
ನವದೆಹಲಿ: ಲೋಕಸಭಾ ಚುನಾವಣೆಗೆ ಸಂಕಲ್ಪ ಪತ್ರ ಎಂಬ ಹೆಸರಿನಲ್ಲಿ ಪ್ರಣಾಳಿಕೆ ಬಿಡುಗಡೆಗೊಳಿಸಿ ಮಾತನಾಡಿದ ಪ್ರಧಾನಿ ಮೋದಿ, ಸೌರಮಾನ ಯುಗಾದಿ ವಿಶು ಆಚರಿಸುತ್ತಿರುವ ದೇಶದ ವಿವಿಧ ರಾಜ್ಯಗಳ ಜನರಿಗೆ ಶುಭಾಶಯ ತಿಳಿಸಿದರು. ಇಂದು ತುಂಬಾ ಒಳ್ಳೆಯ ದಿನವಾಗಿದೆ. ಇಂದು ದೇಶದ ಹಲವು ರಾಜ್ಯಗಳಲ್ಲಿ ಹೊಸ ವರ್ಷದ ಸಂಭ್ರಮವಿದೆ. ಜೊತೆಗೆ ಡಾ ಬಿ ಆರ್ ಅಂಬೇಡ್ಕರ್ ಜಯಂತಿ ಸಹ ಇದೆ. ಇಂದು ನಾವು ವಿಕ್ಷಿತ್ ಭಾರತ ಸಂಕಲ್ಪ ಪತ್ರವನ್ನ ದೇಶದ ಜನರ ಮುಂದಿಟ್ಟಿದ್ದೇವೆ ಎಂದರು.
ಪ್ರಣಾಳಿಕೆ ತಯಾರು ಮಾಡಿದಕ್ಕೆ ರಾಜನಾಥ್ ಸಿಂಗ್ ತಂಡಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದ ಪ್ರಧಾನಿ, ಬಿಜೆಪಿ ಪ್ರಣಾಳಿಕೆಗಾಗಿ ಇಡೀ ದೇಶ ಕಾಯುತ್ತಿತ್ತು. ಯುವ, ನಾರಿಶಕ್ತಿ, ರೈತ ಮತ್ತು ಬಡವರೇ ನಮ್ಮ ಪ್ರಣಾಳಿಕೆಯ ಬುನಾದಿ, ಗುಣಮಟ್ಟ ಅವಕಾಶಗಳ ಸೃಷ್ಠಿಯನ್ನು ನಮ್ಮ ಪ್ರಣಾಳಿಕೆಯಲ್ಲಿ ಜೋಡಿಸಲಾಗಿದೆ ಎಂದರು.
ಸಂಕಲ್ಪ ಪತ್ರ ಹೆಸರಿನಲ್ಲಿ ಲೋಕ ಚುನಾವಣೆಗೆ ಪ್ರಣಾಳಿಕೆ ಬಿಡುಗೊಳಿಸಿದ ಬಿಜೆಪಿ
ಉಚಿತ ಪಡಿತರ ಯೋಜನೆ ಮುಂದಿನ 5 ವರ್ಷ ಜಾರಿಯಲ್ಲಿರುತ್ತೆ. 70 ವರ್ಷ ದಾಟಿದ ಎಲ್ಲರನ್ನೂ ಆಯುಷ್ಮಾನ್ ಭಾರತ್ ಯೋಜನೆ ಅಡಿ ತರಲಾಗುತ್ತದೆ. ಇದರಲ್ಲಿ 5 ಲಕ್ಷ ರೂಪಾಯಿ ವಿಮೆ ಇರುತ್ತದೆ. ದೇಶದಲ್ಲಿ 3 ಕೋಟಿ ಮನೆ ನಿರ್ಮಾಣ ಮಾಡಲಾಗುತ್ತದೆ. ಪಿ ಎಂ ಸೂರ್ಯಗರ್ ಉಚಿತ ಯೋಜನೆ ಜಾರಿಗೆ ತರಲಾಗಿದೆ. ಮುದ್ರಾ ಯೋಜನೆಯ ಸಾಲದ ಮೊತ್ತವನ್ನು 20 ಲಕ್ಷ ರೂಪಾಯಿವರೆಗೆ ಹೆಚ್ಚಿಸಲಾಗಿದೆ. ಸ್ವನಿಧಿ ಯೋಜನೆ, ಇದರ ಅನ್ವಯ ಬ್ಯಾಂಕ್ ನಲ್ಲಿ ಗ್ಯಾರಂಟಿ ಇಲ್ಲದೆ ಸಾಲ ಸೌಲಭ್ಯ ಸಿಗಲಿದೆ ಬೀದಿ ಬದಿ ವ್ಯಾಪಾರಿಗಳಿಗೆ 50 ಸಾವಿರಕ್ಕೂ ಹೆಚ್ಚು ಸಾಲ ಸೌಲಭ್ಯ ಸಿಗಲಿದೆ. ಆಯುಷ್ಮಾನ್ ಯೋಜನೆಯನ್ನು ತೃತೀಯ ಲಿಂಗಿಗಳಿಗೂ ವಿಸ್ತರಿಸಲಾಗಿದೆ. ಲಕ್ಪತಿದೀದಿ: 3 ಕೋಟಿ ಲಕ್ಪತಿ ದೀದಿಯರನ್ನು ಸೃಷ್ಟಿ ಮಾಡುವ ಉದ್ದೇಶ ಇದೆ (3 ಕೋಟಿ ಮಹಿಳೆಯರನ್ನು ಲಕ್ಷಾಧಿಪತಿಯರನ್ನಾಗಿಸುವ ಗುರಿ)
ಕಿಸಾನ್ ಕ್ರೆಡಿಟ್ ಯೋಜನೆಯಲ್ಲಿ ಪಶುಪಾಲಕರು, ಮೀನುಗಾರರನ್ನು ಸೇರಿಸಲಾಗುತ್ತದೆ ಹಾಗೆಯೇ ಅನ್ನ ಭಂಡಾರ ಯೋಜನೆಯಡಿ ಶ್ರೀ ಅನ್ನ ಯೋಜನೆಗೆ ಹೆಚ್ಚಿನ ಒತ್ತು ನೀಡಲಾಗುತ್ತದೆ. ಇದರಿಂದ 2 ಕೋಟಿ ಸಣ್ಣ ರೈತರಿಗೆ ವಿಶೇಷ ಲಾಭ ಇದೆ. ಹಾಗೆಯೇ ತರಕಾರಿ ಮೀನುಗಾರಿಕೆ ಕ್ಷೇತ್ರದಲ್ಲೂ ವ್ಯಾಪಕ ಸುಧಾರಣೆ, ನ್ಯಾನೋ ಯೂರಿಯಾ ಯೋಜನೆಯನ್ನು ವಿಸ್ತರಿಸಲಾಗಿದೆ. ಭಾರತವನ್ನು ಫುಡ್ ಫ್ರೊಸೆಸಿಂಗ್ ಹಬ್ ಆಗಿ ನಿರ್ಮಿಸಲಾಗುವುದು. ಹಾಗೆಯೇ ಸಂತ ತಿರುವಳ್ಳುವರ್ ಸಾಂಸ್ಕೃತಿಕ ಕೇಂದ್ರಗಳ ನಿರ್ಮಾಣ, ಈ ಮೂಲಕ ಹೊಯ್ಸಳರು ಸೇರಿ ಪಾರಂಪರಿಕ ಸ್ಥಳಗಳನ್ನು ವಿಶ್ವದ ಟೂರಿಸಂ ಜೊತೆಗೆ ಜೋಡಣೆ.
ಮಿಠಾಯಿ ಅಂಗಡಿಗೆ ಹಠಾತ್ ಭೇಟಿ; ಜಾಮೂನು ತಿಂದು ಸ್ಟಾಲಿನ್ಗೆ ಮೈಸೂರು ಪಾಕ್ ತಿನ್ನಿಸಿದ ರಾಹುಲ್ ಗಾಂಧಿ!
ಹೋ ಸ್ಟೇ ಯೋಜನೆಯ ಮೂಲಕ ವಿಶೇಷವಾಗಿ ಮಹಿಳಾ ಆರ್ಥಿಕ ಸಬಲೀಕರಣಕ್ಕೆ ಒತ್ತು. ಡಿಜಿಟಲ್ ಮೂಲ ಸೌಕರ್ಯದ ಮೂಲಕ ಫಿಜಿಕಲ್ ಹಾಗೂ ಸೋಶಿಯಲ್ ಮೂಲ ಸೌಕರ್ಯಕ್ಕೆ ಒತ್ತು. ವಂದೇ ಭಾರತ್ ರೈಲು ಸೇವೆ ವಿಸ್ತರಣೆ, ದೇಶದ ದಕ್ಷಿಣ, ಉತ್ತರ ಪೂರ್ವ ಭಾಗಗಳಲ್ಲಿ ಬುಲೆಟ್ ಟ್ರೈನ್ ಯೋಜನೆ ವಿಸ್ತರಣೆ ಮಾಡಲಾಗುವುದು ಎಂದು ಪ್ರಧಾನಿ ಮೋದಿ ಸಂಕಲ್ಪ ಪತ್ರ ಬಿಡುಗಡೆಗೊಳಿಸಿ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.