
ಬೆಂಗಳೂರು (ಮೇ.17): ಕಾಂಗ್ರೆಸ್ ಪಕ್ಷ ಮತ್ತು ಇಂಡಿಯಾ ಒಕ್ಕೂಟ ಬಹಳ ಚೆನ್ನಾಗಿದೆ. ಈ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ 40ಕ್ಕೂ ಹೆಚ್ಚು ಸೀಟು ಗೆಲ್ಲುವ ವಿಶ್ವಾಸ ಇದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ವಿಶ್ವಾಸ ವ್ಯಕ್ತಪಡಿಸಿದರು.
ಲೋಕಸಭಾ ಚುನಾವಣೆ ವಿಚಾರವಾಗಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಹೊಸದಾಗಿ ಹತ್ತು ಕೆಜಿ ಅಕ್ಕಿ ಘೊಷಣೆ ಮಾಡಿದ್ದಾರೆ. ನಮ್ಮ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಹತ್ತು ಕೆಜಿ ಉಚಿತ ನೀಡುವಂತೆ ದೇಶದ ಜನರಿಗೂ ನೀಡುವ ಭರವಸೆ ನೀಡಿದ್ದೇವೆ. ಇದೀಗ ನಮ್ಮ ರಾಜ್ಯದಂತೆ ದೆಹಲಿಯಲ್ಲೂ ಇಂಡಿಯಾ ಒಕ್ಕೂಟ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ ಎಂದು ಹೇಳಿದ್ದಾರೆ. ಜನರು ಕೂಡ ಒಪ್ಪಿ ನಮ್ಮನ್ನ ಬೆಂಬಲಿಸಿದ್ದಾರೆ ಎಂದರು.
ನಮ್ಮ ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ತುಂಬಾ ದಕ್ಷವಾಗಿದೆ: ಸಚಿವ ಡಿ ಸುಧಾಕರ್
ರಾಜ್ಯದಲ್ಲಿ ತೀವ್ರ ಬರಗಾಲ ಇದ್ದುದರಿಂದ ಕುಡಿಯುವ ನೀರು, ಆಹಾರ, ಜಾನುವಾರು ಮೇವಿನ ಕೊರತೆ ಸೇರಿದಂತೆ ಸಮಸ್ಯೆ ಏನೇನೋ ಸಮಸ್ಯೆ ಇತ್ತು. ಮುಂದೆ ಅಧಿಕಾರಿಗಳು ಹೋಗಿ ಪರಿಶೀಲನೆ ಮಾಡಬೇಕು. ಮಳೆ ಜಾಸ್ತಿ ಆಗಿ ಡ್ಯಾಮೇಜ್ ಆದರೂ ಗಮನಿಸಬೇಕು. ಕೆರೆ ಕಟ್ಟೆಗಳಲ್ಲಿ ನೀರು ತುಂಬಿಸಲು, ಕಾಲುವೆ ಹರಿಯಲು ಕ್ರಮವಹಿಸಬೇಕು. ಈ ವರ್ಷ ಬರಗಾಲದಿಂದಾಗಿ ಎಲ್ಲ ನದಿಗಳು, ಕೆರೆಗಳು ಬತ್ತಿ ಹೋಗಿದ್ದವು. ಇದರ ಜೊತೆಗೆ 7000 ಬೋರ್ವೆಲ್ಗಳು ಬತ್ತಿಹೋಗಿದ್ದವು. ಮುಂದಿನ ದಿನಗಳಲ್ಲಿ ಆ ಕೆರೆಗಳಲ್ಲಿ ಶುದ್ಧ ಕುಡಿಯುವ ನೀರು ತುಂಬಿಸಲು ಕಾರ್ಯಕ್ರಮ ರೂಪಿಸಲು ಸೂಚನೆ ಕೊಟ್ಟಿದ್ದಾರೆ. ಅದಕ್ಕಾಗಿ ಮುಂಜಾಗ್ರತವಾಗಿ ನೀರಿನ ಸಮಸ್ಯೆ ಬಗೆಹರಿಸಲು ಕ್ರಮವಹಿಸಿದ್ದೇವೆ. ಈ ವಿಚಾರವಾಗಿ ನಾನು ನೀರಾವರಿ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತೇನೆ. ಮುಂದಿನ ದಿನಗಳಲ್ಲಿ ಬೆಂಗಳೂರು ಸಪರೇಟಾಗಿ ಪ್ಲಾನ್ ಆಫ್ ಆಕ್ಷನ್ ಮಾಡೋಕೆ ಹೇಳಿದ್ದೇನೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.