ಹಾವೇರಿ ಟಿಕೆಟ್‌ ಪುತ್ರ ಕಾಂತೇಶ್‌ಗೆ ನೀಡಿ, ಬಿಎಸ್‌ವೈ ಗೆಲ್ಲಿಸ್ತಾರೆ: ಈಶ್ವರಪ್ಪ ವಿಶ್ವಾಸ

Published : Mar 09, 2024, 05:15 AM IST
ಹಾವೇರಿ ಟಿಕೆಟ್‌ ಪುತ್ರ ಕಾಂತೇಶ್‌ಗೆ ನೀಡಿ, ಬಿಎಸ್‌ವೈ ಗೆಲ್ಲಿಸ್ತಾರೆ: ಈಶ್ವರಪ್ಪ ವಿಶ್ವಾಸ

ಸಾರಾಂಶ

ಹಾವೇರಿಯಲ್ಲಿ ಪುತ್ರ ಕೆ.ಇ. ಕಾಂತೇಶ್‌ಗೆ ಟಿಕೆಟ್ ಸಿಗುವುದು ಖಚಿತ. ಸ್ವತಃ ಬಿ.ಎಸ್. ಯಡಿಯೂರಪ್ಪ ಅವರೇ ಕಾಂತೇಶ್‌ಗೆ ಟಿಕೆಟ್ ನೀಡುವುದು ಮಾತ್ರವಲ್ಲ, ಗೆಲ್ಲಿಸಿಕೊಂಡು ಬರುವ ಭರವಸೆ ನೀಡಿದ್ದಾರೆ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪವಿಶ್ವಾಸ ವ್ಯಕ್ತಪಡಿಸಿದರು.

ಶಿವಮೊಗ್ಗ (ಮಾ.9): ಹಾವೇರಿಯಲ್ಲಿ ಪುತ್ರ ಕೆ.ಇ. ಕಾಂತೇಶ್‌ಗೆ ಟಿಕೆಟ್ ಸಿಗುವುದು ಖಚಿತ. ಸ್ವತಃ ಬಿ.ಎಸ್. ಯಡಿಯೂರಪ್ಪ ಅವರೇ ಕಾಂತೇಶ್‌ಗೆ ಟಿಕೆಟ್ ನೀಡುವುದು ಮಾತ್ರವಲ್ಲ, ಗೆಲ್ಲಿಸಿಕೊಂಡು ಬರುವ ಭರವಸೆ ನೀಡಿದ್ದಾರೆ. ಅವರು ಮಾತಿಗೆ ಎಂದೂ ತಪ್ಪುವರಲ್ಲ. ಹೀಗಾಗಿ, ಟಿಕೆಟ್ ವಿಚಾರದಲ್ಲಿ ಯಾವುದೇ ಆತಂಕ ಇಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ, ಬಿಜೆಪಿ ನಾಯಕ ಕೆ. ಎಸ್. ಈಶ್ವರಪ್ಪ ಆತ್ಮವಿಶ್ವಾಸ ವ್ಯಕ್ತಪಡಿಸಿದರು.

"ಕನ್ನಡಪ್ರಭ "ದೊಂದಿಗೆ ಮಾತನಾಡಿದ ಅವರು, ನಾನು ಮತ್ತು ಕಾಂತೇಶ್ ಜೊತೆಗೂಡಿ ಯಡಿಯೂರಪ್ಪ ಅವರ ಮನೆಗೆ ಹೋದ ಸಂದರ್ಭದಲ್ಲಿ ಹಾವೇರಿಯಿಂದ ಕಾಂತೇಶ್‌ಗೆ ಟಿಕೆಟ್ ಕೊಡಿಸಿ, ಕ್ಷೇತ್ರದಲ್ಲಿ ಓಡಾಡಿ, ಗೆಲ್ಲಿಸಿಕೊಂಡು ಬರುವುದು ನನ್ನ ಜವಾಬ್ದಾರಿ ಎಂದು ಸ್ಪಷ್ಟ ಮಾತುಗಳಲ್ಲಿ ತಿಳಿಸಿದ್ದರು. ಅವರು ಎಂದಿಗೂ ಮಾತಿಗೆ ತಪ್ಪುವರಲ್ಲ. ಬದಲಾಗಿ ಮಾತನ್ನು ಉಳಿಸಿಕೊಳ್ಳುತ್ತಾರೆ. ಹೀಗಾಗಿ ಟಿಕೆಟ್ ತಪ್ಪುತ್ತದೆ ಎಂಬ ಮಾತೇ ಇಲ್ಲ ಎಂದರು.

ರಾಮೇಶ್ವರಂ ಕೆಫೆ ಸ್ಫೋಟ ಸಿಲ್ಲಿ ಅಟೆಂಪ್ಟ್ ಎಂದ ಸಚಿವ ಶರಣ ಪ್ರಕಾಶ ಪಾಟಿಲ್‌ಗೆ ಈಶ್ವರಪ್ಪ ತಿರುಗೇಟು

ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಕಾಂತೇಶ್ ಸಾಕಷ್ಟು ಕೆಲಸ ಮಾಡಿದ್ದಾನೆ. ಇಡೀ ಕ್ಷೇತ್ರದಲ್ಲಿ ಹಲವಾರು ಬಾರಿ ಓಡಾಡಿ ಪಕ್ಷ ಸಂಘಟನೆ ಮಾಡಿದ್ದಾನೆ. ಕ್ಷೇತ್ರದ ನಾಯಕರು, ಕಾರ್ಯಕರ್ತರು ಯುವಕನಾಗಿರುವ ಕಾಂತೇಶ್‌ನಂತಹ ವ್ಯಕ್ತಿ ಬೇಕು ಎಂದು ಹೇಳುತ್ತಿದ್ದಾರೆ. ಚುನಾವಣೆಯಯಲ್ಲಿ ನಿರೀಕ್ಷೆ ಮೀರಿ ಗೆಲ್ಲುವುದು ಗ್ಯಾರಂಟಿ ಎಂದು ಹೇಳಿದರು.ದೃಶ್ಯ ಮಾಧ್ಯಮದಲ್ಲಿ ಏನೇನೋ ಸುದ್ದಿಗಳು ಬಂದ ಬಳಿಕ ಅನೇಕ ನಾಯಕರು, ಬಹುತೇಕ ಹಿಂದುಳಿದ ವರ್ಗದ ಮಠಾಧೀಶರು ಕರೆ ಮಾಡಿ ನಾವು ಜೊತೆಗಿದ್ದೇವೆ ಎಂದು ಹೇಳಿದ್ದಾರೆ. ಮಾಧ್ಯಮಗಳ ಸುದ್ದಿಯಿಂದ ಆತಂಕಕ್ಕೆ ಒಳಗಾಗಿದ್ದಾರೆ. ಆದರೆ, ಇವೆಲ್ಲ ಸುಳ್ಳು ಸುದ್ದಿ ಎಂದು ನಾನು ಹೇಳಿದ್ದೇನೆ. ಟಿಕೆಟ್ ಖಚಿತ ಎಂದು ಕೂಡ ತಿಳಿಸಿದ್ದೇನೆ ಎಂದರು. ಅನೇಕ ಕೇಂದ್ರ ನಾಯಕರ ಭೇಟಿ:

ಜಾತಿ ಗಣತಿ ವರದಿ ಸ್ವೀಕರಿಸಿ ಸಿದ್ದರಾಮಯ್ಯರಿಂದ ಕೆಟ್ಟ ಸಂಪ್ರದಾಯಕ್ಕೆ ನಾಂದಿ: ಈಶ್ವರಪ್ಪ

ಈ ಮೊದಲು ನಾನು ಅನೇಕ ಕೇಂದ್ರ ನಾಯಕರನ್ನು ಭೇಟಿ ಮಾಡಿದ್ದೇನೆ. ಆಗೆಲ್ಲ ಅವರು ಟಿಕೆಟ್ ಕುರಿತು ಸ್ಪಷ್ಟ ಭರವಸೆ ನೀಡಿದ್ದಾರೆ. ವಿಜಯೇಂದ್ರ ಪಕ್ಷದ ರಾಜ್ಯಾಧ್ಯಕ್ಷರಾದ ವೇಳೆ ಭೇಟಿ ಮಾಡಿದ ಸಂದರ್ಭದಲ್ಲಿಯೂ ಅವರು ಕೂಡ ಟಿಕೆಟ್ ನೀಡುವುದರಲ್ಲಿ ಪಕ್ಷ ಸಹಮತ ಹೊಂದಿದೆ ಎಂದಿದ್ದರು. ಈ ಹಿಂದೆ ನಾನು ಕೇಂದ್ರ ನಾಯಕರ ಸೂಚನೆ ಅನ್ವಯ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದಾಗ ನನ್ನ ಪಕ್ಷನಿಷ್ಠೆಗೆ ಹಿರಿಯ ನಾಯಕರು ಮೆಚ್ಚುಗೆ ಸೂಚಿಸಿದ್ದರು. ಸ್ವತಃ ಪ್ರಧಾನಿ ನರೇಂದ್ರ ಮೋದಿ ಕರೆ ಮಾತನಾಡಿ ಅಭಿನಂದಿಸಿದರು. ಈ ಬಾರಿ ಟಿಕೆಟ್ ವಿಚಾರದಲ್ಲಿ ಸಂಘ ಪರಿವಾರದ ಜೊತೆಗೆ ಇವರೆಲ್ಲ ಸೇರಿ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಈಶ್ವರಪ್ಪ ಹೇಳಿದರು.

ಟಿಕೆಟ್ ಸಿಗದಿದ್ದರೆ ಮುಂದಿನ ನಡೆ ಏನು ಎಂಬ ಪ್ರಶ್ನೆಗೆ ಆಗ ಉತ್ತರಿಸುತ್ತೇನೆ. ಟಿಕೆಟ್ ಸಿಗುತ್ತದೆ ಎಂಬ ಭರವಸೆ ಇರುವ ಹೊತ್ತಿನಲ್ಲಿ ಊಹಾಪೋಹದ ಮಾತುಗಳು ಯಾಕೆ ಎಂದು ಮರುಪ್ರಶ್ನಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್
ದಯಮಾಡಿ ಅರ್ಥ ಮಾಡಿಕೊಳ್ಳಿ ತಪ್ಪು ತಿಳಿಯಬೇಡಿ: ಸೋದರನ ಪೋಸ್ಟ್‌ಗೆ ಹೆಬ್ಬಾಳ್ಕರ್ ಪ್ರತಿಕ್ರಿಯೆ