'ಗೌಡ, ಖರ್ಗೆ ಹಳೆ ಹುಲಿಗಳು, ಏನ್ಮಾಡ್ತಾರೆ ಅಂತ ಹೇಳಲಾಗದು'

Published : Dec 05, 2019, 09:22 AM IST
'ಗೌಡ, ಖರ್ಗೆ ಹಳೆ ಹುಲಿಗಳು, ಏನ್ಮಾಡ್ತಾರೆ ಅಂತ ಹೇಳಲಾಗದು'

ಸಾರಾಂಶ

ಗೌಡ, ಖರ್ಗೆ ಹಳೆ ಹುಲಿಗಳು, ಏನ್ಮಾಡ್ತಾರೆ ಅಂತ ಹೇಳಲಾಗದು| ಖರ್ಗೆ ಸಿಹಿ ಸುದ್ದಿ ಏನಂತ ಕಾಯ್ತಿದ್ದೇನೆ: ಸವದಿ

ಅಥಣಿ[ಡಿ.05]: ಕಾಂಗ್ರೆಸ್‌ನ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರಿಗಿಂತ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಅನುಭವ ದೊಡ್ಡದು. ಇಬ್ಬರೂ ಸೇರಿದರೆ ಏನಾದರೂ ಮಾಡುತ್ತಾರೆ. ಇಬ್ಬರೂ ಹಳೆ ಹುಲಿಗಳು. ಒಂದೆಡೆ ಸೇರಿದರೆ ಏನೇನಾಗುತ್ತದೆಯೋ ಹೇಳುವುದಕ್ಕೆ ಆಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.

ಪಟ್ಟಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.9ರ ನಂತರ ಸಿಹಿ ಸುದ್ದಿ ಇದೆ ಎಂಬ ಮಲ್ಲಿಕಾರ್ಜುನ ಖರ್ಗೆ ಅವರ ಮಾತಿಗೆ ಈ ರೀತಿಯಾಗಿ ಪ್ರತಿಕ್ರಿಯೆ ನೀಡಿದರು. ಖರ್ಗೆ ಅವರು ಕಲರ್‌ ಕಾಗೆ ಹಾರಿಸಲ್ಲ. ಹಾಗಾಗಿ ‘ಸಮಥಿಂಗ್‌ ಈಸ್‌ ದೇರ್‌’ ಅಂತಾರಲ್ಲ ಹಾಗೆ ಏನೋ ಆಗಲಿದೆ ಎಂದರು.

ಖರ್ಗೆಯವರ ಮಾತುಗಳನ್ನು ನಾನು ಸೂಕ್ಷ್ಮವಾಗಿ ಗಮನಿಸಿದ್ದೇನೆ. ಅವರು ಯಾವತ್ತೂ ಹಗುರವಾದ ಮಾತು ಹೇಳುವುದಿಲ್ಲ. ಅವರ ಮಾತುಗಳನ್ನು ಪಕ್ಷದ ಮುಖಂಡರು ಕೇಳುತ್ತಾರೆ. ಅವರದು ಲೂಸ್‌ ಟಾಕ್‌ ಅಲ್ಲ. ಊಹಾಪೋಹವನ್ನು ಹುಟ್ಟು ಹಾಕುವವರೂ ಅವರಲ್ಲ. ಅವರ ಪಕ್ಷದ ಕಾರ್ಯಕರ್ತರ ಪಾಲಿಗೆ ಸಿಹಿ ಸುದ್ದಿ ನೀಡಲು ಏನು ಮಾಡುತ್ತಾರೆ ಎನ್ನುವುದನ್ನು ನಾವೂ ಕಾತುರದಿಂದ ಕಾಯುತ್ತಿದ್ದೇವೆ ಎಂದರು.

ಆದರೆ ವಿರೋಧ ಪಕ್ಷಗಳ ಕನಸು ಭಗ್ನವಾಗುತ್ತದೆ. ಜತೆಗೆ ನಿರಾಶೆಯೂ ಆಗುತ್ತದೆ. ಡಿ.9ರ ಬಳಿಕ ಎರಡೂ ಪಕ್ಷಗಳಲ್ಲಿ ಬದಲಾವಣೆ ಆಗುತ್ತದೆ ಎಂದು ಭವಿಷ್ಯ ನುಡಿದರು. ಇದೇವೇಳೆ ಜೆಡಿಎಸ್‌ ಬಗ್ಗೆ ಚರ್ಚೆ ಮಾಡುವ ಅಗತ್ಯವಿಲ್ಲ ಎಂದು ತಿಳಿಸಿದರು.

ಮನುಷ್ಯ ಆಸೆ ಪಡುವುದು ತಪ್ಪಿಲ್ಲ. ಸಿದ್ದರಾಮಯ್ಯ ಇನ್ನೊಮ್ಮೆ ಸಿಎಂ ಆಗುತ್ತೇನೆ ಎಂದು ಹೇಳುತ್ತಾರೆ. ನನಗೂ ಅವಕಾಶ ಸಿಕ್ಕರೆ ಪ್ರಧಾನಿಯಾಗಬೇಕು ಅಂತಾ ಆಸೆ ಇದೆ. ಆದರೆ ಆಗದಿರುವುದನ್ನು ಹೇಳುವುದು ಸರಿಯಲ್ಲ ಅಲ್ಲವೇ ಎಂದು ಸಿದ್ದರಾಮಯ್ಯಗೆ ಟಾಂಗ್‌ ನೀಡಿದರು.

ಜೋಡೆತ್ತುಗಳು ಆಗಾಗ ಕೂಡುತ್ತವೆ:

ಡಿಕೆಶಿ-ಎಚ್‌ಡಿಕೆ ಹುಬ್ಬಳ್ಳಿ ಭೇಟಿಯಾದ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಡಿಕೆಶಿ-ಎಚ್‌ಡಿಕೆ ಹೆಲಿಕಾಪ್ಟರ್‌ ಟೇಕ್‌ ಆಫ್‌ ಆಗುವವರೆಗೆ ಅವರು ಅಲ್ಲಿ ಕೂಡಿದ್ದರಂತೆ. ಜೋಡೆತ್ತುಗಳು ಆಗಾಗ ಕೂಡುತ್ತಿರುತ್ತಾರೆ. ಹಾಗೆಯೇ ಅವರಿಬ್ಬರು ಸೇರಿರಬಹುದು ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯತ್ನಾಳ್ ಭಾಷಣಕ್ಕೆ ಟಾಂಗ್ ಕೊಡಲು ಹೋಗಿ ಯಡವಟ್ಟು ಮಾಡಿಕೊಂಡ ಸಚಿವ ಸಂತೋಷ್ ಲಾಡ್!
ಸವಣೂರು ಘಟನೆ ಕಾಂಗ್ರೆಸ್ ಓಲೈಕೆ ರಾಜಕಾರಣದ ಪ್ರತಿಬಿಂಬ, ರಾಜ್ಯದಲ್ಲಿ ಪೊಲೀಸರ ನಿಷ್ಕ್ರಿಯತೆ ಬಗ್ಗೆಯೂ ಸಂಸದ ಬೊಮ್ಮಾಯಿ ಕಿಡಿ