ಝೀ ನ್ಯೂಸ್-ಮ್ಯಾಟ್ರಿಜ್‌ ಚುನಾವಣಾಪೂರ್ವ ಸಮೀಕ್ಷೆ: ಯಾರು ಗೆಲ್ತಾರೆ ನೋಡಿ

Published : Mar 16, 2024, 12:04 PM IST
ಝೀ ನ್ಯೂಸ್-ಮ್ಯಾಟ್ರಿಜ್‌ ಚುನಾವಣಾಪೂರ್ವ ಸಮೀಕ್ಷೆ: ಯಾರು ಗೆಲ್ತಾರೆ ನೋಡಿ

ಸಾರಾಂಶ

ಲೋಕಸಭೆ ಚುನಾವಣೆ ನಡೆದರೆ ಬಿಜೆಪಿ ನೇತೃತ್ವದ ಎನ್‌ಡಿಎಗೆ 377 ಸೀಟು ಗೆಲ್ಲಲಿದೆ. ಇಂಡಿಯಾ ಕೂಟಕ್ಕೆ ಕೇವಲ 93 ಸೀಟು ಬರಲಿವೆ ಎಂದು ಝೀ ನ್ಯೂಸ್-ಮ್ಯಾಟ್ರಿಜ್‌ ಚುನಾವಣಾಪೂರ್ವ ಸಮೀಕ್ಷೆ ಹೇಳಿದೆ.

ನವದೆಹಲಿ (ಮಾ.16):  ಈಗ ಲೋಕಸಭೆ ಚುನಾವಣೆ ನಡೆದರೆ ಬಿಜೆಪಿ ನೇತೃತ್ವದ ಎನ್‌ಡಿಎಗೆ 377 ಸೀಟು ಗೆಲ್ಲಲಿದೆ. ಇಂಡಿಯಾ ಕೂಟಕ್ಕೆ ಕೇವಲ 93 ಸೀಟು ಬರಲಿವೆ ಎಂದು ಝೀ ನ್ಯೂಸ್-ಮ್ಯಾಟ್ರಿಜ್‌ ಚುನಾವಣಾಪೂರ್ವ ಸಮೀಕ್ಷೆ ಹೇಳಿದೆ.

ಕಳೆದ ಚುನಾವಣೆಯಲ್ಲಿ ಎನ್‌ಡಿಎ 351 ಹಾಗೂ ಯುಪಿಎ 90 ಸ್ಥಾನ ಗಳಿಸಿದ್ದವು.ಇದೇ ವೇಳೆ, ಕರ್ನಾಟಕದಲ್ಲಿ ಎನ್‌ಡಿಎ 23 ಹಾಗೂ ಕಾಂಗ್ರೆಸ್‌ 5 ಸ್ಥಾನ ಗೆಲ್ಲಲಿದೆ ಎಂದು ಸಮೀಕ್ಷೆ ಹೇಳಿದೆ, ಕಳೆದ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ 25, ಕಾಂಗ್ರೆಸ್ 1, ಜೆಡಿಎಸ್‌ 1 ಹಾಗೂ ಪಕ್ಷೇತರರು 1 ಸ್ಥಾನ ಗಳಿಸಿದ್ದರು.

ಇಂದು ಲೋಕಸಭಾ ಎಲೆಕ್ಷನ್‌ ದಿನಾಂಕ ಪ್ರಕಟ, ಚುನಾವಣಾ ನೀತಿ ಸಂಹಿತೆ ಜಾರಿಯಾದ್ರೆ ಏನಾಗುತ್ತೆ ?

ಟೈಮ್ಸ್ ನೌ-ಇಟಿಜಿ ಸಮೀಕ್ಷೆ:
ಇನ್ನು  ಟೈಮ್ಸ್ ನೌ-ಇಟಿಜಿ ಸಮೀಕ್ಷೆಯಲ್ಲಿ ಕರ್ನಾಟಕದಲ್ಲಿ 2019ಕ್ಕೆ ಹೋಲಿಸಿದರೆ ಕಾಂಗ್ರೆಸ್‌ ಪಕ್ಷಕ್ಕೆ 2024ರಲ್ಲಿ ಮತ ಹಾಗೂ ಗೆಲ್ಲುವು ಸ್ಥಾನಗಳು ಹೆಚ್ಚಾದರೂ ಕೂಡ ಬಿಜೆಪಿ ಭರ್ಜರಿಯಾಗಿ ಗೆಲ್ಲಲಿದೆ ಎಂದು ಸಮೀಕ್ಷೆ ತಿಳಿಸಿದೆ.

ಕರ್ನಾಟಕದ 28 ಸ್ಥಾನಗಳ ಪೈಕಿ ಎನ್‌ಡಿಎ ಮೈತ್ರಿಕೂಟ (ಬಿಜೆಪಿ ಹಾಗೂ ಜೆಡಿಎಸ್‌) 22-24 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆ ಇದೆ. ಇನ್ನು ಐಎನ್‌ಡಿಐಎ (ಕಾಂಗ್ರೆಸ್‌) 4-6 ಸ್ಥಾನಗಳಲ್ಲಿ ಗೆಲ್ಲಬಹುದು ಎಂದಿದೆ. 

ಚುನಾವಣಾ ಬಾಂಡ್‌: ದೇಣಿಗೆ ಕೊಟ್ಟ ಕಂಪೆನಿಗಳ ವಿರುದ್ಧ ತನಿಖೆ ಆರಂಭ, ತ.ನಾಡಿನ ಲಾಟರಿ ಕಿಂಗ್‌ ಅತಿದೊಡ್ಡ ದೇಣಿಗೆದಾರ!

ಇಂಡಿಯಾ ಟಿವಿ - ಸಿಎನ್‌ಎಕ್ಸ್‌ ಸಮೀಕ್ಷೆ
ಇಂಡಿಯಾ ಟಿವಿ - ಸಿಎನ್‌ಎಕ್ಸ್‌ ಸಮೀಕ್ಷೆಯ ಪ್ರಕಾರ ಕರ್ನಾಟಕದ 28 ಕ್ಷೇತ್ರಗಳ ಪೈಕಿ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿಯಲ್ಲಿ 24 ಕ್ಷೇತ್ರಗಳಲ್ಲಿ  ಸೀಟು ಗೆಲ್ಲಲಿದೆ. ಕಾಂಗ್ರೆಸ್‌ 4 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಎನ್‌ಡಿಎ ಮೈತ್ರಿಯಲ್ಲಿ 22 ಕ್ಷೇತ್ರಗಳಲ್ಲಿ  ಬಿಜೆಪಿ ಮತ್ತು ಜೆಡಿಎಸ್‌ 2 ಕ್ಷೇತ್ರ ಗೆಲ್ಲಲಿದೆಯಂತೆ.

2019 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಕೇವಲ 1 ಸ್ಥಾನ (ಬೆಂಗಳೂರು ಗ್ರಾಮಾಂತರ) ಮಾತ್ರ ಗೆದ್ದಿತ್ತು. ಆದರೆ ಈ ಬಾರಿ ಕಾಂಗ್ರೆಸ್ ನ ಸ್ಥಾನ ಏರಿಕೆಯಲ್ಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ