ಲೋಕಸಭಾ ಚುನಾವಣೆ ಹಿನ್ನೆಲೆ: ಮಾಗಡಿ ವಿಧಾ​ನ​ಸಭಾ ಕ್ಷೇತ್ರ​ದಲ್ಲಿ ಆಪ​ರೇ​ಷನ್‌ ಹಸ್ತ!

Published : Aug 04, 2023, 07:08 PM IST
ಲೋಕಸಭಾ ಚುನಾವಣೆ ಹಿನ್ನೆಲೆ: ಮಾಗಡಿ ವಿಧಾ​ನ​ಸಭಾ ಕ್ಷೇತ್ರ​ದಲ್ಲಿ ಆಪ​ರೇ​ಷನ್‌ ಹಸ್ತ!

ಸಾರಾಂಶ

ಮುಂಬರುವ ಲೋಕಸಭಾ ಚುನಾವಣೆ ಹಿನ್ನೆ​ಲೆ​ಯಲ್ಲಿ ಕಾಂಗ್ರೆಸ್‌ ಪಕ್ಷ ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ಆಪರೇಷನ್‌ ಹ​ಸ್ತಕ್ಕೆ ಸಿದ್ಧವಾಗುತ್ತಿದೆ. ಈಗಾಗಲೇ ಜೆಡಿಎಸ್‌ನ ಪ್ರಮುಖ ನಾಯಕರಿಗೆ ಕಾಂಗ್ರೆಸ್‌ ಗಾಳ ಹಾಕುವ ಮೂಲಕ ಜೆಡಿಎಸ್‌ಗೆ ಮತ್ತೊಂದು ದೊಡ್ಡ ಹೊಡೆತ ನೀಡಲು ತಯಾರಿ ನಡೆ​ಸಿದೆ. 

ಎಚ್‌.ಆರ್‌.ಮಾ​ದೇಶ್‌

ಮಾಗಡಿ (ಆ.04): ಮುಂಬರುವ ಲೋಕಸಭಾ ಚುನಾವಣೆ ಹಿನ್ನೆ​ಲೆ​ಯಲ್ಲಿ ಕಾಂಗ್ರೆಸ್‌ ಪಕ್ಷ ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ಆಪರೇಷನ್‌ ಹ​ಸ್ತಕ್ಕೆ ಸಿದ್ಧವಾಗುತ್ತಿದೆ. ಈಗಾಗಲೇ ಜೆಡಿಎಸ್‌ನ ಪ್ರಮುಖ ನಾಯಕರಿಗೆ ಕಾಂಗ್ರೆಸ್‌ ಗಾಳ ಹಾಕುವ ಮೂಲಕ ಜೆಡಿಎಸ್‌ಗೆ ಮತ್ತೊಂದು ದೊಡ್ಡ ಹೊಡೆತ ನೀಡಲು ತಯಾರಿ ನಡೆ​ಸಿದೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸಂಸದ ಡಿ.ಕೆ. ಸುರೇಶ್‌ ರಾಮನಗರ ಮತ್ತು ಮಾಗಡಿ ಕ್ಷೇತ್ರ​ಗ​ಳಲ್ಲಿ ಜೆಡಿಎಸ್‌ ಅಭ್ಯರ್ಥಿಗಳನ್ನು ಸೋಲಿಸುವಲ್ಲಿ ಯಶಸ್ವಿಯಾದರು. 

ಈಗ ಲೋಕಸಭಾ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಅವರು, ಮಾಗಡಿಯಲ್ಲಿನ ಜೆಡಿಎಸ್‌ ಪ್ರಮುಖ ನಾಯಕರನ್ನು ಕಾಂಗ್ರೆಸ್‌ಗೆ ಸೆಳೆ​ಯಲು ಪ್ರಯತ್ನ ನಡೆ​ಸಿ​ದ್ದಾರೆ ಎನ್ನ​ಲಾ​ಗಿದೆ. ಜೆಡಿಎಸ್‌ ನಾಯಕರು ಬಹಿರಂಗವಾಗಿಯೇ ಕಾಂಗ್ರೆಸ್‌ ಸಂಪರ್ಕದಲ್ಲಿ ಇರುವುದು ಮಾಜಿ ಶಾಸಕ ಎ.ಮಂಜುನಾಥ್‌ ಅವರಿಗೂ ಗೊ​ತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಇರುವುದರಿಂದ ನಾಯಕರು ಮುಂದಿನ ಭವಿಷ್ಯದ ಹಿನ್ನೆಲೆಯಲ್ಲಿ ಪಕ್ಷಾಂತರಕ್ಕೆ ಸಿದ್ದರಾಗುತ್ತಿ​ರು​ವುದು ಗೊತ್ತಿದ್ದರೂ ಕೂಡ ಮಂಜು​ನಾಥ್‌ ಏನು ಮಾಡದ ಸ್ಥಿತಿಯಲ್ಲಿದ್ದಾರೆ.

Dharwad: ಗೋಲ್ಡ್ ಕ್ರೌನ್ ಸಬಲೈಮ್ ಬಿಲ್ಡರ್ಸ್‌ಗೆ ದಂಡ ಮತ್ತು ಪರಿಹಾರದ ಆದೇಶ

ಸಂಸದರ ತೀರ್ಮಾನವೇ ಅಂತಿಮ: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸಂಸದ ಡಿ.ಕೆ. ಸುರೇಶ್‌ ತಂತ್ರದಿಂದಾಗಿ ಬಾಲಕೃಷ್ಣರವರು ಮತ್ತೊಮ್ಮೆ ಶಾಸಕರಾಗಿ ಆಯ್ಕೆಯಾಗಲು ಕಾರ​ಣ. ಈಗ ಅವರ ಚುನಾವಣೆಯಲ್ಲಿ ಗೆಲ್ಲುವ ನಿಟ್ಟಿನಲ್ಲಿ ಜೆಡಿಎಸ್‌ ನಾಯಕರನ್ನು ಕಾಂಗ್ರೆಸ್‌ಗೆ ಸೆಳೆಯಲು ತಂತ್ರ ಮಾಡಿದ್ದು ಇದಕ್ಕೆ ಶಾಸಕ ಬಾಲಕೃಷ್ಣ ಕೂಡ ಒಪ್ಪಿಗೆ ಕೊಟ್ಟಿದ್ದಾರೆ. ಸಂಸದರಿಗೆ ಅನುಕೂಲ ಆಗು​ವು​ದಾ​ದರೆ ಜೆಡಿಎಸ್‌ ನಾಯಕರು ನಮ್ಮ ಪಕ್ಷಕ್ಕೆ ಸೇರಲಿ ಎಂದು ಬಾಲ​ಕೃ​ಷ್ಣ​ರ​ವರು ಗ್ರೀನ್‌ ಸಿಗ್ನಲ್‌ ಕೊಟ್ಟಿರುವುದರಿಂದ ಈಗ ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ನ ಪ್ರಮುಖ ನಾಯಕರು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಲು ಸಿದ್ದ​ರಾ​ಗು​ತ್ತಿ​ದ್ದಾರೆ. 

ಶಕ್ತಿ ಯೋಜನೆ ಎಫೆಕ್ಟ್: ಚಿಕ್ಕಮಗಳೂರಿನಲ್ಲಿ ಖಾಸಗಿ ಬಸ್‌ಗಳ ಸಂಚಾರ ಸ್ಥಗಿತ!

ಇನ್ನೂ ಕೆಲವೇ ದಿನಗಳಲ್ಲಿ ಪ್ರಮುಖ ನಾಯಕರು ಜೆಡಿ​ಎಸ್‌ ತೊರೆ​ಯ​ಲಿ​ದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಶಾಸಕ ಎ.ಮಂಜು​ನಾಥ್‌ ತಮ್ಮ ಪಕ್ಷದ ನಾಯಕರನ್ನು ತಮ್ಮ ಪಕ್ಷದಲ್ಲೇ ಉಳಿಸಿಕೊಳ್ಳಲು ಯಾವ ತಂತ್ರ ಮಾಡುತ್ತಾರೆಂಬದು ದೊಡ್ಡ ಪ್ರಶ್ನೆಯಾಗಿದೆ. ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ಈಗ ಆಪರೇಷನ್‌ ಹಸ್ತ​ದ ಮಾತುಗಳೇ ಕೇಳಿ ಬರುತ್ತಿದ್ದು ಲೋಕಸಭಾ ಚುನಾವಣೆ ವೇಳೆಗೆ ಯಾವ ಯಾವ ನಾಯಕರು ಪಕ್ಷಾಂತರ ಆಗುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!