ಯಾವ ಕಾರಣಕ್ಕೆ ಜಿಎಸ್‌ಟಿ ಕಡಿತ ಎಂದು ಗೊತ್ತಿಲ್ಲ: ಮಲ್ಲಿಕಾರ್ಜುನ ಖರ್ಗೆ

Published : Sep 08, 2025, 07:59 AM IST
ಯಾವ ಕಾರಣಕ್ಕೆ ಜಿಎಸ್‌ಟಿ ಕಡಿತ ಎಂದು ಗೊತ್ತಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸಾರಾಂಶ

ಜಿಎಸ್‌ಟಿ ಕಡಿತ ಬಗ್ಗೆ ಕಳೆದ ಎಂಟು ವರ್ಷಗಳಿಂದ ಹೋರಾಟ ಮಾಡುತ್ತಾ ಬಂದಿದ್ದೆವು, ಆದರೆ ನಮ್ಮ ಬೇಡಿಕೆ ಮತ್ತು ಮನವಿಗೆ ಕೇಂದ್ರ ಸರ್ಕಾರ ಮನ್ನಣೆ ನೀಡಿರಲಿಲ್ಲ. ಸದ್ಯ ಯಾವ ಕಾರಣಕ್ಕೆ ಜಿಎಸ್‌ಟಿ ಕಡಿತ ಮಾಡಿದ್ದಾರೋ ನಮಗೆ ಗೊತ್ತಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಕಲಬುರಗಿ (ಸೆ.08): ಜಿಎಸ್‌ಟಿ ಕಡಿತ ಬಗ್ಗೆ ಕಳೆದ ಎಂಟು ವರ್ಷಗಳಿಂದ ಹೋರಾಟ ಮಾಡುತ್ತಾ ಬಂದಿದ್ದೆವು, ಆದರೆ ನಮ್ಮ ಬೇಡಿಕೆ ಮತ್ತು ಮನವಿಗೆ ಕೇಂದ್ರ ಸರ್ಕಾರ ಮನ್ನಣೆ ನೀಡಿರಲಿಲ್ಲ. ಸದ್ಯ ಯಾವ ಕಾರಣಕ್ಕೆ ಜಿಎಸ್‌ಟಿ ಕಡಿತ ಮಾಡಿದ್ದಾರೋ ನಮಗೆ ಗೊತ್ತಿಲ್ಲ ಎಂದು ರಾಜ್ಯಸಭೆಯ ವಿಪಕ್ಷ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಜಿಎಸ್‌ಟಿಯನ್ನು ಏಕೆ ಕಡಿತ ಮಾಡಲಾಗಿದೆ ಎನ್ನುವುದು ಮೋದಿಗೇ ಗೊತ್ತು.

ಆದರೆ, ಜಿಎಸ್‌ಟಿ ಕಡಿತ ನಮ್ಮ ದೃಷ್ಟಿಯಿಂದ ಬಡಜನರಿಗೆ ಅನುಕೂಲ. ಇದನ್ನು ನಾನು ರಾಜಕೀಯವಾಗಿ ನೋಡಲ್ಲ. ಟೀಕೆಯನ್ನೂ ಮಾಡಲ್ಲ ಎಂದರು. ನಾವು ಯಾವಾಗಲೂ ಜನಪರವಾಗಿ ಇರುವವರು. ಜನರ ಸಮಸ್ಯೆಗಳನ್ನು ಎತ್ತಿ ಹಿಡಿಯುತ್ತೇವೆ. ಕೇಂದ್ರಕ್ಕೆ ನಾವು ಏನಾದರೂ ಸಲಹೆ ಸೂಚನೆ ಕೊಟ್ಟರೆ ಅಲಕ್ಷ ಮಾಡ್ತಾರೆ. ಅದಕ್ಕೆ ಹೆಚ್ಚು ಹೇಳಲ್ಲ. ಹೇಳಿದ್ರೆ ತಪ್ಪಾಗುತ್ತೆ ಎಂದು ಖರ್ಗೆ ಅಸಮಾಧಾನ ಹೊರ ಹಾಕಿದರು.

ತೊಗರಿ ಬೆಳೆ ಹಾಳಾಯ್ತು ಎಂದ ರೈತನ ಮೇಲೆ ಎಗರಿದ ಖರ್ಗೆ: ‘ನಿನ್ನದು 4 ಎಕರೆ ಹಾಳಾಗಿರಬಹುದು, ನನ್ನದು ನಲವತ್ತು ಎಕರೆ ಹಾಳಾಗಿದೆ, ಬರೀ ತೊಗರಿ ಮಾತ್ರವಲ್ಲ, ಹೆಸರು, ಉದ್ದು, ಹತ್ತಿ, ಸೂರ್ಯಕಾಂತಿ ಬೆಳೆಗಳು ಸಹ ಹಾಳಾಗಿವೆ. ನಾನು ಯಾರಿಗೆ ಹೋಗಿ ಹೇಳಲಿ?. ಇಲ್ಲಿ ಬಂದು ಪ್ರಚಾರ ಗಿಟ್ಟಿಸಿಕೊಳ್ಳುವ ಕೆಲಸ ಮಾಡಬೇಡ. ಆರು ಹಡೆದವಳ ಮುಂದೆ ಮೂರು ಹಡೆದವಳು ಬಂದು ಹೇಳಿದಂಗಾಯ್ತು ನಿನ್ನ ಕಥೆ’. ಅತಿವೃಷ್ಟಿಯಿಂದ ಹಾಳಾಗಿ ಹೋದ ತೊಗರಿ ಬೆಳೆಯನ್ನು ಕಿತ್ತು ತಂದು ತೋರಿಸಿದ ಯುವಕನಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತರಾಟೆಗೆ ತೆಗೆದುಕೊಂಡ ಪರಿಯಿದು.

ನಗರಕ್ಕೆ ಆಗಮಿಸಿದ್ದ ಮಲ್ಲಿಕಾರ್ಜುನ ಖರ್ಗೆಯವರು ತಮ್ಮ ನಿವಾಸದಲ್ಲಿ ಪಕ್ಷದ ಕಾರ್ಯಕರ್ತರ ಜೊತೆ ಸಮಾಲೋಚನೆ ನಡೆಸುತ್ತಿದ್ದರು. ಆಗ ಅವರ ನಿವಾಸಕ್ಕೆ ಆಗಮಿಸಿದ ಯುವಕನೊಬ್ಬ, ಅತಿವೃಷ್ಟಿಯಿಂದ ಹಾಳಾಗಿದ್ದ ತೊಗರಿ ಬೆಳೆ ತೋರಿಸಿ, ‘ನಾಲ್ಕು ಎಕರೆಯಲ್ಲಿ ಬೆಳೆದಿದ್ದ ತೊಗರಿ ಬೆಳೆ ಹಾಳಾಗಿದೆ, ಸರ್’ ಎಂದ. ಈ ವೇಳೆ ಕೋಪಗೊಂಡ ಖರ್ಗೆ, ‘ತೊಗರಿ ಬೆಳೆ ಹಾನಿಯಾಗಿದ್ದನ್ನು ನನಗೆ ತೋರಿಸಲು ಬಂದಿರುವೆಯಾ?. ನಿನ್ನ ತೊಗರಿ ಎಷ್ಟು ಹಾಳಾಗಿದೆ?’ ಎಂದು ಏರು ಧ್ವನಿಯಲ್ಲಿ ಪ್ರಶ್ನಿಸಿದರು. ‘ನಾಲ್ಕು ಎಕರೆಯಲ್ಲಿನ ಬೆಳೆ ಹಾಳಾಗಿದೆ ಸರ್’ ಎಂದು ಯುವಕ ವಿನಮ್ರನಾಗಿ ನುಡಿದ.

‘ನಿನ್ನದು ನಾಲ್ಕು ಎಕರೆ ಹಾಳಾಗಿರಬಹುದು, ನನ್ನದು ನಲವತ್ತು ಎಕರೆಯ ಬೆಳೆ ಹಾಳಾಗಿದೆ. ಬರೀ ತೊಗರಿ ಮಾತ್ರವಲ್ಲ, ಹೆಸರು, ಉದ್ದು, ಹತ್ತಿ, ಸೂರ್ಯಕಾಂತಿ ಬೆಳೆಗಳೂ ಸಹ ಹಾಳಾಗಿವೆ. ಬರೀ ಪ್ರಚಾರಕ್ಕಾಗಿ ಈ ರೀತಿ ಬರಬೇಡ. ಆರು ಹಡೆದವಳ ಮುಂದೆ ಮೂರು ಹಡೆದವಳು ಬಂದು ಹೇಳಿದಂಗೆ ನನಗೆ ಹೇಳುತ್ತಿರುವೆ’ ಎಂದು ಯುವಕನನ್ನು ತರಾಟೆಗೆ ತೆಗೆದುಕೊಂಡರು. ಇದೇ ವೇಳೆ, ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಹರಿಹಾಯ್ದ ಖರ್ಗೆ, ದೇಶದ ಹಲವೆಡೆ ಅತಿವೃಷ್ಟಿಯಿಂದಾಗಿ ಬೆಳೆಗಳು ಹಾಳಾಗಿವೆ. ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಆದರೆ, ಮೋದಿ ಸರ್ಕಾರ ಈ ಬಗ್ಗೆ ಗಂಭೀರತೆಯನ್ನೇ ಹೊಂದಿಲ್ಲ ಎಂದು ಆಕ್ರೋಶ ಹೊರಹಾಕಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!
'ನಿಮಗೆ ಧಮ್ ಇದ್ರೆ..; ದ್ವೇಷ ಭಾಷಣ ಮಸೂದೆ ಜಾರಿಗೆ ಮುಂದಾಗಿರೋ ಕಾಂಗ್ರೆಸ್ ಸರ್ಕಾರಕ್ಕೆ ಸಿಟಿ ರವಿ ನೇರ ಸವಾಲು!