Loksabha Elections 2024: ಈ ಬಾರಿಯು ನನ್ನ ಗೆಲುವಿಗೆ ಸಹಕಾರ ನೀಡಿ: ಸಂಸದ ಪ್ರತಾಪ್ ಸಿಂಹ

Published : Mar 07, 2024, 03:18 PM IST
Loksabha Elections 2024: ಈ ಬಾರಿಯು ನನ್ನ ಗೆಲುವಿಗೆ ಸಹಕಾರ ನೀಡಿ: ಸಂಸದ ಪ್ರತಾಪ್ ಸಿಂಹ

ಸಾರಾಂಶ

ಕಿತ್ತೂರು ಗ್ರಾಮದ ಅಭಿವೃದ್ದಿಗೆ ನಾನು ಸಾಕಷ್ಟು ಅನುದಾನ ನೀಡಿದ್ದು, ಈ ಹಿಂದೆ ಎರಡು ಚುನಾವಣೆಯಲ್ಲಿ ಹೆಚ್ಚಿನ ಮತ ಕೊಟ್ಟು ಗೆಲ್ಲಿಸಿದ್ದೀರಿ, ಈ ಬಾರಿಯು ಕೂಡ ನನ್ನ ಗೆಲುವಿಗೆ ಸಹಕಾರ ನೀಡುವಂತೆ ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದರು. 

ಕಿತ್ತೂರು (ಮಾ.07): ಕಿತ್ತೂರು ಗ್ರಾಮದ ಅಭಿವೃದ್ದಿಗೆ ನಾನು ಸಾಕಷ್ಟು ಅನುದಾನ ನೀಡಿದ್ದು, ಈ ಹಿಂದೆ ಎರಡು ಚುನಾವಣೆಯಲ್ಲಿ ಹೆಚ್ಚಿನ ಮತ ಕೊಟ್ಟು ಗೆಲ್ಲಿಸಿದ್ದೀರಿ, ಈ ಬಾರಿಯು ಕೂಡ ನನ್ನ ಗೆಲುವಿಗೆ ಸಹಕಾರ ನೀಡುವಂತೆ ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದರು. ಕಿತ್ತೂರು ಗ್ರಾಪಂ ಕಾರ್ಯಾಲಯ ಉದ್ಘಾಟಿಸಿದ ನಂತರ ಅವರು ಮಾತನಾಡಿ, 11 ಸಾವಿರ ಅನಧಿಕೃತ ತಂಬಾಕು ಬೆಳೆಗಾರರಿದ್ದು, ಅವರಿಗೆ ಸರಾಸರಿ ಒಂದು ಸಾವಿರ ಕೆ.ಜಿ.ಯಂತೆ ತಂಬಾಕು ಬಿಡಲು ಅನುಮತಿ ನೀಡಿ ಲೈಸೆನ್ಸ್ ಕೊಡಿಸುವ ವ್ಯವಸ್ಥೆ ಮಾಡುತ್ತಿದ್ದೇನೆ, ಈ ಬಾರಿ ತಂಬಾಕಿಗೆ ಸರಾಸರಿ 280 ರು. ಗಳಿಗೂ ಹೆಚ್ಚು ಬೆಲೆ ಸಿಕ್ಕಿದ್ದರಿಂದ ರೈತರಿಗೆ ಅನುಕೂಲವಾಗಿದೆ. 

ಮುಂದಿನ ಪೀಳಿಗೆಯ ಭವಿಷ್ಯದ ದೃಷ್ಟಿಯಿಂದ ಶ್ರೀರಂಗಪಟ್ಟಣದ ಹೊರವಲಯದಿಂದ ಕುಶಾಲನಗರ ರಾಣಿ ಗೇಟ್ ವರೆಗೆ ನಾಲ್ಕು ಪಥದ ರಾಷ್ಟ್ರೀಯ ಹೆದ್ದಾರಿಯನ್ನು 4,130 ಕೋಟಿ ರು. ಗಳ ವೆಚ್ಚದಲ್ಲಿ, ನಿರ್ಮಾಣವಾಗಲಿದೆ, ಮುಂದಿನ 15 ತಿಂಗಳೊಳಗೆ ಸಾರ್ವಜನಿಕರಿಗೆ ಲೋಕಾರ್ಪಣೆ ಮಾಡಲಿದ್ದೇವೆ, ಬೆಂಗಳೂರಿನಿಂದ ಪಿರಿಯಾಪಟ್ಟಣಕ್ಕೆ ಕೇವಲ ಎರಡುವರೆ ಗಂಟೆಗೆ ತಲುಪುವ ವ್ಯವಸ್ಥೆ ಇದಾಗಿದ್ದು, ಸಾರಿಗೆ ವ್ಯವಸ್ಥೆ ಉತ್ತಮವಾದ ನಂತರ ಕೈಗಾರಿಕೆಗಳು, ದೊಡ್ಡ ಉದ್ಯಮಗಳು ಬೆಳೆಯಲು ಸಹಕಾರಿಯಾಗುತ್ತದೆ ಎಂದರು.

ಬಾಂಬರ್ ಬಂಧನ ವಿಚಾರದಲ್ಲಿ ಕಾಂಗ್ರೆಸ್‌ನಿಂದ ರಾಜಕೀಯ ಹಸ್ತಕ್ಷೇಪ: ಗೋವಾ ಸಿಎಂ ಪ್ರಮೋದ್‌ ಸಾವಂತ್‌!

ಪಿರಿಯಾಪಟ್ಟಣ ಮಸಣಿಕಮ್ಮ ದೇವಸ್ಥಾನಕ್ಕೆ 9.20 ಕೋಟಿ ರು. ಗಳ ವೆಚ್ಚದಲ್ಲಿ ಹೊಸ ದೇವಸ್ಥಾನ ನಿರ್ಮಾಣಕ್ಕೆ ಅನುವು ಮಾಡಿಕೊಟ್ಟಿದ್ದೇನೆ, ಜಲಜೀವನ್ ಮಿಷನ್ ಯೋಜನೆಯಡಿ 303 ಗ್ರಾಮಗಳಿಗೂ ಕಾವೇರಿ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಜಿ ಶಾಸಕ ಕೆ. ಮಹದೇವ ಅವರೊಂದಿಗೆ ಕೈಜೋಡಿಸಿ ಕೆಲಸ ಮಾಡಿದ್ದೇನೆ, ಅಮೃತ ಯೋಜನೆ ಅಡಿಯಲ್ಲಿ ಪಿರಿಯಾಪಟ್ಟಣಕ್ಕೆ ಕೊಪ್ಪದಿಂದ ನೀರು ಸರಬರಾಜು ಮಾಡಲು ಎಲ್ಲ ರೀತಿಯ ಕ್ರಮಗಳನ್ನು ವಹಿಸಿದ್ದೇನೆ, ಈ ಭಾಗವು ಹೆಚ್ಚು ಅಭಿವೃದ್ಧಿ ಹೊಂದುತ್ತಿದೆ, ನಾನು ಸಂಸದನಾಗಿ ಹತ್ತು ವರ್ಷ ಕಾಲ ಕಳೆದಿದೆ, ನಾನು ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಕಾರಣ ಮಾಡಿಲ್ಲ, ಪ್ರಾಮಾಣಿಕವಾಗಿ ಶ್ರಮಿಸಿದ್ದೇನೆ, ಆದ್ದರಿಂದ ಇನ್ನು ಹೆಚ್ಚಿನ ಕೆಲಸ ಮಾಡಲು ಬೆಂಬಲ ನೀಡಿ ಎಂದು ಕೋರಿದರು.

ಮಂಡ್ಯದಲ್ಲಿ ಸಾಫ್ಟ್‌ವೇರ್ ಪಾರ್ಕ್ ಮಾಡೇ ಮಾಡ್ತೇನೆ: ಶಾಸಕ ಪಿ.ರವಿಕುಮಾರ್

ಸಚಿವ ಕೆ. ವೆಂಕಟೇಶ್ ಮಾತನಾಡಿ, ಗ್ರಾಮಕ್ಕೆ 80 ಲಕ್ಷ ರು. ಗಳ ಅನುದಾನ ನೀಡಿದ್ದು, ಎಲ್ಲ ಸಮುದಾಯದವರು ಆಯಾಯ ಬೀದಿಗಳಲ್ಲಿ ಚಿಕ್ಕ ಪುಟ್ಟ ಕೆಲಸಗಳನ್ನು ಮಾಡಿಸಿಕೊಳ್ಳುವಂತೆ ಹೇಳಿದರು. ಗ್ರಾಮದಲ್ಲಿ ಅಭಿವೃದ್ಧಿಯ ಸಮಸ್ಯೆಗಳಿದ್ದರೆ ನನ್ನ ಗಮನಕ್ಕೆ ತಂದು ಕೆಲಸ ಮಾಡಿಸಿಕೊಳ್ಳಬೇಕೆಂದು ತಿಳಿಸಿದರು. ಗ್ರಾಪಂ ಸಿಬ್ಬಂದಿ ಹಾಗೂ ಸದಸ್ಯರು ಮತ್ತು ಗುತ್ತಿಗೆದಾರರನ್ನು ಗೌರವಿಸಲಾಯಿತು. ಗ್ರಾಪಂ ಅಧ್ಯಕ್ಷೆ ಶೋಭಾ, ಆಶ್ರಯ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್, ಉಪಾಧ್ಯಕ್ಷ ಪ್ರಭಾವತಿ, ಸದಸ್ಯರಾದ ದಿನೇಶ್, ಕಾವೇರಮ್ಮ, ದೀಪಕ್, ಬೇಲೂರಯ್ಯ, ರಾಜಮಣಿ, ಆರ್. ಎನ್. ಜಗದೀಶ್, ಜಯಶೀಲ, ರಂಜಿನಿ, ವಸಂತ್, ಬೋರೇಗೌಡ, ಗಿರಿಜಾ, ಮಹದೇವ, ನಟರಾಜು, ಮಂಜಪ್ಪ, ಗಣೇಶ್, ನಳಿನಿ, ಪಿಡಿಓ ರಾಜಶೇಖರ್, ಬಿಜೆಪಿ ಸಂಚಾಲಕ ರಾಜೇಗೌಡ, ಸತೀಶ್, ಜಗದೀಶ್, ಸಿಬ್ಬಂದಿ ಮಲ್ಲೇಶ್, ದೀಪು ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಎಂ ಗೊಂದಲಕ್ಕೆ ಮತ್ತೆ ಬೆಂಕಿ: ಸಿದ್ದರಾಮಯ್ಯ 5 ವರ್ಷ ಸಿಎಂ, ಬದಲಾದರೆ ಡಿಕೆಶಿ ಒಬ್ರೇ ರೇಸ್‌ನಲ್ಲಿಲ್ಲ..; - ಕೆಎನ್ ರಾಜಣ್ಣ
CM-DCM ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಸಿದ್ದರಾಮಯ್ಯ ಪುತ್ರ ಶಾಕಿಂಗ್ ಹೇಳಿಕೆ