PM Modi In Karnataka: ಇಂಡಿ ಮೈತ್ರಿಗೆ ನಾಯಕನಿಲ್ಲ, ಭವಿಷ್ಯದ ಯೋಚನೆಯಿಲ್ಲ: ನರೇಂದ್ರ ಮೋದಿ

Published : Apr 20, 2024, 04:30 PM ISTUpdated : Apr 20, 2024, 04:31 PM IST
PM Modi In Karnataka: ಇಂಡಿ ಮೈತ್ರಿಗೆ ನಾಯಕನಿಲ್ಲ, ಭವಿಷ್ಯದ ಯೋಚನೆಯಿಲ್ಲ: ನರೇಂದ್ರ ಮೋದಿ

ಸಾರಾಂಶ

ಚಿಕ್ಕಬಳ್ಳಾಪುರ ಹಾಗೂ ಕೋಲಾರದ ಲೋಕಸಭಾ ಸ್ಪಧಿಗಳ ಪರವಾಗಿ ಮತಯಾಚನೆ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಶನಿವಾರ ಕರ್ನಾಟಕಕ್ಕೆ ಆಗಮಿಸಿದ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು.  

ಬೆಂಗಳೂರು (ಏ.20): ಅಧಿಕಾರದ ಆಸೆಯಲ್ಲಿರುವ ಇಂಡಿ ಮೈತ್ರಿಗೆ ಈಗ ಯಾವುದೇ ನಾಯಕನಿಲ್ಲ. ಭವಿಷ್ಯದ ಬಗ್ಗೆ ಯಾವುದೇ ಯೋಚನೆಗಳೂ ಅವರ ಮೈತ್ರಿಗೆ ಇಲ್ಲ. ಇದಲ್ಲದೆ, ಅವರ ಇತಿಹಾಸ ಪೂರ್ತಿ ಹಗರಣಗಳಿಂದಲೇ ತುಂಬಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಚಿಕ್ಕಬಳ್ಲಾಪುರ ಅಭ್ಯರ್ಥಿ ಡಾ. ಕೆ ಸುಧಾಕರ್‌ ಹಾಗೂ ಕೋಲಾರ ಅಭ್ಯರ್ಥಿ ಜೆಡಿಎಸ್‌ನ ಮಲ್ಲೇಶ್‌ ಬಾಬು ಪರ ಮತ ಯಾಚಿಸಿದರು.

ಚಿಕ್ಕ ಚಿಕ್ಕ ರೈತರಿಗೆ ನಾವು ಕಿಸಾನ್‌ ಸಮ್ಮಾನ್‌ ನಿಧಿ ನೀಡುತ್ತಿದ್ದೆವು. 6 ಸಾವಿರ ಕೇಂದ್ರ ಸರ್ಕಾರ ನೀಡಿದ್ದರೆ, 4 ಸಾವಿರ ರಾಜ್ಯ ಸರ್ಕಾರ ನೀಡುತ್ತಿತ್ತು. ಆದರೆ, ಕಾಂಗ್ರೆಸ್‌ ಸರ್ಕಾರ ಇದನ್ನು ರದ್ದು ಮಾಡಿತು. ರೈತ ವಿರೋಧಿ ಕಾಂಗ್ರೆಸ್‌ ಸರ್ಕಾರಕ್ಕೆ ಜನರೇ ಶಿಕ್ಷೆ ನೀಡುತ್ತಾರೆ ಎನ್ನುವ ವಿಶ್ವಾಸ ನನಗಿದೆ ಎಂದು ಮೋದಿ ಹೇಳಿದ್ದಾರೆ.  ಇಲ್ಲಿ ನಂದಿ ಹಿಲ್ಸ್‌ ಇದೆ. ತಾಯಿ ಭುವನೇಶ್ವರಿಯ ಆಶೀರ್ವಾದ ಇದೆ. ಈ ಕ್ಷೇತ್ರದಲ್ಲಿ ತೀರ್ಥಯಾತ್ರೆ ಹಾಗೂ ವೀಕೆಂಡ್‌ ಗೇಟ್‌ವೇ ಆರಂಭಿಸುವ ನಿಟ್ಟಿನಲ್ಲಿ ಕೆಲಸ ಮಾಡಲಿದೆ. ಏಪ್ರಿಲ್‌ 26ಕ್ಕೆ ವೋಟ್‌ ಹಾಕಬೇಕಿದೆ. ಇದಕ್ಕಾಗಿ ನಿಮ್ಮೆಲ್ಲರಿಗೂ ನಾನು ಪ್ರಾರ್ಥನೆ ಮಾಡುತ್ತೇನೆ. ಚಿಕ್ಕಬಳ್ಳಾಪುರದಿಂದ ಕೆ. ಸುಧಾಕರ್‌ ಹಾಗೂ ಕೋಲಾರದಿಂದ ಮಲ್ಲೇಶ್‌ ಬಾಬು ಅವರನ್ನು ಗೆಲ್ಲಿಸಬೇಕಿದೆ. ನೀವು ಮನೆಮನೆಗಳಿಗೆ ಹೋಗಬೇಕು. ಮೋದಿ ಬಂದಿದ್ದರು. ನಿಮ್ಮೆಲ್ಲರಿಗೂ ನಮಸ್ಕಾರ ತಿಳಿಸಿದ್ದಾರೆ ಎಂದು ಹೇಳಬೇಕು ಎಂದರು. 

ಚಿಕ್ಕಬಳ್ಳಾಪುರದ ಸೋದರ ಸೋದರಿಯಗೆ ನನ್ನ ನಮಸ್ಕಾರಗಳು ಎಂದು ಕನ್ನಡದಲ್ಲಿಯೇ ಮಾತು ಆರಂಭಿಸಿದ ಮೋದಿ,  ಸಂತ ಕೈವಾರ ತಾತಯ್ಯ ಹಾಗೂ ಸರ್‌ ಎಂ ವಿಶ್ವೇಶ್ವರಯ್ಯ ಅವರ ನೆಲಕ್ಕೆ ಬಂದಿರುವುದು ಖುಷಿ ಇದೆ. ಮೊದಲ ಹಂತದ ವೋಟಿಂಗ್‌ ದೇಶದ ಉತ್ಸಾಹ ಹೆಚ್ಚಿದೆ. ಈ ಉತ್ಸಾಹ ಇಲ್ಲಿಯೂ ಕಾಣುತ್ತಿದೆ. ಮೊದಲ ಹಂತದ ಮತದಾನ ಎನ್‌ಡಿಎ ಪರವಾಗಿ ಬಂದಿದೆ. ನಾನು ದೇವೇಗೌಡರಿಗೆ ಆಭಾರಿಯಾಗಿದ್ದೇನೆ. 90ರ ವಯಸ್ಸಿನಲ್ಲೂ ಅವರಲ್ಲಿನ ಉತ್ಸಾಹ, ಬದ್ಧತೆ ನನ್ನಂಥ ಯುವಕರಿಗೂ ಪ್ರೇರಣಾದಾಯಿಯಾಗಿದೆ ಎಂದು ಮೋದಿ ಹೇಳಿದರು.

ದೇವೇಗೌಡರು ಇಂಡಿ ಮೈತ್ರಿಯ ಒಬ್ಬೊಬ್ಬರ ಪಾತ್ರವನ್ನು ತುಂಬಾ ಚೆನ್ನಾಗಿ ಹೇಳಿದರು. ಆದರೆ, ಇಂಡಿ ಮೈತ್ರಿಯಲ್ಲಿ ಯಾರೂ ಲೀಡರ್‌ಗಳಿಲ್ಲ. ಭವಿಷ್ಯದಲ್ಲಿ ಯಾವುದೇ ವಿಷನ್‌ಗಳೂ ಇಲ್ಲ. ಆದರೆ, ಅವರ ಹಿಸ್ಟರಿಯಲ್ಲಿ ಇತಿಹಾಸಗಳೇ ತುಂಬಿದಿದೆ. ಚಿಕ್ಕಬಳ್ಳಾಪುರದ ನೆಲ ಈಗಾಗಲೇ ಮತ್ತೊಮ್ಮೆ ಮೋದಿ ಸರ್ಕಾರ ಎಂದು ತೀರ್ಮಾನ ಮಾಡಿದೆ. ಇಂದು ನಿಮ್ಮ ಎದುರು ನನ್ನ ರಿಪೋರ್ಟ್‌ ಕಾರ್ಡ್‌ ಇಟ್ಟು ಆಶೀರ್ವಾದ ಕೇಳಲು ಬಂದಿದ್ದೇನೆ. ನಿಮ್ಮೆಲ್ಲರನ್ನೂ ನನ್ನ ಪರಿವಾರ ಎಂದುಕೊಂಡಿದ್ದೇನೆ. ನಿಮ್ಮ ಸಲುವಾಗಿ ದಿನರಾತ್ರಿ ಕೆಲಸ ಮಾಡುವ ವಿಚಾರದಲ್ಲಿ ಯಾವುದನ್ನೂ ಕಡಿಮೆ ಮಾಡಿಲ್ಲ. ನಿಮ್ಮ ಕನಸುಗಳೇ ನನ್ನ ಸಂಕಲ್ಪ. ಪ್ರತಿ ಕ್ಷಣ ನಿಮ್ಮ ಹೆಸರಿಗೆ, ಪ್ರತಿ ಕ್ಷಣ ದೇಶದ ಹೆಸರಿಗೆ.. ಇದೇ ಕಾರಣಕ್ಕೆ ಬರೀ ಕೆಲಸ ಮಾತ್ರ ಮಾಡೋದಿಲ್ಲ. ಅದರ ಗ್ಯಾರಂಟಿ ಕೂಡ ನೀಡ್ತೇನೆ ಎಂದು ಹೇಳಿದ್ದಾರೆ.

Lok Sabha Election 2024: ಮೋದಿ ಮೂರನೇ ಬಾರಿ ಗೆದ್ರೆ ಈ ಎಲ್ಲಾ ಸ್ಟಾಕ್‌ಗಳದ್ದು ಮಿಂಚಿನ ಓಟ ಅಂತಾರೆ ತಜ್ಞರು!

ಮೋದಿ ಸರ್ಕಾರದ ಯೋಜನೆಗಳ‌ಫಲಾನುಭವಿಗಳು ಎಸ್ ಸಿ ಎಸ್ಟಿ, ಓಬಿಸಿ ಸಮುದಾಯದ ಜನ. ನಾವು ಬರುವುದಕ್ಕೆ ಮುಂಚೆ ಕೊಳಗೇರಿ ಗಳಲ್ಲಿ ಬದುಕುತ್ತಿದ್ದರು. ಈಗ ನೀರು,ವಿದ್ಯುತ್, ದೀಪ ಅವರಿಗೆ ಸಿಗುತ್ತಿದೆ. ಇಲ್ಲಿನ ನೀರಿನ ಸಮಸ್ಯೆಗಳನ್ನು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುತ್ತಿದೆ. ಅಮೃತ ಸರೋವರ ಯೋಜನೆಯನ್ನು ಜಾರಿ ಮಾಡಲಾಗುತ್ತಿದೆ. ಇಲ್ಲಿಯ 2.70 ಲಕ್ಷ ಮಂದಿಗೆ ನಲ್ಲಿ ನೀರಿನ ಸಂಪರ್ಕ ನೀಡಲಾಗಿದೆ. ಹಿಂದಿನ ಹತ್ತು ವರ್ಷಗಳಲ್ಲಿ ಚಿಕ್ಕಬಳ್ಳಾಪುರದಲ್ಲಿ 14 ಕೋಲಾರ 24 ಸಾವಿರ ಮನೆ ನಿರ್ಮಾಣ ಮಾಡಿ ನೀಡಲಾಗಿದೆ. ಮೋದಿ ಸರ್ಕಾರ ಹೊಸ ಮನೆಗಳ ನಿರ್ಮಾಣ ಭರವಸೆ ನೀಡಿದೆ. ಯಾರಿಗೆ ಸಿಕ್ಕಿಲ್ಲ ಮುಂದೆ ಸಿಗಲಿದೆ ಎಂದು ಹೇಳಿದರು.

'ಭಾರತ್‌ ಮಾತಾಕಿ ಜೈ ಎನ್ನಲು ಪರ್ಮಿಷನ್‌ ಕೇಳ್ಬೇಕಾ..' ವೇದಿಕೆಯಲ್ಲೇ ಕಾಂಗ್ರೆಸ್‌ಗೆ ಪ್ರಶ್ನಿಸಿದ ಪ್ರಧಾನಿ ಮೋದಿ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಯತ್ನಾಳ್ ಭಾಷಣಕ್ಕೆ ಟಾಂಗ್ ಕೊಡಲು ಹೋಗಿ ಯಡವಟ್ಟು ಮಾಡಿಕೊಂಡ ಸಚಿವ ಸಂತೋಷ್ ಲಾಡ್!
ಸವಣೂರು ಘಟನೆ ಕಾಂಗ್ರೆಸ್ ಓಲೈಕೆ ರಾಜಕಾರಣದ ಪ್ರತಿಬಿಂಬ, ರಾಜ್ಯದಲ್ಲಿ ಪೊಲೀಸರ ನಿಷ್ಕ್ರಿಯತೆ ಬಗ್ಗೆಯೂ ಸಂಸದ ಬೊಮ್ಮಾಯಿ ಕಿಡಿ