
ಭೋಪಾಲ(ಆ.28): ವರ್ಷಾಂತ್ಯಕ್ಕೆ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಮಧ್ಯಪ್ರದೇಶದಲ್ಲಿ ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ನಡುವೆ ಮತದಾರರಿಗೆ ಉಚಿತ ಕೊಡುಗೆಗಳನ್ನು ಘೋಷಿಸುವ ಪೈಪೋಟಿ ತೀವ್ರಗೊಂಡಿದ್ದು, ಮುಖ್ಯಮಂತ್ರಿ ಶಿವರಾಜ ಸಿಂಗ್ ಚೌಹಾಣ್ ಭಾನುವಾರ ಮಹಿಳೆಯರಿಗೆ ಹಲವು ಕೊಡುಗೆಗಳನ್ನು ಪ್ರಕಟಿಸಿದ್ದಾರೆ.
ಈಗ ನಡೆಯುತ್ತಿರುವ ಶ್ರಾವಣ ಮಾಸದ ಪ್ರಯುಕ್ತ ‘ಲಾಡ್ಲಿ ಬೆಹೆನಾ’ ಯೋಜನೆಯಡಿ ಮಹಿಳೆಯರಿಗೆ 1250 ರು. ನೀಡಲಾಗುವುದು (ಈ ಹಿಂದೆ ಮಾಸಿಕ 1000 ರು. ಇತ್ತು). ಅಕ್ಟೋಬರ್ ತಿಂಗಳಿನಿಂದ ಇದನ್ನು ಶಾಶ್ವತವಾಗಿ 1250 ರು.ಗೆ ಏರಿಸಲಾಗುವುದು. ಶ್ರಾವಣ ಮಾಸದಲ್ಲಿ 450 ರು.ಗೆ ಎಲ್ಪಿಜಿ ಸಿಲಿಂಡರ್ ನೀಡಲಾಗುವುದು. ಮುಂದೆ ಇದೇ ದರಕ್ಕೆ ಸಿಲಿಂಡರ್ ನೀಡಲು ಶಾಶ್ವತ ವ್ಯವಸ್ಥೆ ಮಾಡಲಾಗುವುದು. ಸರ್ಕಾರಿ ನೌಕರಿಯಲ್ಲಿ ಮಹಿಳೆಯರಿಗಿರುವ ಮೀಸಲಾತಿಯನ್ನು ಈಗಿನ ಶೇ.30ರಿಂದ ಶೇ.35ಕ್ಕೆ ಏರಿಸಲಾಗುವುದು ಎಂದು ಶಿವರಾಜ ಸಿಂಗ್ ಪ್ರಕಟಿಸಿದ್ದಾರೆ.
ಮಧ್ಯಪ್ರದೇಶ ಗೆದ್ದರೆ ರೈತರ ಸಾಲಮನ್ನಾ, ಗ್ಯಾರಂಟಿ ಸ್ಕೀಂ: ಖರ್ಗೆ ಘೋಷಣೆ
ಕಾಂಗ್ರೆಸ್ ಪಕ್ಷ ಈಗಾಗಲೇ ಕರ್ನಾಟಕದಂತೆ ಮಧ್ಯಪ್ರದೇಶದಲ್ಲೂ ತಾನು ಗೆದ್ದರೆ ಹಲವಾರು ಉಚಿತ ಗ್ಯಾರಂಟಿಗಳನ್ನು ನೀಡುವುದಾಗಿ ಘೋಷಿಸಿದೆ. ಅದಕ್ಕೆ ಪ್ರತಿಯಾಗಿ ಬಿಜೆಪಿ ಸರ್ಕಾರ ಈಗಿನಿಂದಲೇ ಹಲವು ಕೊಡುಗೆಗಳನ್ನು ಘೋಷಿಸಿ ಜಾರಿಗೊಳಿಸುತ್ತಿದೆ. ರಾಜ್ಯದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಗೆ 14 ಲಕ್ಷ ಹೊಸ ಮತದಾರರು ನೋಂದಾಯಿಸಿಕೊಂಡಿದ್ದು, ಅವರಲ್ಲಿ 7.07 ಲಕ್ಷ ಮಹಿಳೆಯರಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.