
ಮುಂಬೈ[ಮಾ.12]: ಮಧ್ಯಪ್ರದೇಶದಲ್ಲಿ ರಾಜಕೀಯ ಹೈಡ್ರಾಮದ ಬೆನ್ನಲ್ಲೇ, ಮಹಾರಾಷ್ಟ್ರದಲ್ಲಿ ಶಿವಸೇನೆ- ಕಾಂಗ್ರೆಸ್- ಎನ್ಸಿಪಿ ಸರ್ಕಾರ ಸುಭದ್ರವಾಗಿದೆ.
ಮಧ್ಯಪ್ರದೇಶದ ವೈರಸ್ ಮಹಾರಾಷ್ಟ್ರ ಪ್ರವೇಶಿಸುವುದಿಲ್ಲ ಎಂದು ಶಿವಸೇನೆ ಮುಖಂಡ ಸಂಜಯ್ ರಾವುತ್ ಬಿಜೆಪಿಗೆ ಟಾಂಗ್ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಸೇನಾ ಮುಖಂಡ ಉದ್ಧವ್ ಠಾಕ್ರೆ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ಮಧ್ಯೆ ಉತ್ತಮ ಹೊಂದಾಣಿಕೆ ಇದೆ.
ಸರ್ಕಾರಕ್ಕೆ ಯಾವುದೇ ಅಪಾಯ ಇಲ್ಲ. ಮಹಾರಾಷ್ಟ್ರ ವಿಕಾಸ್ ಅಘಾಡಿ ಸರ್ಕಾರ ಪತನಗೊಳ್ಳಲಿದೆ ಎಂದು ಯಾರಾದರೂ ಕನಸು ಕಾಣುತ್ತಿದ್ದರೆ ಅದು ಅವರ ಭ್ರಮೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.