ಮಹಾರಾಜ ಯದುವೀರ್‌ಗೆ 7,95,503 ಮತ ಹಾಕಿದ ಜನತೆ; ಲೀಡ್ ಕೊಟ್ಟ ಕ್ಷೇತ್ರ ಯಾವುದು ಗೊತ್ತಾ?

Published : Jun 04, 2024, 09:24 PM IST
ಮಹಾರಾಜ ಯದುವೀರ್‌ಗೆ 7,95,503 ಮತ ಹಾಕಿದ ಜನತೆ; ಲೀಡ್ ಕೊಟ್ಟ ಕ್ಷೇತ್ರ ಯಾವುದು ಗೊತ್ತಾ?

ಸಾರಾಂಶ

ಮೈಸೂರು-ಕೊಡಗು ಲೋಕಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಬರೋಬ್ಬರಿ 7,95,503 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಮೈಸೂರು (ಜೂ.04): ರಾಜ್ಯದ ಸಾಂಸ್ಕೃತಿಕ ರಾಜಧಾನಿ ಮೈಸೂರು-ಕೊಡಗು ಲೋಕಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಬರೋಬ್ಬರಿ 7,95,503 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದಾರೆ. ಆದರೆ, 8 ವಿಧಾನಸಭಾ ಕ್ಷೇತ್ರಗಳಲ್ಲಿ ಆರು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್‌ಗೆ ಲೀಡ್ ಕೊಟ್ಟಿದ್ದಾರೆ. ನರಸಿಂಹರಾಜ ಮತ್ತು ಪಿರಿಯಾಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಲೀಡ್ ಪಡೆದುಕೊಂಡಿದೆ.

ಮೈಸೂರು-ಕೊಡಗು ಕ್ಷೇತ್ರದಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ್ ಒಡೆಯರ್ ಅವರು ಒಟ್ಟು 7,95,503 ಮತಗಳನ್ನು ಪಡೆದಿದ್ದಾರೆ. ಇವರ ಎದುರಾಳಿ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ 6,56,241 ಮತಗಳನ್ನು ಪಡೆದಿದ್ದಾರೆ. ಇನ್ನು ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಯದುವೀರ್ ಅವರು 1,39,262 ಮತಗಳ ಅಂತರದಿಂದ ಗೆಲವು ಸಾಧಿಸಿದ್ದಾರೆ. ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಲ್ಲಿನ 8 ವಿಧಾನಸಭಾ ಕ್ಷೇತ್ರಗಳಲ್ಲಿ ಯಾವ ಪಕ್ಷಕ್ಕೆ ಎಷ್ಟು ಮತಗಳು ಬಂದಿವೆ ಎಂಬುದರ ಸ್ಪಷ್ಟ ಮಾಹಿತಿ ಇಲ್ಲಿದೆ ನೋಡಿ...

ಡಾ. ಮಂಜುನಾಥ್ ಒಳ್ಳೆಯ ವ್ಯಕ್ತಿ ಅಂತ ಜನ ಗೆಲ್ಲಿಸಿದ್ದಾರೆ, ಬಿಜೆಪಿಗೆ ಓಟ್ ಹಾಕಿಲ್ಲ: ಡಿ.ಕೆ.ಶಿವಕುಮಾರ್

ಮೈಸೂರು - ಕೊಡಗು ಲೋಕಸಭಾ ಕ್ಷೇತ್ರ ಚುನಾವಣೆ ಫಲಿತಾಂಶದ ವಿವರ
01) ಮಡಿಕೇರಿ ವಿಧಾನ ಸಭಾ ಕ್ಷೇತ್ರ
ಬಿಜೆಪಿ :-  108402
ಕಾಂಗ್ರೆಸ್ :- 66994
ಬಿಜೆಪಿ ಲೀಡ್ 41408

02) ವಿರಾಜಪೇಟೆ ವಿಧಾನ ಸಭಾ ಕ್ಷೇತ್ರ
ಬಿಜೆಪಿ  :- 99804
ಕಾಂಗ್ರೆಸ್ :- 67353
ಬಿಜೆಪಿ ಲಿಡ್ 32451

03) ಪಿರಿಯಾಪಟ್ಟಣ ವಿಧಾನ ಸಭಾ ಕ್ಷೇತ್ರ
ಬಿಜೆಪಿ :- 71237
ಕಾಂಗ್ರೆಸ್ :- 82981
ಕಾಂಗ್ರೆಸ್ ಲೀಡ್ 11744

04) ಹುಣಸೂರು ವಿಧಾನ ಸಭಾ ಕ್ಷೇತ್ರ
ಬಿಜೆಪಿ :- 95266
ಕಾಂಗ್ರೆಸ್ :- 92198
ಬಿಜೆಪಿ ಲೀಡ್ 3068

05) ಚಾಮುಂಡೇಶ್ವರಿ ವಿಧಾನ ಸಭಾ ಕ್ಷೇತ್ರ
ಬಿಜೆಪಿ :- 143327
ಕಾಂಗ್ರೆಸ್ :- 10683
ಬಿಜೆಪಿ ಲೀಡ್ 37244

06) ಕೃಷ್ಣರಾಜ ವಿಧಾನಸಭಾ ಕ್ಷೇತ್ರ
ಬಿಜೆಪಿ :- 104596
ಕಾಂಗ್ರೆಸ್ :- 50171
ಬಿಜೆಪಿ ಲೀಡ್ 54425

07) ಚಾಮರಾಜ ವಿಧಾನ ಸಭಾ ಕ್ಷೇತ್ರ
ಬಿಜೆಪಿ :- 105480
ಕಾಂಗ್ರೆಸ್ :- 49083
ಬಿಜೆಪಿ ಲೀಡ್ 56397

08) ನರಸಿಂಹರಾಜ ವಿಧಾನ ಸಭಾ ಕ್ಷೇತ್ರ
ಬಿಜೆಪಿ :- 62279
ಕಾಂಗ್ರೆಸ್ : 138876
ಕಾಂಗ್ರೆಸ್ ಲೀಡ್ 76597

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನಾನು ಕೃಷ್ಣತತ್ತ್ವ ನಂಬಿದವನೇ ಹೊರತು, ಕಾಂಗ್ರೆಸ್‌ನ ಕಂಸ ಹಿಂಸೆಯನ್ನಲ್ಲ: ಹೆಚ್.ಡಿ.ಕುಮಾರಸ್ವಾಮಿ!
ಬಿಹಾರದಲ್ಲಿ NDA ಗೆಲುವು ನಿಜ, ಆದ್ರೆ ಸೋತಿದ್ದು ಪ್ರಜಾಪ್ರಭುತ್ವ: ತೇಜಸ್ವಿ ಯಾದವ್