
ಹೊಸಪೇಟೆ, (ಜ.24): ಶೀಘ್ರವೇ ರಾಜ್ಯದಲ್ಲಿ ಲವ್ ಜಿಹಾದ್ ತಡೆ ಕಾನೂನು ಜಾರಿಗೆ ತಂದು ಮಹಿಳೆಯರಿಗೆ ರಕ್ಷಣೆ ಒದಗಿಸಲಾಗುವುದು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ಭಾನುವಾರ ನಗರದಲ್ಲಿ ಇಂದು (ಭಾನುವಾರ) ಏರ್ಪಡಿಸಿದ್ದ ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯಕಾರಿಣಿಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಈಗಾಗಲೇ ಜಾರಿಗೆ ಬಂದಿದೆ. ಅದೇ ರೀತಿ ಲವ್ ಜಿಹಾದ್ ಕಾನೂನು ಕೂಡ ಜಾರಿಗೆ ತರಲಾಗುವುದು ಎಂದು ಸ್ಪಷ್ಟಪಡಿಸಿದರು.
ಹನುಮಂತ ಗುಲಾಮಗಿರಿಯ ಸಂಕೇತ ಎಂದವರಿಗೆ ಕಟೀಲು ತಿರುಗೇಟು ಕೊಟ್ಟಿದ್ಹೀಗೆ!
ಇದು ಜಾತ್ಯಾತೀತ ರಾಷ್ಟ್ರ. ಡಾ.ಬಿ.ಆರ್. ಅಂಬೇಡ್ಕರ್ ರಚಿಸಿರುವ ಸಂವಿಧಾನ ಒಪ್ಪಿಕೊಂಡಿದ್ದೇವೆ. ಆದರೆ, ಹಿಂದೂ ಸಂಸ್ಕೃತಿಯ ದೇಶ, ಹಿಂದೂ ದೇಶ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.