ಸಮಾಜವಾದಿ ಪಾರ್ಟಿ ಪ್ರಣಾಳಿಕೆ ಬಿಡುಗಡೆ; ಬಡ ರೈತರಿಗೆ 5000 ರು. ಪಿಂಚಣಿ, ₹ 500 ಮೊತ್ತದ ಮೊಬೈಲ್‌ ಡಾಟಾ!

Published : Apr 11, 2024, 07:41 AM IST
ಸಮಾಜವಾದಿ ಪಾರ್ಟಿ ಪ್ರಣಾಳಿಕೆ ಬಿಡುಗಡೆ; ಬಡ ರೈತರಿಗೆ 5000 ರು. ಪಿಂಚಣಿ, ₹ 500 ಮೊತ್ತದ ಮೊಬೈಲ್‌ ಡಾಟಾ!

ಸಾರಾಂಶ

ಲೋಕಸಭಾ ಚುನಾವಣೆಗೆ ಸಮಾಜವಾದಿ ಪಕ್ಷ ಭರ್ಜರಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಅದರಲ್ಲಿ ದೇಶವ್ಯಾಪಿ ಜನಗಣತಿ, ಸೇನಾ ನೇಮಕಾತಿಗಾಗಿ ಜಾರಿಗೆ ತಂದ ಅಗ್ನಿವೀರ್‌ ಯೋಜನೆ ರದ್ದು, ಎಸ್ಸಿ, ಎಸ್ಟಿ ಹಾಗೂ ಹಿಂದುಳಿದ ವರ್ಗದವರಿಗೆ ಸರ್ಕಾರಿ ಹುದ್ದೆಯ ಭರವಸೆ ನೀಡಲಾಗಿದೆ.

ಲಖನೌ (ಏ.11): ಲೋಕಸಭಾ ಚುನಾವಣೆಗೆ ಸಮಾಜವಾದಿ ಪಕ್ಷ ಭರ್ಜರಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಅದರಲ್ಲಿ ದೇಶವ್ಯಾಪಿ ಜನಗಣತಿ, ಸೇನಾ ನೇಮಕಾತಿಗಾಗಿ ಜಾರಿಗೆ ತಂದ ಅಗ್ನಿವೀರ್‌ ಯೋಜನೆ ರದ್ದು, ಎಸ್ಸಿ, ಎಸ್ಟಿ ಹಾಗೂ ಹಿಂದುಳಿದ ವರ್ಗದವರಿಗೆ ಸರ್ಕಾರಿ ಹುದ್ದೆಯ ಭರವಸೆ ನೀಡಲಾಗಿದೆ.

ಜೊತೆಗೆ ಮಹಿಳೆಯರಿಗೆ ಶಾಸನಸಭೆಗಳಲ್ಲಿ ಶೇ.33ರಷ್ಟು ಮೀಸಲು, ಸಣ್ಣ ಮತ್ತು ಭೂಮಿ ರಹಿತ ರೈತರಿಗೆ ಮಾಸಿಕ 5000 ರು. ಪಿಂಚಣಿ, ಬಡವರಿಗೆ ಉಚಿತ ಪಡಿತರ, ಪಡಿತರ ಕಾರ್ಡ್‌ ಹೊಂದಿದವರಿಗೆ ಮಾಸಿಕ 500 ರು. ಮೊತ್ತದ ಮೊಬೈಲ್‌ ಡಾಟಾ ನೀಡಲಾಗುವುದು ಎಂದು ಪಕ್ಷದ ಅಧ್ಯಕ್ಷ ಅಖಿಲೇಶ್‌ ಸಿಂಗ್‌ ಯಾದವ್‌ ಚುನಾವಣಾ ಪ್ರಣಾಳಿಕೆ ಬಿಡುಗಡೆ ವೇಳೆ ಭರವಸೆ ನೀಡಿದರು.
ಸಮಾಜವಾದಿ ಪಕ್ಷ ಇಂಡಿಯಾ ಮೈತ್ರಿಕೂಟದ ಭಾಗವಾಗಿದ್ದು, ತನ್ನ ನೆಲೆ ಉತ್ತರಪ್ರದೇಶದಲ್ಲೇ 5ಕ್ಕಿಂತ ಹೆಚ್ಚು ಸ್ಥಾನ ಗೆಲ್ಲುವುದು ಕಷ್ಟ ಎಂದು ಚುನಾವಣಾ ಪೂರ್ವ ಸಮೀಕ್ಷೆಗಳು ಹೇಳಿವೆ.

ಚುನಾವಣೆ, ಪ್ರಚಾರ ನೋಡಲು ವಿಶ್ವದ 25 ಪಕ್ಷಕ್ಕೆ ಬಿಜೆಪಿ ಆಹ್ವಾನ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ