶದಲ್ಲಿ ಯಾಕ ಬಡತನ ಇರ್ತಿತ್ತು ರಾಹುಲ್ಲಾ ಎಂದು ಹಾಸ್ಯ ಚಟಾಕಿ ಹಾರಿಸಿದ ಯತ್ನಾಳ್. ಭಾಷಣದುದ್ದಕ್ಕೆ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಲಿದ್ದು, ಮತ್ತೊಮ್ಮೆ ಮೋದಿ ಪ್ರಧಾನಿಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ತನ್ನ ಭದ್ರಕೋಟೆಯಲ್ಲೂ ಗೆದ್ದೇ ಗೆಲ್ಲುತ್ತೇವೆ ಎಂದು ಹೇಳಿಕೊಳ್ಳುವ ವಿಶ್ವಾಸದಲ್ಲಿ‌ ಇಲ್ಲ - ಸಚಿವ ದಿನೇಶ್ ಗುಂಡೂರಾವ್

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ