ಮಲ್ಲಿಕಾರ್ಜುನ ಖರ್ಗೆಗೆ ಪ್ರಧಾನಿ, ರಾಷ್ಟ್ರಪತಿ ಆಗುವ ಅರ್ಹತೆ ಇದೆ: ವೆಂಕಟೇಶ್

Published : Jan 06, 2024, 10:15 PM IST
ಮಲ್ಲಿಕಾರ್ಜುನ ಖರ್ಗೆಗೆ ಪ್ರಧಾನಿ, ರಾಷ್ಟ್ರಪತಿ ಆಗುವ ಅರ್ಹತೆ ಇದೆ: ವೆಂಕಟೇಶ್

ಸಾರಾಂಶ

ಮಲ್ಲಿಕಾರ್ಜುನ ಖರ್ಗೆ ಅವರಿಗ ಪ್ರಧಾನಿ ಅಲ್ಲ ರಾಷ್ಟ್ರಪತಿಗಳಾಗುವ ಅರ್ಹತೆಯೂ ಇದೆ. ಜಿ.ಟಿ.ದೇವೇಗೌಡರಿಗೆ ಅರಿವಿನ ಕೊರತೆ ಇದೆ ಅನ್ನಿಸುತ್ತದೆ ಎಂದ ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್ 

ಮೈಸೂರು(ಜ.06):  ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪ್ರಧಾನಿ ಆಗಲು ಅರ್ಹತೆ ಇಲ್ಲ ಎಂಬ ಶಾಸಕ ಜಿ.ಟಿ ದೇವೇಗೌಡರ ಹೇಳಿಕೆಗೆ ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್ ತಿರುಗೇಟು ನೀಡಿದರು. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರಿಗ ಪ್ರಧಾನಿ ಅಲ್ಲ ರಾಷ್ಟ್ರಪತಿಗಳಾಗುವ ಅರ್ಹತೆಯೂ ಇದೆ. ಜಿ.ಟಿ.ದೇವೇಗೌಡರಿಗೆ ಅರಿವಿನ ಕೊರತೆ ಇದೆ ಅನ್ನಿಸುತ್ತದೆ ಎಂದರು.

ಇವರಿಗೆ ಬಡತನ, ಶೋಷಣೆ ಅನ್ನೋದು ಗೊತ್ತಿಲ್ಲ. ಇವರು ಉನ್ನತ ಶಿಕ್ಷಣ ಸಚಿವರಾಗಿದ್ದವರು, ಇದು ಪ್ರಜಾಪ್ರಭುತ್ವದ ಸೌಂದರ್ಯ. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಎಲ್ಲ ರೀತಿಯ ಅವಕಾಶಗಳಿವೆ. ಮೈಸೂರು ಅಭಿವೃದ್ಧಿಯಲ್ಲಿ ಸಿದ್ದರಾಮಯ್ಯ ಅವರ ಕೊಡುಗೆ ಏನೂ ಇಲ್ಲ ಎಂಬ ಜಿಟಿಡಿ ಹೇಳಿಕೆಗೆ ನಾನು ಬಹಿರಂಗ ಸವಾಲು ಹಾಕುತ್ತೇನೆ. ಅವರು ಬರಲಿ ಅವರ ಜೊತೆ ಬಿಜೆಪಿಯವರು ಬರಲಿ ನಾವು ಉತ್ತರ ಕೊಡುತ್ತೇವೆ ಎಂದರು.

ರೈತರಿಗೆ ಸೌರಶಕ್ತಿ ಚಾಲಿತ ತಂಪುಕಾರಕ ಘಟಕಗಳು ತುಂಬಾ ಸಹಕಾರಿ

ಜಯದೇವ ಆಸ್ಪತ್ರೆ, ಮಹಾರಾಣಿ ಕಾಲೇಜು ನಿರ್ಮಾಣ, ಜಿಲ್ಲಾಧಿಕಾರಿ ಕಚೇರಿ, ಜಿಲ್ಲಾ ಆಸ್ಪತ್ರೆ ಕಟ್ಟಡಗಳೇ ಸಿದ್ದರಾಮಯ್ಯ ಅಭಿವೃದ್ಧಿಯ ಸಾಧನೆಗೆ ಸಾಕ್ಷಿಯಾಗಿವೆ. ನಮ್ಮ ಜೊತೆ ಚರ್ಚೆಗೆ ಬರಲಿ, ನಾವು ಸಿದ್ದರಾಮಯ್ಯ ಅವರು ಏನು ಮಾಡಿದ್ದಾರೆ ಎಂದು ಹೇಳುತ್ತೇವೆ ಎಂದರು.

ಬಿಜೆಪಿ ರಾಜಕೀಯ ಪ್ರೇರಿತ ಹೇಳಿಕೆ:

ನಾನು ಕರಸೇವಕ, ನನ್ನನ್ನೂ ಬಂಧಿಸಿ ಎಂಬ ಪ್ರತಿಭಟನಾ ಅಭಿಯಾನ ನಡೆಸುತ್ತಿರುವ ಬಿಜೆಪಿ ನಾಯಕರ ವಿರುದ್ಧ ಅವರು ವಾಗ್ದಾಳಿ ನಡೆಸಿದರು. ನ್ಯಾಯಾಲಯದ ನಿರ್ದೇಶನದ ಮೇರೆಗೆ ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನವಾಗಿದೆ. ಹಾದಿ, ಬೀದಿಯಲ್ಲಿ ಹೋಗುವವರನ್ನು ಬಂಧಿಸಲು ಆಗುತ್ತದೆಯೇ ಎಂದರು.

ಮಂದಿರ, ಹಿಂದುತ್ವ ಎಂದು ಜನರನ್ನು ಮರಳು ಮಾಡುತ್ತಿರುವ ಬಿಜೆಪಿ: ಯತೀಂದ್ರ ಸಿದ್ದರಾಮಯ್ಯ

ನಾವೇನು ರಾಮನ ಭಕ್ತರಲ್ಲವೇ. ಬರಿ ಬರೀ ರಾಮ ರಾಮ ಎಂದರೆ ಹೊಟ್ಟೆ ತುಂಬುವುದಿಲ್ಲ. ಸರ್ಕಾರ ಮಾಡಿದ್ದೆಲ್ಲವೂ ತಪ್ಪು ತಪ್ಪು ಎನ್ನುವುದು ಏಕೆ? ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಪ್ರಕರಣಗಳನ್ನು ಇತ್ಯರ್ಥಗೊಳಿಸುವಂತೆ ನ್ಯಾಯಾಲಯ ಸರ್ಕಾರಕ್ಕೆ ಸೂಚನೆ ನೀಡಿದೆ. ಹಾಗಾಗಿ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಪ್ರಕರಣಗಳ ಸಂಬಂಧ ಸರ್ಕಾರ ಇದೀಗ ಕ್ರಮಕೈಗೊಂಡಿದೆ ಎಂದರು.

ಇದೇ ಹಿನ್ನೆಲೆಯಲ್ಲಿ ಶ್ರೀಕಾಂತ್ ಪೂಜಾರಿಯ ಬಂಧನವಾಗಿದೆ. ಆದರೆ, ಈ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿರುವುದು ಹಾಸ್ಯಾಸ್ಪದ ಎಂದು ಅವರು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್