ಅಮಿತ್‌ ಶಾ ‘ದುಶ್ಶಾಸನ’ : ಮಮತಾ ದ್ವೇಷ ಭಾಷಣ

Kannadaprabha News   | Kannada Prabha
Published : Dec 31, 2025, 05:18 AM IST
mamata Banerjee

ಸಾರಾಂಶ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಉದ್ದೇಶಿಸಿ ಪ.ಬಂಗಾಳ ಸಿಎಂ ಹಾಗೂ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಅವರು ದ್ವೇಷಭಾಷಣ ಮಾಡಿದ್ದು, ಶಾ ಅವರನ್ನು ದುಶ್ಶಾಸನನಿಗೆ ಹೋಲಿಸಿದ್ದಾರೆ. ಅಲ್ಲದೆ, ಇತರ ಬಿಜೆಪಿ ನಾಯಕರನ್ನು ಶಕುನಿ ಹಾಗೂ ದುರ್ಯೋಧನನಿಗೆ ಹೋಲಿಸಿ ವಾಗ್ದಾಳಿ ನಡೆಸಿದ್ದಾರೆ.

ಕೋಲ್ಕತಾ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಉದ್ದೇಶಿಸಿ ಪ.ಬಂಗಾಳ ಸಿಎಂ ಹಾಗೂ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಅವರು ದ್ವೇಷಭಾಷಣ ಮಾಡಿದ್ದು, ಶಾ ಅವರನ್ನು ದುಶ್ಶಾಸನನಿಗೆ ಹೋಲಿಸಿದ್ದಾರೆ. ಅಲ್ಲದೆ, ಇತರ ಬಿಜೆಪಿ ನಾಯಕರನ್ನು ಶಕುನಿ ಹಾಗೂ ದುರ್ಯೋಧನನಿಗೆ ಹೋಲಿಸಿ ವಾಗ್ದಾಳಿ ನಡೆಸಿದ್ದಾರೆ.

ಇಂದು ಬಂಗಾಳಕ್ಕೆ ಶಕುನಿಯ ಶಿಷ್ಯ ದುಶ್ಶಾಸನ ಬಂದಿದ್ದಾನೆ

ಮಂಗಳವಾರ ಬಂಕುರಾದಲ್ಲಿ ನಡೆದ ರ್‍ಯಾಲಿಯಲ್ಲಿ ಮಾತನಾಡಿದ ಮಮತಾ, ‘ಇಂದು ಬಂಗಾಳಕ್ಕೆ ಶಕುನಿಯ ಶಿಷ್ಯ ದುಶ್ಶಾಸನ (ಅಮಿತ್‌ ಶಾ) ಮಾಹಿತಿ ಸಂಗ್ರಹಿಸಲು ಬಂದಿದ್ದಾನೆ. ಚುನಾವಣೆಗಳು ಬರುತ್ತಿದ್ದಂತೆ ದುಶ್ಶಾಸನ ಮತ್ತು ದುರ್ಯೋಧನ ಕಾಣಿಸಿಕೊಳ್ಳಲು ಪ್ರಾರಂಭಿಸುತ್ತಾರೆ’ ಎಂದು ಮಂಗಳವಾರದ ಅಮಿತ್‌ ಶಾ ಅವರ ಬಂಗಾಳ ಭೇಟಿಯನ್ನು ಪ್ರಶ್ನಿಸಿದರು.

ನಾನು ಭೂಮಿ ನೀಡದಿದ್ದರೆ, ಏನಾಗುತ್ತಿತ್ತು

‘ಇಂದು, ಅವರು (ಶಾ) ಮಮತಾ ಬ್ಯಾನರ್ಜಿ ಬಾಂಗ್ಲಾ ಗಡಿ ಬೇಲಿಗೆ ಭೂಮಿ ನೀಡಲಿಲ್ಲ ಎಂದು ಹೇಳುತ್ತಿದ್ದಾರೆ. ನಾನು ಭೂಮಿ ನೀಡದಿದ್ದರೆ, ಏನಾಗುತ್ತಿತ್ತು? ಪೆಟ್ರಾಪೋಲ್‌ನಲ್ಲಿ ಭೂಮಿಯನ್ನು ಯಾರು ಕೊಟ್ಟರು? ಆಂಡಾಲ್‌ನಲ್ಲಿ ಭೂಮಿಯನ್ನು ಯಾರು ಕೊಟ್ಟರು?’ ಎಂದು ಪ್ರಶ್ನಿಸಿದರು.

ಪಶ್ಚಿಮ ಬಂಗಾಳದ ಗಡಿಯ ಮೂಲಕ ಒಳನುಸುಳುವಿಕೆ ರಾಷ್ಟ್ರೀಯ ಭದ್ರತಾ ಸಮಸ್ಯೆಯಾಗಿದೆ ಎಂಬ ಶಾ ಅವರ ಹೇಳಿಕೆಗೆ ತಿರುಗೇಟು ನೀಡಿದ ಅವರು, ‘ನುಸುಳುಕೋರರು ಬಂಗಾಳದಿಂದ ಮಾತ್ರ ಬರುತ್ತಾರೆ ಎಂದು ಅವರು ಹೇಳುತ್ತಾರೆ. ಹಾಗಿದ್ದಲ್ಲಿ, ಕಾಶ್ಮೀರಕ್ಕೆ ಅಕ್ರಮ ನುಸುಳಿಕೋರರ ಸಮಸ್ಯೆ ಇಲ್ಲವೆ? ಪಹಲ್ಗಾಂನಲ್ಲಿ ದಾಳಿ ಮಾಡಿದವರು ಯಾರು?’ ಎಂದು ಪ್ರಶ್ನಿಸಿದರು.

ಅಲ್ಲದೆ, ಚುನಾವಣಾ ಮತಪಟ್ಟಿ ಪರಿಷ್ಕರಣೆಯನ್ನು ಎಐ (ಕೃತಕ ಬುದ್ಧಿಮತ್ತೆ) ಬಳಸಿ ಮಾಡಲಾಗುತ್ತಿದೆ. ಮತದಾರರಿಗೆ, ಚುನಾವಣಾ ಸಿಬ್ಬಂದಿಗೆ ಕಿರುಕುಳ ನೀಡಲಾಗುತ್ತಿದೆ’ ಎಂದು ಆರೋಪಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Breaking News: ಬೆಳಗಾವಿಯಲ್ಲಿ ಬಿಜೆಪಿ ಹೈವೋಲ್ಟೇಜ್ ಸಭೆ; ಬಿಎಲ್ ಸಂತೋಷ್, ವಿಜಯೇಂದ್ರ ನೇತೃತ್ವದಲ್ಲಿ ಚುನಾವಣಾ ತಂತ್ರ!
ಪಾಕ್​ ಬ್ರೇಕಿಂಗ್​ ನ್ಯೂಸ್​: ಧುರಂಧರ್ ಸಿನಿಮಾದ ಇಂಚಿಂಚೂ ಡೈಲಾಗ್​ ​ ಬರೆದದ್ದೇ ನರೇಂದ್ರ ಮೋದಿ!