ಕಾಂಗ್ರೆಸ್‌ನಿಂದ ದೇಶ ಒಡೆಯುವ ತಂತ್ರ: ಮೋದಿ ತೀವ್ರ ವಾಗ್ದಾಳಿ

Published : Apr 24, 2024, 07:19 AM IST
ಕಾಂಗ್ರೆಸ್‌ನಿಂದ ದೇಶ ಒಡೆಯುವ ತಂತ್ರ: ಮೋದಿ ತೀವ್ರ ವಾಗ್ದಾಳಿ

ಸಾರಾಂಶ

‘ಗೋವಾ ರಾಜ್ಯದ ಮೇಲೆ ಸಂವಿಧಾನವನ್ನು ಹೇರಲಾಗಿದೆ’ ಎಂಬ ದಕ್ಷಿಣ ಗೋವಾ ಕಾಂಗ್ರೆಸ್‌ ಅಭ್ಯರ್ಥಿ ವಿರಿಯಾಟೋ ಫರ್ನಾಂಡಿಸ್‌ ಅವರ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ‘ಇದು ದೇಶವನ್ನು ಒಡೆಯುವ ತಂತ್ರ’ ಎಂದು ಕಿಡಿಕಾರಿದ್ದಾರೆ.

ಸಕ್ತಿ (ಛತ್ತೀಸ್‌ಗಢ) (ಏ.24):  ‘ಗೋವಾ ರಾಜ್ಯದ ಮೇಲೆ ಸಂವಿಧಾನವನ್ನು ಹೇರಲಾಗಿದೆ’ ಎಂಬ ದಕ್ಷಿಣ ಗೋವಾ ಕಾಂಗ್ರೆಸ್‌ ಅಭ್ಯರ್ಥಿ ವಿರಿಯಾಟೋ ಫರ್ನಾಂಡಿಸ್‌ ಅವರ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ‘ಇದು ದೇಶವನ್ನು ಒಡೆಯುವ ತಂತ್ರ’ ಎಂದು ಕಿಡಿಕಾರಿದ್ದಾರೆ. 

ಈ ಹಿಂದೆ ದಕ್ಷಿಣ ಭಾರತವನ್ನು ಪ್ರತ್ಯೇಕ ದೇಶ ಮಾಡುವ ಕುರಿತು ಮಾತನಾಡಿದ್ದ ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್‌ ಸಂಸದ ಡಿ.ಕೆ. ಸುರೇಶ್‌ ಹೇಳಿಕೆಯನ್ನೂ ಪುನಃ ಪ್ರಸ್ತಾಪಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಛತ್ತೀಸ್‌ಗಢದ ಶಕ್ತಿ ಜಿಲ್ಲೆಯಲ್ಲಿ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ಮೋದಿ, ''''''''ಧರ್ಮದ ಹೆಸರಿನಲ್ಲಿ ದೇಶವನ್ನು ವಿಭಜಿಸುವ ಕಾಂಗ್ರೆಸ್ ಸ್ವಾತಂತ್ರ್ಯದ ಮೊದಲ ದಿನದಿಂದಲೂ ತುಷ್ಟೀಕರಣದಲ್ಲಿ ತೊಡಗಿದೆ. ದಲಿತರು, ಆದಿವಾಸಿಗಳು ಮತ್ತು ಹಿಂದುಳಿದ ವರ್ಗದವರು ಅಧಿಕಾರದಲ್ಲಿ ಪಾಲ್ಗೊಳ್ಳುವುದನ್ನು ಕಾಂಗ್ರೆಸ್ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಈಗ ಪಕ್ಷವು ದೊಡ್ಡ ಆಟವನ್ನು ಪ್ರಾರಂಭಿಸಿದೆ. ಈ ಹಿಂದೆ ಕರ್ನಾಟಕದ ಕಾಂಗ್ರೆಸ್ ಸಂಸದರೊಬ್ಬರು (ಡಿ.ಕೆ. ಸುರೇಶ್) ದಕ್ಷಿಣ ಭಾರತವನ್ನು ಪ್ರತ್ಯೇಕ ದೇಶ ಎಂದು ಘೋಷಿಸಬೇಕು ಎಂದು ಹೇಳಿದರು. ಈಗ ಗೋವಾದಿಂದ ಕಾಂಗ್ರೆಸ್ ಅಭ್ಯರ್ಥಿಯೊಬ್ಬರು (ಫರ್ನಾಂಡಿಸ್‌) ಗೋವಾಗೆ ಭಾರತೀಯ ಸಂವಿಧಾನವು ಅನ್ವಯಿಸುವುದಿಲ್ಲ ಎಂಬ ಹೇಳಿಕೆ ನೀಡಿದ್ದಾರೆ’ ಎಂದು ಆರೋಪಿಸಿದರು.

ನಾನು ಬಿ.ಆರ್.ಅಂಬೇಡ್ಕರ್ ಅವರನ್ನು ಆರಾಧಿಸುವ ವ್ಯಕ್ತಿ: ನರೇಂದ್ರ ಮೋದಿ

‘ಗೋವಾದಲ್ಲಿ ಸಂವಿಧಾನವನ್ನು ಬಲವಂತವಾಗಿ ಹೇರಲಾಗಿದೆ ಎಂದು ಅವರು ಹೇಳುತ್ತಿದ್ದಾರೆ. ಇದು ಅಂಬೇಡ್ಕರ್ ಅವರಿಗೆ ಮಾಡಿದ ಅವಮಾನವಲ್ಲವೇ? ಇದು ಸಂವಿಧಾನಕ್ಕೆ ಮಾಡಿದ ಅವಮಾನವಲ್ಲವೇ? ಇದು ಭಾರತದ ಸಂವಿಧಾನದ ತಿರುಚುವಿಕೆ ಅಲ್ಲವೇ? ಇಂದು ಗೋವಾದಲ್ಲಿ ಕಾಂಗ್ರೆಸ್ ಸಂವಿಧಾನವನ್ನು ತಿರಸ್ಕರಿಸುತ್ತಿದೆ. ನಾಳೆ ಇಡೀ ದೇಶದಲ್ಲಿ ಅದೇ ರೀತಿ ಮಾಡಲಿ’ ಎಂದು ಪ್ರಧಾನಿ ಎಚ್ಚರಿಸಿದರು.‘ಕಾಂಗ್ರೆಸ್ ಅಭ್ಯರ್ಥಿ ಈ ಹೇಳಿಕೆಯನ್ನು ಸಾರ್ವಜನಿಕವಾಗಿ ನೀಡಿದ್ದಾರೆ ಎಂದರೆ ಅವರಿಗೆ ಅವರ ನಾಯಕನ ಬೆಂಬಲವಿದೆ ಎಂದು ಅರ್ಥ. ಇದು ದೇಶವನ್ನು ಒಡೆಯುವ ತಂತ್ರವಾಗಿದೆ. ದೇಶದ ಬಹುಪಾಲು ಭಾಗವು ಕಾಂಗ್ರೆಸ್ ಅನ್ನು ತಿರಸ್ಕರಿಸಿದೆ’ ಎಂದು ಮೋದಿ ಪರೋಕ್ಷವಾಗಿ ರಾಹುಲ್‌ ಗಾಂಧಿಗೆ ಚಾಟಿ ಬೀಸಿದರು.

ಕಾಂಗ್ರೆಸ್​ಗೆ ನರೇಂದ್ರ ಮೋದಿ ಸಂಪತ್ತಿನ ಸವಾಲ್!

ಫರ್ನಾಂಡಿಸ್‌ ಹೇಳಿದ್ದೇನು?:

ದಕ್ಷಿಣ ಗೋವಾದ ಕಾಂಗ್ರೆಸ್ ಅಭ್ಯರ್ಥಿ ವಿರಿಯಾಟೊ ಫೆರ್ನಾಂಡಿಸ್‌ ಸೋಮವಾರ ಮಾತನಾಡಿ, ‘ಪೋರ್ಚುಗೀಸ್ ಆಳ್ವಿಕೆಯಿಂದ ವಿಮೋಚನೆಗೊಂಡ ನಂತರ ಗೋವಾ ತನ್ನ ಭವಿಷ್ಯವನ್ನು ನಿರ್ಧರಿಸುತ್ತದೆ ಎಂದು ಅಂದಿನ ಪ್ರಧಾನಿ ಜವಾಹರಲಾಲ್ ನೆಹರು ಹೇಳಿದ್ದರು. ಆದರೆ ಇದು ಸಾಕಾರಗೊಳ್ಳಲಿಲ್ಲ. ಅದರ ಬದಲಾಗಿ ಭಾರತೀಯ ಸಂವಿಧಾನವನ್ನು ರಾಜ್ಯದ ಮೇಲೆ ಬಲವಂತವಾಗಿ ಹೇರಲಾಯಿತು’ ಎಂದಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಯಾವುದೇ ಕ್ಷಣದಲ್ಲಾದರೂ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಉದಯ ಕದಲೂರು ಓಪನ್ ಹೇಳಿಕೆ
ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ