ಕೇಂದ್ರ ಸರ್ಕಾರದ ಅಕ್ಕಿ ಯೋಜನೆಯನ್ನು ಸದ್ಬಳಸಿಕೊಳ್ಳಿ: ಬಿ.ಎಸ್.ಯಡಿಯೂರಪ್ಪ

Published : Feb 15, 2024, 03:00 AM IST
ಕೇಂದ್ರ ಸರ್ಕಾರದ ಅಕ್ಕಿ ಯೋಜನೆಯನ್ನು ಸದ್ಬಳಸಿಕೊಳ್ಳಿ: ಬಿ.ಎಸ್.ಯಡಿಯೂರಪ್ಪ

ಸಾರಾಂಶ

ಈಗಾಗಲೇ ಬರಗಾಲ ತಾಂಡವಾಡುತ್ತಿದೆ. ಮಳೆ ಇಲ್ಲದೇ ಜನ, ಜಾನುವಾರುಗಳು ಕುಡಿಯುವ ನೀರಿಗೆ ಹಾಹಾಕಾರ ಪಡುವಂತಾಗಿದೆ. ಮುಂಬರುವ ದಿನಗಳಲ್ಲಿ ಇನ್ನೂ ಬರಗಾಲ ಭೀಕರವಾಗುವ ಸಾಧ್ಯತೆಯಿದೆ. ಇದನ್ನು ದೇವರೊಬ್ಬನಿಂದ ಮಾತ್ರ ತಡೆಯಲು ಸಾಧ್ಯ.

ತುರುವೇಕೆರೆ (ಫೆ.15): ಈಗಾಗಲೇ ಬರಗಾಲ ತಾಂಡವಾಡುತ್ತಿದೆ. ಮಳೆ ಇಲ್ಲದೇ ಜನ, ಜಾನುವಾರುಗಳು ಕುಡಿಯುವ ನೀರಿಗೆ ಹಾಹಾಕಾರ ಪಡುವಂತಾಗಿದೆ. ಮುಂಬರುವ ದಿನಗಳಲ್ಲಿ ಇನ್ನೂ ಬರಗಾಲ ಭೀಕರವಾಗುವ ಸಾಧ್ಯತೆಯಿದೆ. ಇದನ್ನು ದೇವರೊಬ್ಬನಿಂದ ಮಾತ್ರ ತಡೆಯಲು ಸಾಧ್ಯ. ಆ ದೇವರು ಮನಸ್ಸು ಮಾಡಿದರಷ್ಟೇ ಈ ದುಸ್ಥಿತಿಯಿಂದ ದೂರವಾಗಲು ಸಾಧ್ಯ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಹೇಳಿದರು. ತಾಲೂಕಿನ ದಬ್ಬೇಘಟ್ಟ ಹೋಬಳಿಯ ಮುದಿಗೆರೆ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶ್ರೀ ವೀರಭದ್ರೇಶ್ವರಸ್ವಾಮಿ ಮತ್ತು ಭದ್ರಕಾಳಿದೇವಿ ಹಾಗೂ ನವಗ್ರಹ ದೇವಾಲಯಗಳ ಶಿಲಾಮಂಟಪಗಳ ಉದ್ಘಾಟನಾ ಸಮಾರಂಭದ ಧಾರ್ಮಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಈ ವರ್ಷ ನಮ್ಮ ದುರ್ದೈವಕ್ಕೆ ಸರಿಯಾದ ಮಳೆಯಾಗದೆ ರೈತರು ಸಂಕಷ್ಟದಲ್ಲಿದ್ದಾರೆ. ಬೋರ್‌ವೆಲ್‌ಗಳಲ್ಲಿ ನೀರು ಸಿಗದಂತಾಗಿದೆ. ತೋಟಗಳು ಒಣಗಿ ಹೋಗುತ್ತಿವೆ. ನಾಡಿನ ಜನರ ಪೂಜಾ ಕೈಂಕರ್ಯಗಳಿಗೆ ದೇವರು ಕರುಣಿಸಿ ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗಿ ಕೆರೆ, ಕಟ್ಟೆ ತುಂಬಿ ರೈತರಿಗೆ ಒಳ್ಳೆಯ ಕಾಲ ಬರಲು ಸಾಧ್ಯ. ಹಾಗಾಗಿ ದೇಶಕ್ಕೆ ಉತ್ತಮವಾಗಿ ಮಳೆ, ಬೆಳೆಯಾಗಿ ದೇಶದ ಜನರು ನಿಶ್ಚಿಂತೆಯಿಂದಿರಲು ನಾನೂ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದರು. ನಾಡಿನ ಉದ್ದಗಲಕ್ಕೂ ಈ ರೀತಿಯ ಧರ್ಮ ಕಾರ್ಯಗಳನ್ನು ಜನರು ಕೈಗೊಳ್ಳುವುದರಿಂದ ದೇವರ ಅನುಗ್ರಹವಾಗಿ ನಾಡಿಗೆ ಒಳಿತಾಗಲಿದೆ ಎಂದರು.

ರಾಹುಲ್ ಗಾಂಧಿಗೆ ಖರ್ಗೆ, ಸಿದ್ದು ಪಾಠ ಹೇಳಲಿ: ಕೆ.ಎಸ್.ಈಶ್ವರಪ್ಪ ವ್ಯಂಗ್ಯ

ಶಾಸಕ ಎಂ.ಟಿ.ಕೃಷ್ಣಪ್ಪ ಮಾತನಾಡಿ, ಇಡೀ ರಾಜ್ಯದಲ್ಲಿ ರೈತರ ಪರ ಹೋರಾಟ ಮಾಡಿದವರು ಬಿ.ಎಸ್.ಯಡಿಯೂರಪ್ಪ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮಾತ್ರ. ಇವರಿಬ್ಬರೇ ಹಲವು ಹೋರಾಟಗಳ ಮೂಲಕ ರೈತರಿಗೆ ನ್ಯಾಯ ಕೊಡಿಸಿದ್ದಾರೆ. ನಾವು ದೇವರ ನಂಬಿ ಜೀವನ ನಡೆಸುವವರು. ಪ್ರತಿ ಗ್ರಾಮದಲ್ಲಿ ದೇವಾಲಯಗಳನ್ನು ನಿರ್ಮಿಸಿ ಪೂಜೆ ಮಾಡುವುದು ನಮ್ಮ ಸನಾತನ ಧರ್ಮದಲ್ಲಿನ ಒಂದು ಭಾಗವಾಗಿದೆ ಎಂದರು. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ೨೯ ರು.ಗಳಿಗೆ ಕೆ.ಜಿ ಅಕ್ಕಿ ನೀಡುವ ಯೋಜನೆಗೆ ಚಾಲನೆ ನೀಡಲಾಯಿತು. ಸಮಾರಂಭದ ದಿವ್ಯ ಸಾನಿಧ್ಯವನ್ನು ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಡಾ. ಶ್ರೀ ಕರಿವೃಷಭ ದೇಶಿಕೇಂದ್ರ ಶಿವಯೋಗಿಶ್ವರ ಮಹಾಸ್ವಾಮೀಜಿ ವಹಿಸಿ ಆಶೀರ್ವಚನ ನೀಡಿದರು.

ಲೋಕಸಭಾ ಸದಸ್ಯ ಜಿ.ಎಸ್.ಬಸವರಾಜು, ಮಾಜಿ ಶಾಸಕರಾದ ಎಂ.ಡಿ.ಲಕ್ಷ್ಮೀನಾರಾಯಣ್, ಮಸಾಲ ಜಯರಾಮ್ ಮಾತನಾಡಿದರು. ಸಮಾರಂಭದಲ್ಲಿ ಮುಖಂಡರಾದ ಎಂ.ಡಿ.ಮೂರ್ತಿ, ಡಿ.ಆರ್.ಬಸವರಾಜು, ಮಲ್ಲಿಕಾರ್ಜುನ್, ಎ.ಬಿ.ಜಗದೀಶ್, ವಿ.ಬಿ.ಸುರೇಶ್, ಚಿದಾನಂದ್, ಗೊಟ್ಟಿಕೆರೆ ಕಾಂತರಾಜು, ರಮೇಶ್ ಗೌಡ, ಸೋಮಶೇಖರ್ ದೇವಾಲಯ ಟ್ರಸ್ಟ್ ಅಧ್ಯಕ್ಷ ಚಿಕ್ಕವೀರಯ್ಯ, ಉಪಾಧ್ಯಕ್ಷ ಕೆಂಪೇಗೌಡ, ನಾರಾಯಣ್ ಸೇರಿ ಹಲವು ಮುಖಂಡರು, ಗ್ರಾಮಸ್ಥರು, ಅಕ್ಕಪಕ್ಕದ ಗ್ರಾಮಸ್ಥರು, ಭಕ್ತಾದಿಗಳು ಇದ್ದರು. ಸವಿತಾ ಶಿವಕುಮಾರ್ ನಿರೂಪಿಸಿದರು. ಶಿಕ್ಷಕ ನಟೇಶ್ ಸ್ವಾಗತಿಸಿದರು. ಭಕ್ತಾದಿಗಳಿಗೆ ಅನ್ನದಾಸೋಹ ವ್ಯವಸ್ಥೆ ಮಾಡಲಾಗಿತ್ತು.

ಅಭದ್ರತೆ ಕಾಡಿದಾಗಷ್ಟೇ ಬಿಜೆಪಿಗೆ ದೇಶಪ್ರೇಮ: ಆಯನೂರು ಮಂಜುನಾಥ್

ಕೇಂದ್ರದ ಅಕ್ಕಿ ಯೋಜನೆಯನ್ನು ಸದ್ಬಳಸಿಕೊಳ್ಳಿ: ಪ್ರಧಾನಿ ನರೇಂದ್ರ ಮೋದಿಯವರು ಸಂಸತ್ತಿನಲ್ಲಿ ಮಾತನಾಡಿ ನಾರಿಶಕ್ತಿ, ಯುವಶಕ್ತಿ, ರೈತಶಕ್ತಿ ಮತ್ತು ದಲಿತ ಶಕ್ತಿಗಳು ಒಂದಾದರೆ ನಮ್ಮ ದೇಶವನ್ನು ಬಹಳ ಎತ್ತರಕ್ಕೆ ಕೊಂಡಯ್ಯಬಹುದು ಎಂದು ತಿಳಿಸಿದ್ದಾರೆ. ಬಡವ, ಶ್ರೀಮಂತರೆಂಬ ಭೇಧವಿಲ್ಲದೇ ಕೇವಲ ೨೯ ರು. ಗಳಿಗೆ ಉತ್ತಮ ಗುಣಮಟ್ಟದ ಒಂದು ಕೆಜಿ ಅಕ್ಕಿ ನೀಡುವ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಈ ಯೋಜನೆಯನ್ನು ಜನರು ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಮಾಜಿ ಸಚಿವ ಎಚ್.ಡಿ.ರೇವಣ್ಣ ಮಾತನಾಡಿ, ೧೨ ಜಿಲ್ಲೆಯಲ್ಲಿನ ತೆಂಗು ಬೆಳೆಯುವ ರೈತರ ಬದುಕು ಅತಂತ್ರವಾಗಿದೆ. ಕೊಬ್ಬರಿ ಬೆಳೆ ಕುಸಿತದಿಂದ ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ನ್ಯಾಫೆಡ್ ಮೂಲಕ ಕೇವಲ ೬೨ ಸಾವಿರ ಮೆಟ್ರಿಕ್ ಟನ್ ಕೊಬ್ಬರಿ ಖರೀದಿ ಮಾಡಿದರೆ ಸಾಲದು. ಕೂಡಲೇ ರೈತರು ಬೆಳೆದಿರುವ ೨ ಲಕ್ಷದ ೫೦ ಸಾವಿರ ಮೆಟ್ರಿಕ್ ಟನ್ ಕೊಬ್ಬರಿ ಖರೀದಿಸಬೇಕು ಎಂದು ಒತ್ತಾಯಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
ದ್ವೇಷ ಭಾಷಣ ತಡೆಗೆ ಕಾನೂನು ಯತ್ನ: ಕಾಂಗ್ರೆಸ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಕ್ರೋಶ