
ಯಾದಗಿರಿ (ಏ.6): ಪ್ರತಿಸಲ ಚುನಾವಣೆ ಬಂದಾಗ ಕೆಲ ಅಸಮಧಾನಿತ ಕಿಡಿಗೇಡಿಗಳು, ಬುದ್ಧಿಗೇಡಿಗಳು ಈ ರೀತಿ ಸುಳ್ಳು ಜಾತಿ ಅಸ್ತ್ರ ಪ್ರಯೋಗ ಮಾಡ್ತಾನೆ ಬಂದಿದ್ದಾರೆ. ಆದರೆ ನಾನು 1989 ರಿಂದ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ. ಎರಡು ಬಾರಿ ರಾಜ್ಯ ಸರ್ಕಾರದಲ್ಲಿ ಮಂತ್ರಿ ಆಗಿದ್ದೇನೆ, ಒಂದು ಬಾರಿ ಸಂಸದನಾಗಿದ್ದೇನೆ ಎಂದು ವಿರೋಧಿಗಳ ಷಡ್ಯಂತ್ರಕ್ಕೆ ಸಂಸದ ರಾಜಾ ಅಮರೇಶ್ವರ ನಾಯಕ ಹರಿಹಾಯ್ದರು.
ಸುಳ್ಳು ಜಾತಿ ಪ್ರಮಾಣಪತ್ರ ವಿಚಾರ ಸಂಬಂಧ ಇಂದು ರಾಯಚೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಂಸದರು, ನಮ್ಮದು ನಾಯಕ ಮನೆತನದಲ್ಲಿ ಗುರುತಿಸಿಕೊಂಡ ಸಂಸ್ಥಾನ. ನಮ್ಮ ಸಂಸ್ಥಾನದ ಬಗ್ಗೆ ಇತಿಹಾಸದಲ್ಲೇ ಉಲ್ಲೇಖವಿದೆ. ನಮ್ಮ ತಾಯಿ ಚಿತ್ರದುರ್ಗದ ಮದಕರಿ ನಾಯಕರ ವಂಶಸ್ಥರು. ನಮ್ಮ ಅಜ್ಜಿ ಸುರಪುರದ ರಾಜಾ ಮನೆತನದವರು. ನಮ್ಮದು ನಿನ್ನೆ ಮೊನ್ನೆ ಬಂದ ಮನೆತನ ಅಲ್ಲ, ಇತಿಹಾಸ ಇರೋ ಮನೆತನ. ನನ್ನ ಮೇಲೆ ಯಾವುದೇ ಆರೋಪ ಇಲ್ಲದ್ದಕ್ಕೆ ಈ ರೀತಿ ಹೊಟ್ಟೆ ಕಿಚ್ಚಿಗೆ ಆರೋಪ ಮಾಡ್ತಿದ್ದಾರೆ ಎಂದು ಕಿಡಿಕಾರಿದರು.
ಲೋಕಸಭಾ ಚುನಾವಣೆ 2024: ಪಕ್ಷಗಳಿಗೆ ಅಸಮಾಧಾನದ ಭಾರ..!
ಲಿಂಗಸಗೂರು ತಾಲೂಕಿನ ಗುಂತಗೋಳದಲ್ಲಿ ನಾಯಕ ಜನಾಂಗದ ಗುರುವಿನ ಮನೆತನ ಅಂತಾ ಗುರುತಿಸಿಕೊಂಡಿದೆ. ಶಾಲಾ ದಾಖಲಾತಿ ಅಂತಾ ಜನರಿಗೆ ತಪ್ಪು ದಾರಿಗೆ ತರೋ ಪ್ರಯತ್ನ ಮಾಡ್ತಿದ್ದಾರೆ. ಶಾಲಾ ದಾಖಲಾತಿಯನ್ನು ನಾನು ಬರೆಸಿಲ್ಲ. ನಮ್ಮ ಸಹೋದರಿಯದ್ದು ಒಂದರಿಂದ ಏಳನೇ ತರಗತಿವರೆಗೆ ವಾಲ್ಮೀಕಿ ಅಂತಲೇ ಇದೆ. ಲೋಕಸಭಾ ಚುನಾವಣೇಗೆ ಟಿಕೆಟ್ ಸಿಗದ ಅಸಮಾಧಾನಿತರೇ ಈ ರೀತಿ ಸುಳ್ಳು ಆರೋಪ ಮಾಡಿದ್ದಾರೆ ಅಂತ ಪರೋಕ್ಷವಾಗಿ ಬಿವಿ ನಾಯಕ ವಿರುದ್ಧ ಕಿಡಿಕಾರಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.