
ಬೆಳಗಾವಿ (ಜೂ.5): ಡಬಲ್ ಡಿಜಿಟ್ ರೀಚ್ ಆಗದಿರುವುದಕ್ಕೆ ನಮ್ಮ ನಾಯಕರ ಓವರ್ ಕಾನ್ಫಿಡೆನ್ಸ್ ಕಾರಣ ಎಂದು ಪರೋಕ್ಷವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ವಿರುದ್ಧ ಸಚಿವ ಸತೀಶ್ ಜಾರಕಿಹೊಳಿ ಅಸಮಾಧಾನ ವ್ಯಕ್ತಪಡಿಸಿದರು.
ಇಂದು ಗೋಕಾಕ ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವ ಜಾರಕಿಹೊಳಿ, ಡೈರೆಕ್ಟರ್, ಪ್ರಡ್ಯೂಸರ್ ಫೇಲ್ ಆದ್ರೆ ಈ ರೀತಿಯ ಫಲಿತಾಂಶ ನಿರೀಕ್ಷಿತ. ಚುನಾವಣೆಗೆ ಸಮಯ ಕಡಿಮೆ ಇರುತ್ತೆ. ಆ ಸಮಯದಲ್ಲಿ ಅಲರ್ಟ್ ಆಗಿರಬೇಕು. ಆಗಲೇ ನಾವು ಕೆಲಸ ಮಾಡಬೇಕು. ಇಲ್ಲವಾದರೆ ಚುನಾವಣೆ ಬಂದು ಹೋಗಿರುತ್ತದೆ. ನಮ್ಮ ನಾಯಕರು ಹಲವು ಕ್ಷೇತ್ರಗಳನ್ನು ನಿರ್ಲಕ್ಷಿಸಿದ್ದೂ ನಮ್ಮ ಹಿನ್ನೆಡೆಗೆ ಕಾರಣವಾಗಿದೆ ಎಂದರು.
ಕಾಂಗ್ರೆಸ್ಗೆ ಶಾಪವಾದ ಒಳ ಜಗಳ, ನೇಹಾ ಕೊಲೆ ಪ್ರಕರಣ!
ಹೋದರೂ, ಹೋಗದಿದ್ರೂ ಗೆಲ್ಲುತ್ತೇವೆಂಬ ಓವರ್ ಕಾನ್ಫಿಡೆನ್ಸ್ನಿಂದ ಇನ್ನೂ ಕೆಲವು ಕ್ಷೇತ್ರಗಳಿಗೆ ಹೋಗಲಿಲ್ಲ. ನಿರೀಕ್ಷಿತ ಪ್ರಮಾಣದಲ್ಲಿ ಪ್ರಚಾರ ಮಾಡಲಿಲ್ಲ. ಹೀಗೆ ಅತಿಯಾದ ವಿಶ್ವಾಸದಿಂದಲೇ ಕಡಿಮೆ ಮತಗಳ ಅಂತರದಿಂದ ಸೋಲಾಗಿದೆ. ಅದಕ್ಕೆ ನಮ್ಮ ನಾಯಕರ ನಿರ್ಲಕ್ಷ್ಯ ಕಾರಣ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.