
ಬೆಂಗಳೂರು(ಫೆ. 24) ಕಾಂಗ್ರೆಸ್ನಲ್ಲಿ ಟಿಕೆಟ್ಗಾಗಿ ಮಹಿಳೆಯರು ಲಾಬಿ ಆರಂಭಿಸಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕರ ಪತ್ನಿ ಹಾಗೂ ಪುತ್ರಿಯರಿಂದಲೇ ಭಾರಿ ಪೈಪೋಟಿ ಆರಂಭವಾಗಿದೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಪತ್ನಿ ಗೀತಾ ಖಂಡ್ರೆ ಯಿಂದ ಟಿಕೆಟ್ಗಾಗಿ ಲಾಬಿ ಆರಂಭಿಸಿದ್ದದಾರೆ. ಬೀದರ್ ಲೋಕಸಭಾ ಕ್ಷೇತ್ರದಿಂದ ಗೀತಾ ಟಿಕೆಟ್ ಕಕೇಳಿದ್ದಾರೆ.
ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಪತ್ನಿ ವೀಣಾ ಕಾಶಪ್ಪನವರ್ ಬಾಗಲಕೋಟೆ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಇದೆ ಕ್ಷೇತ್ರದಿಂದ ಮೊತ್ತೊಬ್ಬ ಪ್ರಬಲ ಮಹಿಳೆಸಹ ಪೈಪೋಟಿ ನೀಡಿದ್ದಾರೆ. ಮಾಜಿ ಸಚಿವ ಎಚ್ ವೈ ಮೇಟಿ ಪುತ್ರಿ ಬಾಯಕ್ಕ ಮೇಟಿ ಚುನಾವಣೆಗೆ ಸ್ಪರ್ಧೆ ಮಾಡಲು ಸಿದ್ಧರಾಗುತ್ತಿದ್ದಾರೆ.
ಮಾಜಿ ಸಿಎಂ ಕೆ ಸಿ ರೆಡ್ಡಿಯವರ ಸೊಸೆಯಾದ ವಸಂತ ಕವಿತಾ ಸಹ ರೇಸ್ ನಲ್ಲಿ ಇದ್ದಾರೆ. ಗೃಹ ಸಚಿವ ಎಂ ಬಿ ಪಾಟೀಲ್ ಪತ್ನಿ ಆಶಾ ಪಾಟೀಲ್ ಆಸಕ್ತಿ ತೋರಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ ಹೇಳಿಕೆ ನೀಡಿದ್ದು ಯಾರಿಗೆ ಆಸಕ್ತಿ ಇದೆ ಅವರು ಅರ್ಜಿ ಹಾಕಬಹುದು. ನಾಳೆ [ಫೆ.25] ಅರ್ಜಿ ಹಾಕುವುದಕ್ಕೆ ಕೊನೆಯ ದಿನವಾಗಿದ್ದು ಚರ್ಚಿಸಿ ಅಂತಿಮ ತೀರ್ಮಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.