'ಮಹಾ' ಸಚಿವರಿಗೆ ಖಾತೆ ಹಂಚಿಕೆ: ಸಿಎಂ ಪುತ್ರ ಆದಿತ್ಯ ಠಾಕ್ರೆಗೆ ಸಿಕ್ತು ಈ ಖಾತೆ!

Published : Jan 05, 2020, 10:05 AM IST
'ಮಹಾ' ಸಚಿವರಿಗೆ ಖಾತೆ ಹಂಚಿಕೆ: ಸಿಎಂ ಪುತ್ರ ಆದಿತ್ಯ ಠಾಕ್ರೆಗೆ ಸಿಕ್ತು ಈ ಖಾತೆ!

ಸಾರಾಂಶ

ಮಹಾರಾಷ್ಟ್ರ ಸಚಿವ ಸಂಪುಟ ರಚನೆ ಬೆನ್ನಲ್ಲೇ, ಖಾತೆ ಹಂಚಿಕೆ| ನೂತನ ಸಚಿವರಿಗೆ ಖಾತೆ ಹಂಚಿದ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ| ಡಿಸಿಎಂ ಅಜಿತ್ ಪವಾರ್ ಕೈ ಸೇರಿದ ಹಣಕಾಸು ಇಲಾಖೆ| ಪುತ್ರ ಆದಿತ್ಯನಿಗೂ ಮಹತ್ವದ ಖಾತೆ

ಮುಂಬೈ[ಜ.05]: ಬಹುದಿನಗಳ ಪ್ರಯಾಸದ ಬಳಿಕ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ ಠಾಕ್ರೆ ಅವರು ತಮ್ಮ ಮಂತ್ರಿಮಂಡಲದ ಸಚಿವರಿಗೆ ಶನಿವಾರ ಖಾತೆ ಹಂಚಿದ್ದಾರೆ.

ಎನ್‌ಸಿಪಿ ಮುಖಂಡ ಹಾಗೂ ಉಪಮುಖ್ಯಮಂತ್ರಿ ಅಜಿತ್‌ ಪವಾರ್‌ ಅವರು ಮಹತ್ವದ ಹಣಕಾಸು ಖಾತೆ ಪಡೆದಿದ್ದಾರೆ. ಎನ್‌ಸಿಪಿಯ ಅನಿಲ್‌ ದೇಶಮುಖ್‌ಗೆ ಗೃಹ ಖಾತೆ ಲಭಿಸಿದೆ.

ಶಿವಸೇನೆಯ ಏಕಣಾಥ ಶಿಂಧೆ ಅವರಿಗೆ ನಗರಾಭಿವೃದ್ಧಿ, ಮುಖ್ಯಮಂತ್ರಿ ಪುತ್ರ ಆದಿತ್ಯ ಠಾಕ್ರೆಗೆ ಪರಿಸರ ಹಾಗೂ ಪ್ರವಾಸೋದ್ಯಮ ಖಾತೆ, ಕಾಂಗ್ರೆಸ್‌ನ ಬಾಳಾಸಾಹೇಬ್‌ ಥೋರಟ್‌ ಅವರುಗೆ ಕಂದಾಯ, ಮಾಜಿ ಮುಖ್ಯಮಂತ್ರಿ ಅಶೋಕ ಚವಾಣ್‌ ಅವರಿಗೆ ಲೋಕೋಪಯೋಗಿ ಖಾತೆ ಪ್ರಾಪ್ತಿಯಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ ಪ್ರಕರಣ: ಎಸ್ಐಟಿ ತನಿಖೆಗೆ ಸಿ.ಟಿ.ರವಿ ಆಗ್ರಹ
ಅಕ್ಕಿ ಅಕ್ರಮದಲ್ಲಿ ಬಿಜೆಪಿಯವರೇ ಶಾಮೀಲು: ಸಚಿವ ಪ್ರಿಯಾಂಕ್ ಖರ್ಗೆ