ಬಿಜೆಪಿ-ಜೆಡಿಎಸ್‌ ಮೈತ್ರಿಯಿಂದ ಕಾಂಗ್ರೆಸ್‌ಗೆ ಲಾಭ: ಶಾಸಕ ಬಾಲಕೃಷ್ಣ

Published : Nov 15, 2023, 03:00 AM IST
ಬಿಜೆಪಿ-ಜೆಡಿಎಸ್‌ ಮೈತ್ರಿಯಿಂದ ಕಾಂಗ್ರೆಸ್‌ಗೆ ಲಾಭ: ಶಾಸಕ ಬಾಲಕೃಷ್ಣ

ಸಾರಾಂಶ

ಮಂತ್ರಿಗಿರಿ ಬಗ್ಗೆ ಪಕ್ಷ ಯಾವುದೇ ಆಶ್ವಾಸನೆ ನೀಡಿಲ್ಲ. ಆದರೆ, ತಾಯಿ ಆಶೀರ್ವಾದ ಮಾಡಿದರೆ ಸಚಿವನಾಗಬಹುದು ಎಂದ ಮಾಗಡಿ ಶಾಸಕ ಬಾಲಕೃಷ್ಣ 

ಹಾಸನ(ನ.15): ಹಾಸನಾಂಬೆ ಆಶೀರ್ವಾದ ಮಾಡಿದರೆ ನಾನು ಮಂತ್ರಿ ಆಗುತ್ತೇನೆ. ಆ ತಾಯಿಯ ಆಶೀರ್ವಾದ ಬೇಕಲ್ಲ. ಅದಕ್ಕಾಗೆ ಹಾಸನಾಂಬೆ ತಾಯೀನ ಕೇಳೋದಕ್ಕೆ ಬಂದಿದ್ದೇನೆ ಎಂದು ಮಾಗಡಿ ಶಾಸಕ ಬಾಲಕೃಷ್ಣ ಹೇಳಿದರು.

ಹಾಸನಾಂಬೆ ದರ್ಶನದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿ, ಮಂತ್ರಿಗಿರಿ ಬಗ್ಗೆ ಪಕ್ಷ ಯಾವುದೇ ಆಶ್ವಾಸನೆ ನೀಡಿಲ್ಲ. ಆದರೆ, ತಾಯಿ ಆಶೀರ್ವಾದ ಮಾಡಿದರೆ ಸಚಿವನಾಗಬಹುದು ಎಂದರು.

ಜೆಡಿಎಸ್-ಬಿಜೆಪಿ ನಿಜವಾದ ಬಂಡವಾಳ ಶೀಘ್ರ ಹೊರಬರಲಿದೆ: ಸಚಿವ ಆರ್.ಬಿ.ತಿಮ್ಮಾಪುರ

ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಕುರಿತು ಮಾತನಾಡಿ, ಮೈತ್ರಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಅನುಕೂಲವೇ ಆಗಿದೆ. ಜಾತ್ಯತೀತ ಮತಗಳು ಜೆಡಿಎಸ್‌ನಿಂದ ವಿಭಜನೆ ಆಗುತ್ತಿದ್ದವು. ಈಗ ಆ ಮತಗಳು ಸಂಪೂರ್ಣವಾಗಿ ನಮಗೆ ಬರುವುದರಿಂದ ನಮಗೆ ಅನುಕೂಲ ಆಗುತ್ತೆ. ಈ ಹಿಂದೆ ದೇವೇಗೌಡರೆ ನಾವು ಜಾತ್ಯತೀತ ನಿಲುವು ಇರುವವರು. ಬಿಜೆಪಿ ಜೊತೆ ಹೊಂದಾಣಿಕೆ ಬೇಡ ಎಂದಿದ್ದರು. ಇಂದು ಬಿಜೆಪಿ ಜೊತೆ ಹೋಗಿದ್ದಾರೆ. ಅದು ಅವರಿಗೆ ಬಿಟ್ಟ ವಿಚಾರ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!
Karnataka News Live: ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!