
ಬೆಳಗಾವಿ (ಮೇ 1, 2023): ಪ್ರಧಾನಿ ನರೇಂದ್ರ ಮೋದಿ ಅವರ ಬಹಿರಂಗ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಕರೆತರುವ ಉದ್ದೇಶದಿಂದ ಹಣ ಹಂಚಿಕೆ ಮಾಡಿದ ಆರೋಪದ ಮೇಲೆ ಸ್ಥಳೀಯ ಶಾಸಕ ಮತ್ತು ಬಿಜೆಪಿ ಅಭ್ಯರ್ಥಿ ಪಿ. ರಾಜೀವ್ ಸೇರಿದಂತೆ ಇಬ್ಬರ ಮೇಲೆ ಪ್ರಕರಣ ದಾಖಲಾಗಿದೆ.
ಕುಡಚಿ ಮತಕ್ಷೇತ್ರದ ಕೋಳಿಗುಡ್ಡ ಸಮೀಪದಲ್ಲಿ ಶನಿವಾರ ಬಿಜೆಪಿ ಬಹಿರಂಗ ಸಮಾವೇಶವನ್ನು ಆಯೋಜಿಸಲಾಗಿತ್ತು. ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಪಾಲ್ಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಸೇರಿಸುವ ಉದ್ದೇಶದಿಂದ ರಾಯಬಾಗ ತಾಲೂಕಿನ ಮುಗಳಖೋಡ ಗ್ರಾಮ ವ್ಯಾಪ್ತಿಯಲ್ಲಿ ಹಾಲಪ್ಪ ಹಣಮಂತ ಶೇಗುಣಸಿ ಸೇರಿದಂತೆ ಇನ್ನಿತರರು ದುಡ್ಡು ಹಂಚುವ ಜತೆಗೆ ಆಮಿಷ ತೋರುವ ಮೂಲಕ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಮುಖ ಆರೋಪಿಯನ್ನಾಗಿ ಶಾಸಕ ಪಿ. ರಾಜೀವ್ ಹಾಗೂ ಹಾಲಪ್ಪ ಶೇಗುಣಿಸಿ ವಿರುದ್ಧ ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನು ಓದಿ: ರೇವಾ ವಿವಿ ವಿದ್ಯಾರ್ಥಿ ಕೊಲೆ ಕೇಸ್: ಓರ್ವ ವಿದ್ಯಾರ್ಥಿ ಅರೆಸ್ಟ್; ಇನ್ನೂ ಕೆಲ ಆರೋಪಿಗಳಿಗಾಗಿ ಶೋಧ ಕಾರ್ಯ
ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ.
ಇದನ್ನೂ ಓದಿ: ಬೀದರ್ನಲ್ಲಿ ಭಾರಿ ಮಳೆ: ಹಳ್ಳ ದಾಟಲು ಹೋಗಿ ಮಕ್ಕಳು ಸೇರಿ ಕುಟುಂಬದ ಮೂವರು ನೀರುಪಾಲು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.