ಜಗದೀಶ ಶೆಟ್ಟರ್ ಜೊತೆ ಮೊದಲಿನಂತೆ ಇದ್ದೇವೆ: ಮಹೇಶ ಟೆಂಗಿನಕಾಯಿ

Published : Mar 14, 2024, 09:45 PM IST
ಜಗದೀಶ ಶೆಟ್ಟರ್ ಜೊತೆ ಮೊದಲಿನಂತೆ ಇದ್ದೇವೆ: ಮಹೇಶ ಟೆಂಗಿನಕಾಯಿ

ಸಾರಾಂಶ

ಜಗದೀಶ್ ಶೆಟ್ಟರ್ ಅವರಿಗೆ ಲೋಕಸಭಾ ಟಿಕೆಟ್ ನೀಡುವ ವಿಚಾರದಲ್ಲಿ ವೈಯಕ್ತಿಕ ಅಭಿಪ್ರಾಯ ಏನಿಲ್ಲ. ಪಾರ್ಟಿ ಏನು ನಿರ್ಧಾರ ತೆಗೆದುಕೊಳ್ಳುತ್ತೇ ಅದಕ್ಕೆ ನಾವು ಬದ್ಧರಾಗಿರಬೇಕು. ಪಕ್ಷದ ನಿರ್ಧಾರವೇ ಅಂತಿವಾಗಿರುತ್ತೆ. ಯಾರೇ ಇದ್ದರೂ ಗೆಲ್ಲಿಸುವುದು ನಮ್ಮ ಗುರಿಯಾಗಿದೆ ಎಂದು ತಿಳಿಸಿದ ಶಾಸಕ ಮಹೇಶ ಟೆಂಗಿನಕಾಯಿ 

ಬಾಗಲಕೋಟೆ(ಮಾ.14):  ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಜೊತೆ ಮೊದಲು ಹೇಗಿದ್ದೇವೆಯೋ ಈಗಲೂ ಹಾಗೆ ಇದ್ದೇವೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು. ನಗರದಲ್ಲಿ ಬುಧವಾರ ಜಗದೀಶ ಶೆಟ್ಟರ್ ಜೊತೆ ಗುರು ಶಿಷ್ಯ ಸಂಬಂಧ ಹೇಗಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಜಗದೀಶ್ ಶೆಟ್ಟರ್‌ ನಮ್ಮ ಹಿರಿಯರು. ಅವರು ಬೇರೆ ಪಕ್ಷದಲ್ಲಿದ್ದಾಗ ಬೇರೆ, ಈಗ ಬೇರೆ. ಈಗ ನಮ್ಮ ಪಕ್ಷದಲ್ಲಿಯೇ ಇದ್ದಾರೆ, ಅದರಲ್ಲೇನು ಸಮಸ್ಯೆ ಇಲ್ಲ ಎಂದರು.

ಒಬ್ಬ ಬೂತ್ ಮಟ್ಟದ ಕಾರ್ಯಕರ್ತ ಬಿಟ್ಟು ಹೋದರೂ ಮನವೊಲಿಸಿ ಕರೆತಂದು ಮುನ್ನಡೆಯುತ್ತೇವೆ. ಈಗಲೂ ಹಾಗೆ ಎಲ್ಲರನ್ನೂ ಒಗ್ಗೂಡಿಸಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ದೇಶದ ಪ್ರಧಾನಿಯಾಗಿಸಲು ಮುಂದಾಗಬೇಕಿದೆ. ಇದರಲ್ಲಿ ವೈಯಕ್ತಿಕ ಹಿತಾಸಕ್ತಿ, ಕಾರಣಗಳಿಲ್ಲ. ಪಕ್ಷ ಸಂಘಟಿಸಿ ಮೋದಿಯವರನ್ನ 3ನೇ ಬಾರಿ ಪ್ರಧಾನಿಯನ್ನಾಗಿಸುವುದು ನಮ್ಮ ಗುರಿ ಎಂದರು.

ಮದರಸಾಗಳು ಭಯೋತ್ಪಾದಕರನ್ನು ತಯಾರು ಮಾಡುವ ಕಾರ್ಖಾನೆಗಳಾಗಿವೆ: ಪ್ರಮೋದ್ ಮುತಾಲಿಕ್ ಕಿಡಿ

ಜಗದೀಶ್ ಶೆಟ್ಟರ್ ಅವರಿಗೆ ಲೋಕಸಭಾ ಟಿಕೆಟ್ ನೀಡುವ ವಿಚಾರದಲ್ಲಿ ವೈಯಕ್ತಿಕ ಅಭಿಪ್ರಾಯ ಏನಿಲ್ಲ. ಪಾರ್ಟಿ ಏನು ನಿರ್ಧಾರ ತೆಗೆದುಕೊಳ್ಳುತ್ತೇ ಅದಕ್ಕೆ ನಾವು ಬದ್ಧರಾಗಿರಬೇಕು. ಪಕ್ಷದ ನಿರ್ಧಾರವೇ ಅಂತಿವಾಗಿರುತ್ತೆ. ಯಾರೇ ಇದ್ದರೂ ಗೆಲ್ಲಿಸುವುದು ನಮ್ಮ ಗುರಿಯಾಗಿದೆ ಎಂದು ತಿಳಿಸಿದರು.

ಧಾರವಾಡ ಲೋಕಸಭಾ ಕ್ಷೇತ್ರದ ಟಿಕೆಟ್ ಬದಲಾವಣೆ ಕೂಗು ಕುರಿತು ಪ್ರತಿಕ್ರಿಯಿಸಿದ ಅವರು, ಧಾರವಾಡದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಒಳ್ಳೆಯ ಕೆಲಸ ಮಾಡಿದ್ದಾರೆ. ಈ ಹಿಂದೆ ಹಲವು ಸಂದರ್ಭಗಳಲ್ಲಿ ಕೇಂದ್ರ ಮತ್ತು ರಾಜ್ಯದ ಮಧ್ಯೆ ಸಂಪರ್ಕ ಸೇತುವೆಯಾಗಿ ಕೆಲಸ ಮಾಡಿದ್ದಾರೆ. ಸ್ಥಳೀಯವಾಗಿ ಎಲ್ಲರ ಅಭಿಪ್ರಾಯ ನೀಡಲಾಗಿದೆ. ಪಕ್ಷ ಅಂತಿಮವಾಗಿ ನಿರ್ಧಾರ ಮಾಡುತ್ತೆ ಎಂದು ಸ್ಪಷ್ಟಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಡಾ ಜಿ ಪರಮೇಶ್ವರ ರಾಜ್ಯದ ಸಿಎಂ ಆಗಬೇಕು, ರಾಜಕೀಯದಲ್ಲಿ ಸಂಚಲನ ಮೂಡಿಸೋ ಹೇಳಿಕೆ ಕೊಟ್ಟ ಕೇಂದ್ರ ಸಚಿವ ವಿ. ಸೋಮಣ್ಣ!
ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!