ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಿಂದ ಪಕ್ಷಕ್ಕೆ ಮುಜುಗರ: ಅರವಿಂದ ಲಿಂಬಾವಳಿ

Published : May 02, 2024, 11:25 AM IST
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಿಂದ ಪಕ್ಷಕ್ಕೆ ಮುಜುಗರ: ಅರವಿಂದ ಲಿಂಬಾವಳಿ

ಸಾರಾಂಶ

ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಿಂದ ಬಿಜೆಪಿ ಹಾಗೂ ಮೈತ್ರಿ ಪಕ್ಷಗಳಿಗೆ ಮುಜುಗರವಾಗಿದೆ. ಇದನ್ನು ಒಪ್ಪಿಕೊಳ್ಳಬೇಕು ಎಂದು ಬಿಜೆಪಿ ಮಾಜಿ ಸಚಿವ ಅರವಿಂದ್ ಲಿಂಬಾವಳಿ ಖಂಡಿಸಿದರು.

ವಿಜಯಪುರ (ಮೇ.2): ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಿಂದ ಬಿಜೆಪಿ ಹಾಗೂ ಮೈತ್ರಿ ಪಕ್ಷಗಳಿಗೆ ಮುಜುಗರವಾಗಿದೆ. ಇದನ್ನು ಒಪ್ಪಿಕೊಳ್ಳಬೇಕು ಎಂದು ಬಿಜೆಪಿ ಮಾಜಿ ಸಚಿವ ಅರವಿಂದ್ ಲಿಂಬಾವಳಿ ಖಂಡಿಸಿದರು.

ವಿಜಯಪುರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಭಿವೃದ್ಧಿ ಆಧಾರದ ಮೇಲೆ  ಮತ ಯಾಚನೆ ನಡೆಸಿದೆ. ಕಳೆದ ಹತ್ತು ವರ್ಷಗಳ ಕಾಲ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಕೈಗೊಂಡ ಅಭಿವೃದ್ಧಿ, ಸುರಕ್ಷತೆ ಆಧಾರದ ಮೇಲೆ ಪ್ರಚಾರ ಕಾರ್ಯ ಕೈಗೊಳ್ಳಲಾಗಿದೆ. ಹೀಗಾಗಿ ಜನ ಅಭಿವೃದ್ಧಿಗಾಗಿ ಮತ್ತೆ ಬಿಜೆಪಿಯನ್ನು ಬೆಂಬಲಿಸಲು ಉತ್ಸುಕರಾಗಿದ್ದಾರೆ ಎಂದರು.

 

ಪ್ರಧಾನಿ ಮೋದಿ ಮಹಿಳೆಯರ ರಕ್ಷಣೆಗೆ ಏನು ಮಾಡಿದ್ದಾರೆ? ಪ್ರಿಯಾಂಕಾ ಗಾಂಧಿ

ಸಾಮಾನ್ಯವಾಗಿ ಪ್ರತಿಪಕ್ಷಗಳು ಆಡಳಿತ ವಿರೋಧಿ ಅಲೆ ಬಳಸಿಕೊಂಡು ಮತಯಾಚನೆ ಮಾಡುವುದು ವಾಡಿಕೆ. ಆದರೆ ಕಳೆದ ಹತ್ತು ವರ್ಷಗಳಲ್ಲಿ ಪ್ರಧಾನಿ ಮೋದಿಯವರ ಮೇಲೆ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ. ಮೋದಿ ಬಗ್ಗೆ  ಟೀಕೆ ಮಾಡಲು ಯಾವುದೇ ಅವಕಾಶ ಇಲ್ಲದ ಕಾರಣ ಪ್ರತಿಪಕ್ಷಗಳು ಸುಳ್ಳು ಆರೋಪದಲ್ಲಿ ತೊಡಗಿಸಿಕೊಂಡಿವೆ. ಅದರ ಭಾಗವಾಗಿ ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಕಾಂಗ್ರೆಸ್ ರಾಜಕೀಕರಣಗೊಳಿಸುತ್ತಿದೆ. ಕಾಂಗ್ರೆಸ್ ಸರ್ಕಾರವೇ ಎಸ್‌ಐಟಿ ರಚನೆ ಮಾಡಿದೆ. ತನಿಖೆ ಆಗಲಿದೆ. ಕಾನೂನು ಏನು ಕ್ರಮ ಕೈಗೊಳ್ಳುತ್ತದೆ ಕಾದು ನೋಡಬೇಕು ಎಂದರು.

ನಾವು ಕೂಡ ಈ ಪ್ರಕರಣವನ್ನು ಖಂಡಿಸುತ್ತೇವೆ, ಶೀಘ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂದರು. ಇದೇ ವೇಳೆ ಕಲಬುರಗಿ ನೇಹಾ ಹಿರೇಮಠ ಹತ್ಯೆ ಪ್ರಕರಣ ಸಂಬಂಧ ಮಾತನಾಡಿದ ಅವರು, ನೇಹಾ ಪ್ರಕರಣ ಕೇವಲ ಒಂದು ಕೊಲೆ ಮಾತ್ರವಲ್ಲ, ಅದಕ್ಕೂ ಇದಕ್ಕೂ ಹೋಲಿಕೆ ಮಾಡುವುದು ಸರಿಯಲ್ಲ ಎಂದರು.

Prajwal Revanna: ಮಗನ ಪೆನ್‌ಡ್ರೈವ್‌ ಬಗ್ಗೆ ಮೌನ ಮುರಿದ ರೇವಣ್ಣ: ಅಶ್ಲೀಲ ವಿಡಿಯೋ ಬಗ್ಗೆ ಹೇಳಿದ್ದೇನು..?

ಕರ್ನಾಟಕದಲ್ಲಿ ಬಾಂಬ್ ಸ್ಫೋಟಿಸಿ ಕಲ್ಕತ್ತಾದಲ್ಲಿ ಸಿಕ್ಕಿ ಹಾಕಿಕೊಳ್ಳುತ್ತಾರೆ ಎಂದರೆ ಇದರ ಹಿಂದೆ ಜಿಹಾದಿಗಳ ಕೈವಾಡದ ಶಂಕೆಯಿದೆ. ನೇಹಾ ಪ್ರಕರಣ ದೇಶ ವಿರೋಧಿ ಚಟುವಟಿಕೆಗಳ ಸಂಬಂಧವಿರಬಹುದು ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ ಪ್ರಕರಣ: ಎಸ್ಐಟಿ ತನಿಖೆಗೆ ಸಿ.ಟಿ.ರವಿ ಆಗ್ರಹ
ಅಕ್ಕಿ ಅಕ್ರಮದಲ್ಲಿ ಬಿಜೆಪಿಯವರೇ ಶಾಮೀಲು: ಸಚಿವ ಪ್ರಿಯಾಂಕ್ ಖರ್ಗೆ