
ದಾವಣಗೆರೆ(ನ.03): ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧವಾಗಿ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿದ್ರೆ ಇನ್ನು ಮುಂದೆ ಪೊರಕೆ ಸೇವೆ ಮಾಡುವುದಕ್ಕೆ ಹೆಣ್ಮಕ್ಕಳು ಮುಂದಾಗಿದ್ದಾರೆ ಎಂದು ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಮಲ್ಲಿಕಾರ್ಜುನ ವಾಗ್ದಾಳಿ ನಡೆಸಿದ್ದಾರೆ.
ಇಂದು(ಭಾನುವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಚನ್ನಗಿರಿ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಪಪ್ಪ ಪುತ್ರ ಮಾಡಾಳ್ ಮಲ್ಲಿಕಾರ್ಜುನ, ಯತ್ನಾಳ್ ವಿಜಯೇಂದ್ರ ವಿರುದ್ಧ ಅನವಶ್ಯಕವಾಗಿ ಮಾತನಾಡುತ್ತಿದ್ದಾರೆ. ಬಿಜೆಪಿಯನ್ನು ಕಟ್ಟಿ ಬೆಳೆಸಿದವರು ಯಡಿಯೂರಪ್ಪ ಅವರ ಬಗ್ಗೆ ಮಾತನಾಡುವುದಕ್ಕೆ ಯತ್ನಾಳ್ಗೆ ನೈತಿಕತೆ ಇಲ್ಲ. ನೀವು ಹೀಗೆಯೇ ಮಾತನಾಡುತ್ತಿದ್ದರೆ ನಿಮಗೆ ಪೊರಕೆ ಸೇವೆ, ಒನಕೆ ಸೇವೆ ಮಾಡುವುದಕ್ಕೆ ಮಹಿಳೆಯರು ರೆಡಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.
ನಿಮಗೆ ತಾಕತ್ತಿದ್ರೆ ವಿಜಯೇಂದ್ರರನ್ನು ಕೆಳಗಿಳಿಸಿ: ಯತ್ನಾಳ್, ರಮೇಶ್ ಜಾರಕಿಹೊಳಿಗೆ ರೇಣುಕಾಚಾರ್ಯ ಸವಾಲ್!
ಹೊಂದಾಣಿಕೆ ರಾಜಕಾರಣ ಮಾಡಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರುವುದಕ್ಕೆ ನೀವು ಕಾರಣ. ನೀವು ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಂಚಮಸಾಲಿ ಹೋರಾಟ ಹಮ್ಮಿಕೊಂಡು ಜನರ ದಾರಿ ತಪ್ಪಿಸಿದ್ರಿ . ಈಗ ಏಕೆ ಪಂಚಮಸಾಲಿ ಹೋರಾಟವಿಲ್ಲ. ಲಿಂಗಾಯತರಿಗೆ 2 ಎ ಕೊಡಿಸೋದಕ್ಕೆ ಕೇಂದ್ರದಲ್ಲಿ ಓಬಿಸಿ ಕೊಡಿಸುವುದಕ್ಕೆ ಯಡಿಯೂರಪ್ಪ ಹೋರಾಟ ಮಾಡಿಲ್ವಾ?. ಯಡಿಯೂರಪ್ಪನವರ ಮನೆಯಲ್ಲೇ ತಿಂದು ಅವರ ಮನೆ ಗಣಿ ಎಣಿಸುತ್ತೀರಾ?. ತಿಂದ ಮನೆಯಲ್ಲಿ ಗಣಿ ಎಣಿಸೋದು ಅಂದ್ರೆ ಇದೇನಾ? ಎಂದು ಪ್ರಶ್ನಿಸಿದ್ದಾರೆ.
ಯಡಿಯೂರಪ್ಪನವರ ವಿರುದ್ಧ ರಾಜ್ಯದಲ್ಲಿ ಎಷ್ಟೋ ಷಡ್ಯಂತ್ರಗಳಾಗಿದ್ದಾವೆ. ಬೇರೆ ಯಾರೋ ಆಗಿದ್ದರೆ ಇಷ್ಟೋತ್ತಿಗೆ ಸಾವನ್ನಪ್ಪಿರೋರು. ಯತ್ನಾಳ್ ನಿಮಗೆ ನಾಚಿಕೆ ಆಗೋಲ್ವಾ?. ಇನ್ನಾದ್ರು ನಿಮ್ಮ ನಡವಳಿಕೆ ತಿದ್ದಿಕೊಳ್ಳಿ ಇಲ್ಲಾ ಅಂದ್ರೆ ಪೊರಕೆ ಸೇವೆ ಖಚಿತ ಎಂದ ಮಾಡಾಳ್ ಮಲ್ಲಿಕಾರ್ಜುನ್ ಖಾರವಾಗಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.