ಮುಂದಿನ ಲೋಕಸಭಾ ಚುನಾವಣೆಗೂ ಮಧು ಬಂಗಾರಪ್ಪ ಅಭ್ಯರ್ಥಿ..!

Published : Nov 07, 2018, 02:15 PM IST
ಮುಂದಿನ ಲೋಕಸಭಾ ಚುನಾವಣೆಗೂ ಮಧು ಬಂಗಾರಪ್ಪ ಅಭ್ಯರ್ಥಿ..!

ಸಾರಾಂಶ

ಉಪಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿದ ವಿಶ್ವನಾಥ್, ವಿದೇಶದಲ್ಲಿ ಇದ್ದ ಮಧು ಬಂಗಾರಪ್ಪ ತರಾತುರಿಯಲ್ಲಿ ಬಂದು ನಾಮ ಪತ್ರ ಸಲ್ಲಿಸಿದ್ರು. ಮೂರೂವರೆ ಲಕ್ಷ ಅಂತರ ಇದ್ದ ಯಡಿಯೂರಪ್ಪ ಅವರನ್ನು ಐವತ್ತು ಸಾವಿರಕ್ಕೆ ಇಳಿಸಿದ್ದಾರೆ. ಇದೇನು ಕಡಿಮೆ ಸಾಧನೆಯಲ್ಲ.

ಬೆಂಗಳೂರು[ನ.07]: ನಾವು ಶಿವಮೊಗ್ಗ ಲೋಕಸಭಾ ಉಪಚುನಾವಣೆಯಲ್ಲಿ ಸೋತಿರಬಹುದು, ಆದರೆ ಯಡಿಯೂರಪ್ಪ ಮೇಲೆ ಮೇಲೆ ಗೆದ್ದಿದ್ದೇವೆ. ಮೈತ್ರಿಪಕ್ಷದ ಅಭ್ಯರ್ಥಿಯಾಗಿ ಮಧು ಬಂಗಾರಪ್ಪ ಒಳ್ಳೆಯ ಹೋರಾಟ ನೀಡಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿಯೂ ಮಧು ಬಂಗಾರಪ್ಪ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ಹೇಳಿದ್ದಾರೆ.

ಇದನ್ನು ಓದಿ: ಅಪ್ಪ-ಮಗ, ಅಪ್ಪ-ಮಗ, ಗಂಡ-ಹೆಂಡತಿ...ಸದ್ಯದ ಸ್ಥಿತಿ!

ಉಪಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿದ ವಿಶ್ವನಾಥ್, ವಿದೇಶದಲ್ಲಿ ಇದ್ದ ಮಧು ಬಂಗಾರಪ್ಪ ತರಾತುರಿಯಲ್ಲಿ ಬಂದು ನಾಮ ಪತ್ರ ಸಲ್ಲಿಸಿದ್ರು. ಮೂರೂವರೆ ಲಕ್ಷ ಅಂತರ ಇದ್ದ ಯಡಿಯೂರಪ್ಪ ಅವರನ್ನು ಐವತ್ತು ಸಾವಿರಕ್ಕೆ ಇಳಿಸಿದ್ದಾರೆ. ಇದೇನು ಕಡಿಮೆ ಸಾಧನೆಯಲ್ಲ. ಯಡಿಯೂರಪ್ಪ ಅವರು ತಮ್ಮ ಮಗನನ್ನು ಗೆಲ್ಲಿಸುವ ಸಲುವಾಗಿಯೇ ಶಿವಮೊಗ್ಗ ಬಿಟ್ಟು ಬೇರೆಲ್ಲೂ ಹೋಗಲಿಲ್ಲ. ತಂದೆ ಅಂತೆಯೇ ಮಧು ಹೋರಾಟ ಮನೋಭಾವ ತೋರಿದ್ದಾರೆ. ಮುಂದೆ ಕೂಡಾ ಮಧು ಅವರೇ ಸ್ಪರ್ಧಿಸುತ್ತಾರೆ ಎಂದು ವಿಶ್ವನಾಥ್ ಖಚಿತಪಡಿಸಿದ್ದಾರೆ.

ಇದನ್ನು ಓದಿ: 5 ಕ್ಷೇತ್ರಗಳ ಉಪ ಚುನಾವಣೆ : ಯಾರಿಗೆ ಎಷ್ಟು ಮತಗಳು? ಫುಲ್ ಡಿಟೇಲ್ಸ್

ಇನ್ನು ಮಧು ಬಂಗಾರಪ್ಪಗೆ ಸಚಿವ ಸ್ಥಾನ ನೀಡುವ ಕುರಿತಂತೆ ಪ್ರತಿಕ್ರಿಯಿಸಿರುವ ಅವರು, ಸಧ್ಯಕ್ಕೆ ಮಧು ಅವರನ್ನು ಪರಿಷತ್ ಸದಸ್ಯರನ್ನಾಗಿ ಮಾಡಿ ಹಿಂಬಾಗಿಲ ಮೂಲಕ ಮಂತ್ರಿ ಮಾಡುವ ಉದ್ದೇಶವಿಲ್ಲ. ಮುಂದೆ ಕೂಡಾ ಮಧು ಅವರೇ ಸ್ಪರ್ಧಿಸುತ್ತಾರೆ. ಬಳ್ಳಾರಿ, ಮಂಡ್ಯ, ಶಿವಮೊಗ್ಗ ಎಲ್ಲಾ ಕಡೆ ಈಗ ಯಾರು ಸ್ಪರ್ಧಿಸಿದ್ರೋ ಅವರೇ ಮತ್ತೆ ನಿಲ್ತಾರೆ ಎಂದು ವಿಶ್ವನಾಥ್ ಹೇಳಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಾ ಜಿ ಪರಮೇಶ್ವರ ರಾಜ್ಯದ ಸಿಎಂ ಆಗಬೇಕು, ರಾಜಕೀಯದಲ್ಲಿ ಸಂಚಲನ ಮೂಡಿಸೋ ಹೇಳಿಕೆ ಕೊಟ್ಟ ಕೇಂದ್ರ ಸಚಿವ ವಿ. ಸೋಮಣ್ಣ!
ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!