ಮಹಾಭಾರತ ಬರೆದದ್ದು ಕೀಳುಜಾತಿಯ ವಾಲ್ಮೀಕಿ: ಯತ್ನಾಳ್ ಮತ್ತೊಂದು ಎಡವಟ್ಟು

Published : Mar 06, 2020, 05:30 PM ISTUpdated : Mar 07, 2020, 07:30 AM IST
ಮಹಾಭಾರತ ಬರೆದದ್ದು ಕೀಳುಜಾತಿಯ ವಾಲ್ಮೀಕಿ: ಯತ್ನಾಳ್ ಮತ್ತೊಂದು ಎಡವಟ್ಟು

ಸಾರಾಂಶ

ಸ್ವಾತಂತ್ರ್ಯ ಹೋರಾಟಗಾರ ಎಚ್ ಎಸ್ ದೊರೆಸ್ವಾಮಿ ಪಾಕ್ ಏಜೆಂಟ್ ಎಂದು ಕರೆದು ವಿವಾದ ಕಿಡಿ ಹೊತ್ತಿಸಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದು, ಭಾರೀ ವಿವಾದಕ್ಕೆ ಕಾರಣವಾಗಿದೆ.

ಬೆಂಗಳೂರು, (ಮಾ.06): ಮಹಾಭಾರತವನ್ನು ಬರೆದಿದ್ದು ಕೀಳುಜಾತಿಯ ವಾಲ್ಮೀಕಿ ಎಂದು ಹೇಳಿವ ಮೂಲಕ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ವಿವಾದಕ್ಕೆ ಕಾರಣರಾಗಿದ್ದಾರೆ.

ಇಂದು (ಶುಕ್ರವಾರ) ಸದನದಲ್ಲಿ ಸಂವಿಧಾನದ ಕುರಿತು ಚರ್ಚೆಗಳು ನಡೆಯುತ್ತಿದ್ದ ವೇಳೆ ಮಾತನಾಡಿದ ಯತ್ನಾಳ್, ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಅವರ ಭಾಷಣ ಒಂದನ್ನು ಉಲ್ಲೇಖ ಮಾಡಿದ ಯತ್ನಾಳ್, ಹಿಂದೂಗಳಿಗೆ ವೇದಗಳು ಬೇಕಾಗಿದ್ದವು. ಆಗ ಅವರು ವ್ಯಾಸನನ್ನು ಕರೆದರು. ಅವರಿಗೊಂದು ಮಹಾ ಕಾವ್ಯ ಮಹಾಭಾರತ ಬೇಕಾಗಿತ್ತು. ಆವಾಗ ಅಸ್ಪೃಶ್ಯನಾದ ವಾಲ್ಮೀಕಿ ಬೇಕಾದ. ಇದೀಗ ಸಂವಿಧಾನದ ಅಗತ್ಯವಿದೆ ಅದಕ್ಕಾಗಿ ನನ್ನನ್ನು ಕರೆದರು ಎಂದು ಅಂಬೇಡ್ಕರ್ ಮಾತನ್ನು ಸದನದಲ್ಲಿ ತಪ್ಪಾಗಿ ಉಲ್ಲೇಳಿಸಿದರು.  

ದೊರೆಸ್ವಾಮಿ ಡೋಂಗಿ ಹೋರಾಟಗಾರ : ಯತ್ನಾಳ್

ಯತ್ನಾಳ್ ಅವರ ತಪ್ಪನ್ನು ಗಮನಿಸಿದ ಇತರ ಸದಸ್ಯರು ಮಹಾಭಾರತವನ್ನು ಬರೆದಿದ್ದು ವ್ಯಾಸ ಮಹರ್ಷಿ ಹಾಗೂ ರಾಮಾಯಣ ಬರೆದಿದ್ದು ವಾಲ್ಮೀಕಿ ಎಂದು ತಪ್ಪನ್ನು ತಿದ್ದಿದರು. 

ಡಾ. ಬಿಆರ್ ಅಂಬೇಡ್ಕರ್ ಅವರನ್ನು ದಲಿತ ನಾಯಕ ಎಂದು ಸೀಮಿತಗೊಳಿಸಿದ್ದು ದೇಶದ ದುರಂತ. ಮಹಾಪುರುಷರ ಹುಟ್ಟುಹಬ್ಬಕ್ಕೆ ಆಯಾ ಜಾತಿಯ ಜನರು ಮಾತ್ರ ಹೋಗುತ್ತಾರೆ. ಅಲ್ಲೂ ಜಾತಿ ಬಂದು ಬಿಟ್ಟಿದೆ ಎಂದರು. 

ಸ್ಪೀಕರ್‌, ಯತ್ನಾಳ್‌ ವಿರುದ್ಧ ಗೌರ್ನರ್‌ಗೆ ಕಾಂಗ್ರೆಸ್‌ ದೂರು

ಸ್ವಾತಂತ್ರ್ಯ ಹೋರಾಟಗಾರ ಎಚ್ ಎಸ್ ದೊರೆಸ್ವಾಮಿ ಪಾಕ್ ಏಜೆಂಟ್ ಎಂದು ಕರೆದು ವಿವಾದದ ಕಿಡಿ ಹೊತ್ತಿಸಿದ್ದನ್ನ ಇಲ್ಲಿ ಸ್ಮರಿಸಬಹುದು. ಇದಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದ್ದು ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ
ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ