ಇಂದು ಮಹಾ ಬಿಜೆಪಿ ಶಾಸಕಾಂಗ ಸಭೆ: ಮಹಾರಾಷ್ಟ್ರದ ಹೊಸ ಸಿಎಂ ಹೆಸರು ಘೋಷಣೆ

Published : Dec 04, 2024, 07:11 AM ISTUpdated : Dec 04, 2024, 07:36 AM IST
ಇಂದು ಮಹಾ ಬಿಜೆಪಿ ಶಾಸಕಾಂಗ ಸಭೆ: ಮಹಾರಾಷ್ಟ್ರದ ಹೊಸ ಸಿಎಂ ಹೆಸರು ಘೋಷಣೆ

ಸಾರಾಂಶ

ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ರಚನೆಗೆ ಬಿಜೆಪಿ ಕಸರತ್ತು ನಡೆಸುತ್ತಿದ್ದು, ಬುಧವಾರ ಶಾಸಕಾಂಗ ಪಕ್ಷದ ಸಭೆ ನಡೆದು ನಾಯಕನ ಆಯ್ಕೆ ನಡೆಯಲಿದೆ. ದೇವೇಂದ್ರ ಫಡ್ನವೀಸ್‌ ಮತ್ತೆ ಸಿಎಂ ಆಗುವ ಸಾಧ್ಯತೆ ಹೆಚ್ಚಿದ್ದು, ಏಕನಾಥ ಶಿಂಧೆ ಡಿಸಿಎಂ ಆಗಲು ಒಪ್ಪಿದ್ದಾರೆ ಎನ್ನಲಾಗಿದೆ.

ಮುಂಬೈ: ಮಹಾರಾಷ್ಟ್ರದಲ್ಲಿ ’ಮಹಾಯುತಿ ಕೂಟ’ದಿಂದ ಹೊಸ ಸರ್ಕಾರ ರಚನೆಗೆ ಕಸರತ್ತು ಮುಂದುವರಿದಿದ್ದು, ಮಹತ್ವದ ಬುಧವಾರ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಈ ವೇಳೆ ನಾಯಕನ ಆಯ್ಕೆ ನಡೆಯಲಿದ್ದು, ಬಳಿಕ ಸಿಎಂ ಯಾರೆಂಬ ಘೋಷಣೆಯನ್ನು ಬಿಜೆಪಿ ಮಾಡಲಿದೆ. ಮೂಲಗಳ ಪ್ರಕಾರ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್‌ ಮತ್ತೆ ಸಿಎಂ ಆಗವ ಸಾಧ್ಯತೆ ಹೆಚ್ಚಿದೆ. ಕುತೂಹಲದ ವಿಷಯವೆಂದರೆ, ನಿರ್ಗಮಿತ ಸಿಎಂ, ಶಿವಸೇನೆ ನಾಯಕ ಏಕನಾಥ ಶಿಂಧೆ ಅವರು ಡಿಸಿಎಂ ಆಗಲು ಒಪ್ಪಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಇವರ ಜತೆಗೆ ಎನ್‌ಸಿಪಿಯ ಅಜಿತ್‌ ಪವಾರ್ ಕೂಡ ಡಿಸಿಎಂ ಪಟ್ಟ ಅಲಂಕರಿಸುವ ಸಂಭವವಿದೆ. ಶಾಸಕಾಂಗ ನಾಯಕನ ಆಯ್ಕೆ ಆಗುತ್ತಿದ್ದಂತೆಯೇ ಬಿಜೆಪಿ, ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದೆ ಎಂದು ಮೂಲಗಳು ಹೇಳಿವೆ.

ಶಿಂಧೆ-ಫಡ್ನವೀಸ್‌ ಭೇಟಿ:
ಅನಾರೋಗ್ಯಕ್ಕೆ ತುತ್ತಾಗಿ ಸ್ವಂತ ಊರು ಥಾಣೆಗೆ ಮರಳಿದ್ದ ಶಿಂಧೆ ಮಂಗಳವಾರ ಮುಂಬೈಗೆ ಮರಳಿದ್ದಾರೆ. ಅವರ ‘ವರ್ಷಾ’ ನಿವಾಸಕ್ಕೆ ಬಂದ ಫಡ್ನವೀಸ್‌ ಅವರು ಶಿಂಧೆ ಜತೆ ಕೆಲ ಹೊತ್ತು ಮಾತುಕತೆ ನಡೆಸಿದರು. ಇದಕ್ಕೂ ಮುನ್ನ ಶಿಂಧೆ ಅವರು ಥಾಣೆ ಆಸ್ಪತ್ರೆಗೆ ತೆರಳಿ ಆರೋಗ್ಯ ತಪಾಸಣೆ ಮಾಡಿಸಿಕೊಂಡರು.

ಪ್ರಮಾಣ ವಚನಕ್ಕೆ ಸಿದ್ಧತೆ:
ಡಿ.5ಕ್ಕೆ ಹೊಸ ಸರ್ಕಾರದ ಪ್ರಮಾಣ ವಚನ ಸಮಾರಂಭ ನಡೆಯಲಿದ್ದು, ಮುಂಬೈನ ಅಜಾದ್‌ ಮೈದಾನದಲ್ಲಿ ಈಗಾಗಲೇ ಭರ್ಜರಿ ಸಿದ್ಧತೆ ಆರಂಭವಾಗಿದೆ.ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಶೇಖರ್‌ ಬವಂಕುಲೆ ದಕ್ಷಿಣ ಮುಂಬೈನಲ್ಲಿ ಅಜಾದ್‌ ಮೈದಾನಕ್ಕೆ ಆಗಮಿಸಿ ಸಿದ್ಧತೆಗಳ ಪರಿಶೀಲನೆ ನಡೆಸಿದರು. ಇನ್ನು ಪ್ರಮಾಣ ವಚನ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುವ ನಿರೀಕ್ಷೆಯಿದೆ. ಇದರ ಜೊತೆಗೆ ಕೇಂದ್ರ ಸಚಿವರು, ರಾಜ್ಯಪಾಲರು, ಹೈಕಮಾಂಡ್‌ ನಾಯಕರು, ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳ ಸಿಎಂ, ಡಿಸಿಎಂಗಳು ಕೂಡ ಭಾಗಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ಶಿಂಧೆ ಅಸಮಾಧಾನ: ಅಠಾವಳೆ
ನವದೆಹಲಿ: ಮುಖ್ಯಮಂತ್ರಿ ಸ್ಥಾನ ಕೈತಪ್ಪಿದ್ದಕ್ಕೆ ಶಿವಸೇನೆ (ಶಿಂಧೆ ಬಣ) ಮುಖ್ಯಸ್ಥ ಏಕನಾಥ್‌ ಶಿಂಧೆ ಅಸಮಾಧಾನಗೊಂಡಿದ್ದಾರೆ ಎಂದು ಮಂಗಳವಾರ ಕೇಂದ್ರ ಸಚಿವ ರಾಮದಾಸ್ ಅಠಾವಳೆ ಹೇಳಿದ್ದಾರೆ.ಮಂಗಳವಾರ ಮಾತನಾಡಿದ ಅಠಾವಳೆ, ಕಳೆದ ಬಾರಿಯ ಶಿಂಧೆ ಅವರ ಸರ್ಕಾರದಲ್ಲಿ ದೇವೇಂದ್ರ ಫಡ್ನವೀಸ್‌ ಅವರು ಉಪಮುಖ್ಯಮಂತ್ರಿ ಸ್ಥಾನವನ್ನು ಸ್ವೀಕರಿಸಿದ್ದರು. ಅದೇ ರೀತಿ ಈಗ ಶಿಂಧೆ ಅವರು ಕೂಡ ಉಪಮುಖ್ಯಮಂತ್ರಿ ಸ್ಥಾನವನ್ನು ಸ್ವೀಕರಿಸಬೇಕು. ಒಂದು ವೇಳೆ ಈ ರೀತಿ ಮಾಡಲು ಸಿದ್ಧರಿಲ್ಲದಿದ್ದರೆ ಅವರು ಮಹಾಯುತಿ ಅಧ್ಯಕ್ಷರಾಗಿಯೋ ಅಥವಾ ಕೇಂದ್ರಕ್ಕೆ ಬರಬಹುದು ಎಂದು ಸಲಹೆ ನೀಡಿದರು.

ಇದನ್ನೂ ಓದಿ: ಮಹಾರಾಷ್ಟ್ರಕ್ಕೆ ಅಚ್ಚರಿ ವ್ಯಕ್ತಿಯನ್ನ ಸಿಎಂ ಮಾಡ್ತಾರಾ ಮೋದಿ-ಶಾ ಜೋಡಿ?

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿದ್ದ ರಾಜಕೀಯ ಗಣಿತವನ್ನೆಲ್ಲಾ ಬುಡಮೇಲು ಮಾಡಿದ್ದೇಗೆ ದೇವೇಂದ್ರ ಫಡ್ನವೀಸ್?

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಎಚ್‌ಡಿಕೆ ಮನುವಾದಿ ಆಗಿದ್ದಾರೆ ಎಂದ ಸಿದ್ದು: ಸಿದ್ದರಾಮಯ್ಯ ಮಜಾವಾದಿ ಎಂದ ಎಚ್‌ಡಿಕೆ
ನಮ್ಮ ಹಣ ನಮಗೆ ಬೇಕಾದವರಿಗೆ ನೀಡುತ್ತೇವೆ: ನ್ಯಾಷನಲ್ ಹೆರಾಲ್ಡ್ ಕೇಸಲ್ಲಿ ಸಮನ್ಸ್‌ಗೆ ಡಿಕೆಶಿ ಆಕ್ರೋಶ