
ಮೈಸೂರು (ಏ.13): ಮೋದಿ ಕೊಟ್ಟ ಎಲ್ಲಾ ಭರವಸೆಗಳು ಹುಸಿಯಾಗಿವೆ. ಸುಳ್ಳು ಘೋಷಣೆ ಮಾಡಿ 2 ಬಾರಿ ಅಧಿಕಾರಕ್ಕೆ ಬಂದಿದ್ದಾರೆ. ಈ ಬಾರಿ ಅವರ ಸುಳ್ಳು ನಂಬಿ ಅವರಿಗೆ ಓಟು ಹಾಕಬೇಡಿ ಎಂದು ಪಿರಿಯಾಪಟ್ಟಣದಲ್ಲಿ ಪಿಡಬ್ಲೂಡಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಮೋದಿಯವರ 10 ವರ್ಷದ ಸುಳ್ಳನ್ನ ಮನೆ ಮನೆಗೆ ತಲುಪಿಸಿ ಎಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದರು. ವಂದೇ ಭಾರತ್ ಹಾಗೂ ರಾಜಧಾನಿ ಎಕ್ಸ್ಪ್ರೆಸ್ ಒಂದೇ. ಹಿಂದೆಯೇ ರಾಜಧಾನಿ ಎಕ್ಸ್ಪ್ರೆಸ್ ವಂದೇ ಭಾರತ್ ವೇಗದಲ್ಲಿ ಓಡಿದೆ. ಆದರೆ ಬಿಜೆಪಿಯವರು ಕೇವಲ ಸುಳ್ಳು ಪ್ರಚಾರ ಮಾಡಿದ್ದಾರೆ. ಬಿಜೆಪಿಯವರದ್ದು ಕೇವಲ ಪ್ರಚಾರ ಮಾತ್ರ, ಅಭಿವೃದ್ಧಿ ಇಲ್ಲ. ರಾಜ್ಯದ ಪಾಲನ್ನ ಕೇಂದ್ರ ನೀಡ್ತಿಲ್ಲ ಅಂತ ವಾಗ್ದಾಳಿ ನಡೆಸಿದರು.
ನನಗೆ ಅವಮಾನ ಮಾಡಿದ್ದೀರ: ಕುರುಬ ಸಮುದಾಯದ ಮುಖಂಡರನ್ನ ಸ್ವಾಗತಿಸಿಲ್ಲ ಎಂದು ಕುರುಬ ಸಮಾಜದ ಅಧ್ಯಕ್ಷ ಹೆಚ್ ಡಿ ಗಣೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವೇದಿಕೆಗೆ ಕರೆದು ಕೂರಿಸಿ ಸ್ವಾಗತ ಕೋರಿಲ್ಲ ಎಂದು ಸಿಎಂ, ಡಿಸಿಎಂ ಇದ್ದ ವೇದಿಕೆಯ ಮೇಲೆಯೇ ಅಸಮಾಧಾನ ಹೊರಹಾಕಿದ್ದಾರೆ. ಜೊತೆಗೆ ನನಗೆ ಕರೆದು ಅವಮಾನ ಮಾಡಿದ್ದೀರ ಎಂದು ಸಿಎಂ ಮುಂದೆ ಹೇಳಿದರು. ಈ ವೇಳೆ ಸಿಎಂ ಹಾಗೂ ಶಾಸಕ ತನ್ವೀರ್ ಸೇಠ್ ಅವರು ಎಚ್.ಡಿ .ಗಣೇಶ್ ಅವರನ್ನ ಸಮಧಾನಿಸಿದರು.
ಸಂಜಯ ಪಾಟೀಲ್ 'ಎಕ್ಸ್ಟ್ರಾ ಪೆಗ್' ಹೇಳಿಕೆ ಬಿಜೆಪಿಯ ಹಿಡನ್ ಅಜೆಂಡಾ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಕ್ರೋಶ
ಬಿಜೆಪಿಗೆ ಕಾಂಗ್ರೆಸ್ ಕಂಡರೆ ಭಯವಿದೆ: ಬಿಜೆಪಿ ಕೇಂದ್ರ ಮತ್ತು ಹಲವು ರಾಜ್ಯಗಳಲ್ಲಿ ಅಧಿಕಾರದಲ್ಲಿದೆ. ಎರಡು ಮೂರು ಜಿಲ್ಲೆಗಳಿಗೆ ಸೀಮಿತವಾಗಿರುವ ಜೆಡಿಎಸ್ ನೊಂದಿಗೆ ಬಿಜೆಪಿ ಹೊಂದಾಣಿಕೆ ಮಾಡಿಕೊಂಡಿದೆ. ಅದಕ್ಕೆ ಕಾರಣ ಬಿಜೆಪಿಗೆ ಕಾಂಗ್ರೆಸ್ ಕಂಡರೆ ಭಯವಿದೆ. ಮತ್ತೊಂದೆಡೆ ಮೂರನ್ನೂ ಬಿಟ್ಟಿರುವ ಜೆಡಿಎಸ್ ಕುಟುಂಬ ರಾಜಕಾರಣ ಮಾಡುತ್ತಿದೆ. ಅಪ್ಪ, ಮಕ್ಕಳು ಮೊಮ್ಮಕ್ಕಳು ಶಾಸಕರು ಸಂಸದರಾಗಿದ್ದಾರೆ. ಈಗ ಅಳಿಯನನ್ನು ಬಿಜೆಪಿ ಅಭ್ಯರ್ಥಿಯನ್ನಾಗಿ ನಿಲ್ಲಿಸಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಪರವಾಗಿ ನಡೆಯುತ್ತಿರುವ ಪ್ರಚಾರ ಸಭೆಯಲ್ಲಿ ಸಚಿವ ಕೆ.ವೆಂಕಟೇಶ್ ವಾಗ್ದಾಳಿ ನಡೆಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.