
ಮಂಡ್ಯ, (ಜು.13): ಸುಮಲತಾ ಅಂಬರೀಶ್ ಅವರನ್ನ ಕೆಆರ್ಸ್ ಡ್ಯಾಂಗೆ ಅಡ್ಡಡ್ಡ ಮಲಸಬೇಕೆಂದು ಮಾಜಿ ಸಿಎಂ ಕುಮಾರಸ್ವಾಮಿ ನೀಡಿದ್ದ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಇದೀಗ ಮತ್ತೋರ್ವ ಜೆಡಿಎಸ್ ಮುಖಂಡರೊಬ್ಬರು ಅಂತಹದೊಂದು ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ.
ಹೌದು...ಸಂಸದೆ ಸುಮಲತಾ ಅಂಬರೀಶ್ ಅವರು ಇಷ್ಟು ದಿನ ಎಲ್ಲಿ ಮಲ್ಕೊಂಡಿದ್ದರು ಎಂದು ಮಂಡ್ಯ ನಗರಸಭೆ ಅಧ್ಯಕ್ಷ ಹೆಚ್ ಎಸ್ ಮಂಜು ನಾಲಿಗೆ ಹರಿಬಿಟ್ಟಿದ್ದಾರೆ.
KRS ಬಾಗಿಲಿಗೆ ಸುಮಲತಾರನ್ನು ಅಡ್ಡಡ್ಡ ಮಲಗಿಸ್ಬೇಕು: ಏನಿದು ಎಚ್ಡಿಕೆ ಮಾತಿನ ಅರ್ಥ?
ಸುಮಲತಾ ವಿರುದ್ಧ ನಡೆದ ಪ್ರತಿಭಟನೆ ಹೆಚ್ ಎಸ್ ಮಂಜು ಈ ಮಾತುಗಳನ್ನಾಡಿದ್ದು, ವಿವಾದ ಸೃಷ್ಟಿಸಿದ್ದಾರೆ. ಅಲ್ಲದೇ ಸುಮಲತಾರ ಬೆಂಬಲಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಈಗಾಗಲೇ ಕುಮಾರಸ್ವಾಮಿ ಅವರು ಅಡ್ಡಡ್ಡ ಮಲಗಿಸಬೇಕೆಂಬ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಪರ-ವಿರೋಧ ಆರೋಪಗಳು ಆಗಿ ಸೈಲೆಂಟ್ ಆಗಿತ್ತು. ಇದೀಗ ಜೆಡಿಎಸ್ ನಾಯಕ, ಸುಮಲತಾ ಇಷ್ಟು ದಿನ ಎಲ್ಲಿ ಮಲ್ಕೊಂಡಿದ್ದರು ಎಂದು ಹೇಳಿ ಉರಿಯುವ ಬೆಂಕಿಗೆ ತುಪ್ಪ ಸುರಿಸಿದ್ದಾರೆ. ಇದು ಮುಂದೆ ಯಾವ ಹಂತಕ್ಕೆ ಹೋಗುತ್ತಿದೋ ಎನ್ನುವುದನ್ನು ಕಾದುನೋಡಬೇಕಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.