ನಮ್ಮದು 3 ಚಕ್ರದ ಸರ್ಕಾರ, ತಾಕತ್ತಿದ್ದರೆ ಉರುಳಿಸಿ: ಉದ್ಧವ್‌!

Published : Jul 27, 2020, 11:39 AM ISTUpdated : Jul 27, 2020, 12:48 PM IST
ನಮ್ಮದು 3 ಚಕ್ರದ ಸರ್ಕಾರ, ತಾಕತ್ತಿದ್ದರೆ ಉರುಳಿಸಿ: ಉದ್ಧವ್‌!

ಸಾರಾಂಶ

ನಮ್ಮದು 3 ಚಕ್ರದ ಸರ್ಕಾರ, ತಾಕತ್ತಿದ್ದರೆ ಉರುಳಿಸಿ: ಉದ್ಧವ್‌|  ‘ಸಾಮ್ನಾ’ಗೆ ನೀಡಿರುವ ಸಂದರ್ಶನದಲ್ಲಿ ಉದ್ಧವ್ ಗುಡುಗು| ಸರ್ಕಾರ ಉರುಳಿಸುವ ಇಚ್ಛೆ ಅವರಿಗಿದ್ದರೆ ಈಗಲೇ ಉರುಳಿಸಲಿ,

ಮುಂಬೈ(ju.೨೭): ನಮ್ಮದು ಮೂರು ಗಾಲಿಯ ಸರ್ಕಾರವಾದರೂ ಸ್ಟೇರಿಂಗ್‌ ನನ್ನ ಬಳಿ ಇದೆ. ವಿರೋಧ ಪಕ್ಷಗಳಿಗೆ ತಾಕತ್ತಿದ್ದರೆ ನಮ್ಮ ಸರ್ಕಾರವನ್ನು ಉರುಳಿಸಲಿ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಸವಾಲೆಸೆದಿದ್ದಾರೆ.

60ನೇ ವರ್ಷದ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಶಿವಸೇನೆಯ ಮುಖವಾಣಿ ‘ಸಾಮ್ನಾ’ಗೆ ನೀಡಿರುವ ಸಂದರ್ಶನದಲ್ಲಿ ‘ನನ್ನ ಸರ್ಕಾರದ ಭವಿಷ್ಯ ವಿಪಕ್ಷಗಳ ಕೈಯಲ್ಲಿ ಇಲ್ಲ. ಸ್ಟೇರಿಂಗ್‌ ನನ್ನ ಬಳಿ ಇದೆ. ಮೂರು ಗಾಲಿಯ (ಆಟೋ ರಿಕ್ಷಾ) ವಾಹನ ಬಡವನ ವಾಹನವಾಗಿದೆ’ ಎಂದು ಹೇಳಿದ್ದಾರೆ.

ಆಯೋಧ್ಯೆಗೆ ತೆರಳಿ ರಾಮ ಮಂದಿರ ಭೂಮಿ ಪೂಜೆಯಲ್ಲಿ ಪಾಲ್ಗೊಳ್ಳುತ್ತೇನೆ: ಸಿಎಂ ಉದ್ಧವ್ ಠಾಕ್ರೆ

ಸರ್ಕಾರ ಉರುಳಿಸುವ ಇಚ್ಛೆ ಅವರಿಗಿದ್ದರೆ ಈಗಲೇ ಉರುಳಿಸಲಿ, ಸೆಪ್ಟೆಂಬರ್‌-ಅಕ್ಟೋಬರ್‌ವರೆಗೆ ಏಕೆ ಕಾಯಬೇಕು ಎಂದು ಬಿಜೆಪಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ. ಇದೇ ವೇಳೆ ಎನ್‌ಸಿಪಿ ಮತ್ತು ಕಾಂಗ್ರೆಸ್‌ ಸಕಾರಾತ್ಮಕ ಚಿಂತನೆಯನ್ನು ಹೊಂದಿದ್ದು, ಆ ಪಕ್ಷಗಳ ಅನುಭವವನ್ನು ಸರ್ಕಾರ ಸದುಪಯೋಗಪಡಿಸಿಕೊಳ್ಳಲಿದೆ ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!