ಸಹೋದರಿ ವಿರುದ್ಧ ಪತ್ನಿಯನ್ನ ಕಣಕ್ಕಿಳಿಸಿ ತಪ್ಪು ಮಾಡಿದೆ: ಅಜಿತ್ ಪವಾರ್

Published : Aug 14, 2024, 04:45 PM IST
ಸಹೋದರಿ ವಿರುದ್ಧ ಪತ್ನಿಯನ್ನ ಕಣಕ್ಕಿಳಿಸಿ ತಪ್ಪು ಮಾಡಿದೆ: ಅಜಿತ್ ಪವಾರ್

ಸಾರಾಂಶ

ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ತಮ್ಮ ಸೋದರಿ ಹಾಗೂ ಸಂಸದೆ ಸುಪ್ರಿಯಾ ಸುಳೆ ವಿರುದ್ಧ ತಮ್ಮ ಪತ್ನಿ ಸುನೇತ್ರಾ ಪವಾರ್‌ ಅವರನ್ನು ಕಣಕ್ಕಿಳಿಸಿ ತಪ್ಪು ಮಾಡಿಬಿಟ್ಟೆ ಎಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಹಾಗೂ ಎನ್‌ಸಿಪಿ (ಅಜಿತ್‌ ಬಣ) ಮುಖ್ಯಸ್ಥ ಅಜಿತ್‌ ಪವಾರ್‌ ಮಂಗಳವಾರ ಪಶ್ಚಾತ್ತಾಪ ಪಟ್ಟರು.

ಮುಂಬೈ (ಆ.14): ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ತಮ್ಮ ಸೋದರಿ ಹಾಗೂ ಸಂಸದೆ ಸುಪ್ರಿಯಾ ಸುಳೆ ವಿರುದ್ಧ ತಮ್ಮ ಪತ್ನಿ ಸುನೇತ್ರಾ ಪವಾರ್‌ ಅವರನ್ನು ಕಣಕ್ಕಿಳಿಸಿ ತಪ್ಪು ಮಾಡಿಬಿಟ್ಟೆ ಎಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಹಾಗೂ ಎನ್‌ಸಿಪಿ (ಅಜಿತ್‌ ಬಣ) ಮುಖ್ಯಸ್ಥ ಅಜಿತ್‌ ಪವಾರ್‌ ಮಂಗಳವಾರ ಪಶ್ಚಾತ್ತಾಪ ಪಟ್ಟರು.

ಮಾಧ್ಯಮದೊಂದಿಗೆ ಮಾತನಾಡಿ, ‘ನನ್ನ ಸೋದರಿ ಅಂದ್ರೆ ನನಗೆ ತುಂಬಾ ಇಷ್ಟ. ಚುನಾವಣೆಯಲ್ಲಿ ಆಕೆಯ ವಿರುದ್ಧ ನಾನು, ನನ್ನ ಪತ್ನಿಯನ್ನು ಕಣಕ್ಕಿಳಿಸಿದ್ದೆ. ಈ ರೀತಿ ಮಾಡಬಾರದಿತ್ತು. ಆದರೆ ನಮ್ಮ ಪಕ್ಷದ ಸಂಸದೀಯ ಮಂಡಳಿ ಇದನ್ನು ನಿರ್ಧರಿಸಿತ್ತು. ಆದರೆ ಈಗ ಅದು ತಪ್ಪು ನಿರ್ಧಾರವೆಂದು ನನಗೆ ಅರಿವಾಗಿದೆ’ ಎಂದರು.
ಬಾರಾಮತಿ ಲೋಕಸಭೆ ಕ್ಷೇತ್ರದಿಂದ ಅಜಿತ್‌ ಪತ್ನಿ ಸುನೇತ್ರಾ ಪವಾರ್‌, ಸುಪ್ರಿಯಾ ಸುಳೆ ವಿರುದ್ಧ ಸ್ಪರ್ಧಿಸಿ ಸೋತಿದ್ದರು.

 

ಉದ್ಧವ್ ಠಾಕ್ರೆ ಬೆಂಗಾವಲಿನ ಮೇಲೆ ದಾಳಿ : ಸೆಗಣಿ, ತೆಂಗಿನಕಾಯಿ ಎಸೆದ MNS ಕಾರ್ಯಕರ್ತರು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!