ಮಂಡ್ಯ ಅಖಾಡಕ್ಕೆ ಎಂಟ್ರಿಕೊಟ್ಟ BJP:ಸುಮಲತಾಗೆ ರೆಡ್ ಕಾರ್ಪೆಟ್

Published : Feb 03, 2019, 03:21 PM IST
ಮಂಡ್ಯ ಅಖಾಡಕ್ಕೆ ಎಂಟ್ರಿಕೊಟ್ಟ BJP:ಸುಮಲತಾಗೆ ರೆಡ್ ಕಾರ್ಪೆಟ್

ಸಾರಾಂಶ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಅಭ್ಯರ್ಥಿಯ ಆಯ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರಿಗೆ ತಲೆನೋವಾಗಿದೆ.  ಇದರ ಬಿಜೆಪಿ ಎಂಟ್ರಿಕೊಟ್ಟಿದ್ದು, ಮಂಡ್ಯವನ್ನು ವಶಪಡಿಸಿಕೊಳ್ಳು ಮಾಸ್ಟರ್ ಪ್ಲಾನ್  ಮಾಡುತ್ತಿದೆ.

ಬೆಂಗಳೂರು, (ಫೆ.03): ಮೈತ್ರಿ ಪಕ್ಷಗಳು ಲೋಕಸಭಾ ಚುನಾವಣೆಯನ್ನು ಜೊತೆಗೂಡಿ ಎದುರಿಸಲು ಚಿಂತನೆ ನಡೆಸಿವೆ. ಆದ್ರೆ ಮಂಡ್ಯ ಮತ್ತು ಹಾಸನ ಕ್ಷೇತ್ರಗಳ ಉಭಯ ಕಾರ್ಯಕರ್ತರಲ್ಲಿ ಅಪಸ್ವರ ಕೇಳಿಬಂದಿದೆ.

ಈಗಾಗಲೇ ಮಂಡ್ಯ ಕ್ಷೇತ್ರಕ್ಕೆ ಸುಮಲತಾ ಅಂಬರೀಶ್ ಹೆಸರು ಚರ್ಚೆಯಲ್ಲಿದೆ. ಆದ್ರೆ ಸುಮಲತಾ ಅವರು ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುತ್ತಾರಾ? ಅಥವಾ ಜೆಡಿಎಸ್‌ನಿಂದ ಕಣಕ್ಕಿಳಿಯುತ್ತಾರಾ ಎನ್ನುವುದು ಇನ್ನು ನಿಗೂಢವಾಗಿಯೇ ಉಳಿದಿದೆ. 

ಮಂಡ್ಯದಲ್ಲಿ ಸುಮಲತಾ ಹವಾ ಎದ್ದಿದ್ದು ಹೇಗೆ? ಇಲ್ಲಿದೆ ಕುತೂಹಲದ ಸಂಗತಿ

ಸಮಲತಾ ಅವರನ್ನು ತಮ್ಮ ಪಕ್ಷದಿಂದ ಅಖಾಡಕ್ಕಿಳಿಸಲು ಕಾಂಗ್ರೆಸ್ ತೆರೆಮರೆಯ ಕಸರತ್ತು ನಡೆಸಿದರೆ, ಮತ್ತೊಂದೆಡೆ ಜೆಡಿಎಸ್ ನಿಖಿಲ್ ಕುಮಾರಸ್ವಾಮಿ ಅವರನ್ನು ಅಭ್ಯರ್ಥಿಯಾಗಿಸಲು ಚಿಂತನೆ ನಡೆಸಿದೆ. 

ಕೊನೆಗಳಿಗೆಯಲ್ಲಿ ಸುಮಲತಾ ಮಂಡ್ಯದಿಂದ ಸ್ಪರ್ಧಿಸುವುದು ಖಚಿತವಾದರೆ, ಜೆಡಿಎಸ್‌ ಟಿಕೆಟ್ ನೀಡದರೂ ಆಶ್ಚಯಪಡಬೇಕಿಲ್ಲ.

ಮಂಡ್ಯ ಲೋಕಸಭೆ ಕ್ಷೇತ್ರಕ್ಕೆ ಬಿಗ್ ಟ್ವಿಸ್ಟ್: ಸುಮಲತಾಗೆ ಬಿಜೆಪಿ ಬೆಂಬಲ?

ಸುಮಾಲತಾರನ್ನ ಸೆಳೆಯಲು ಬಿಜೆಪಿ ಪ್ಲಾನ್
ದೋಸ್ತಿಗಳಿಗೆ ಟಕ್ಕರ್ ನೀಡಲು ಇದೀಗ ಬಿಜೆಪಿ ಎಂಟ್ರಿ ಕೊಟ್ಟಿದ್ದು, 2019ರ ಲೋಕಸಭಾ ಕ್ಷೇತ್ರದ ಚುನಾವಣೆಗೆ ಮಂಡ್ಯದ ಬಿಜೆಪಿ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್​​ ಅವರನ್ನು ಕಣಕ್ಕಿಳಿಸುವ ಬಗ್ಗೆ ಕಮಲ ಪಾಳಯದಲ್ಲಿ ಚಿಂತನೆ ನಡೆದಿದೆ ಎನ್ನಲಾಗಿದೆ. 

ಮಂಡ್ಯದಲ್ಲಿ ‘ಗೆಲ್ಲುವ ಕುದುರೆ’ಗೆ ಟಿಕೆಟ್! ಸಿದ್ದು ಕಣ್ಣು ಯಾರ ಮ್ಯಾಲೆ?

ಈ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ, ಸುಮಲತಾ ಅವರ ಬಳಿ ಮಾತನಾಡುವಂತೆ ಮಾಜಿ‌ ಡಿಸಿಎಂ ಆರ್​ ಅಶೋಕ್​ ಹಾಗೂ ​ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಬಳಿ ಚರ್ಚಿಸಿದ್ದಾರೆ ಎನ್ನಲಾಗಿದೆ.

 ಒಂದು ವೇಳೆ ಸುಮಲತಾ ಬಿಜೆಪಿಯಿಂದ ಕಣಕ್ಕಿಳಿಯಲು ಒಪ್ಪಿದ್ರೆ ಬಿಜೆಪಿಯಿಂದ ಟಿಕೆಟ್​ ನೀಡಲು ರಾಜ್ಯಾಧ್ಯಕ್ಷರು ಸಮ್ಮಿತಿಸಿದ್ದಾರೆ ಎನ್ನಲಾಗಿದೆ.

ಮಂಡ್ಯ ಕ್ಷೇತ್ರದ ಚುನಾವಣೆ ಸ್ಪರ್ಧೆ ಬಗ್ಗೆ ಸುಮಲತಾ ಹೇಳಿದ್ದೇನು..?

ಸುಳಿವು ಕೊಟ್ಟ ಆರ್. ಅಶೋಕ್
ಹೌದು....ಅಂಬರೀಶ್ ಅವರು ಕಾಂಗ್ರೆಸ್‌ನಲ್ಲಿದ್ದಿರುವುದು ನಿಜ. ಆದ್ರೆ ರಾಜಕೀಯ ನಿಂತ ನೀರಲ್ಲ. ಸಮಲತಾ ಅಂಬರಿಶ್ ಅವರು ಮಂಡ್ಯ ಲೋಕಸಭಾ ಟಿಕೆಟ್‌ಗಾಗಿ ನಮ್ಮ ಬಳಿ ಬಂದಿಲ್ಲ. ಒಂದು ವೇಳೆ ಬಂದರೆ ಬಿಜೆಪಿ ಸ್ವಾಗತಸುತ್ತೇವೆ ಎಂದು ಹೇಳಿದ್ದಾರೆ.

ಅಂಬರೀಶ್ ಅವರ ವರ್ಚಸ್ಸಿನಲ್ಲಿ ಸುಮಲತಾ ಅವರ ಗೆಲುವು ಸಲಭವಾಗಲಿದೆ ಎನ್ನುವುದು ಮೂರು ಪಕ್ಷಗಳು ಅರಿತಿವೆ. ಈ ಹಿನ್ನಲೆಯಲ್ಲಿ ಟಿಕೆಟ್ ನೀಡಲು ನಾ ಮುಂದು ತಾ ಮುಂದು ಅಂತ ದುಂಬಾಲು ಬಿದ್ದಿವೆ.

'ಅಂಬರೀಶ್‌ರನ್ನ ಹೊತ್ತು ಮೆರೆದಾಡಿದ್ದೇವೆ ಇನ್ನೇನು ಮಾಡ್ಬೇಕು, JDS ಅಭ್ಯರ್ಥಿ ನಾನೇ'

ಹಾಗಾದರೆ, ‘ಕಾಂಗ್ರೆಸ್‌ನ ಸುಮಲತಾ’ ಕಣಕ್ಕಿಳಿತಾರಾ? ಅಥವಾ ‘ಜೆಡಿಎಸ್‌ನ ಸುಮಲತಾ’ ಕಣಕ್ಕಿಳಿತಾರಾ?  ಎನ್ನುವುದು ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಲಕ ಮೂಡಿಸಿದಂತೂ ನಿಜ. ಕೊನೆಗಳಿಗೆಯಲ್ಲಿ ಮೈತ್ರಿಗೆ ಬಾಯ್ ಹೇಳಿ ಬಿಜೆಪಿಯಿಂದ ಸ್ಪರ್ಧಿಸಿದರೂ ಆಶ್ಚರ್ಯಪಡಬೇಕಿಲ್ಲ.

ಒಟ್ಟಿನಲ್ಲಿ ಸುಮಲತಾ ಅವರಿಗೆ ಮೂರು ಪಕ್ಷಗಳಿಂದ ಟಿಕೆಟ್ ಆಫರ್ ಇದ್ದು, ಅವರು ಯಾವ ಪಾರ್ಟಿಯಿಂದ ಕಣಕ್ಕಿಳಿಯುತ್ತಾರೆ ಎನ್ನುವುದನ್ನು ಕಾದುನೋಡಬೇಕಿದೆ.

ಅಂಬರೀಶ್ ಅವರ ನಿಧನದ ಬಳಿಕ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ನ ಶಿವರಾಮೇಗೌಡ ಗೆಲುವು ಸಾಧಿಸಿದ್ದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯಾವುದೇ ಕ್ಷಣದಲ್ಲಾದರೂ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಉದಯ ಕದಲೂರು ಓಪನ್ ಹೇಳಿಕೆ
ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ