ಕೊರೋನಾದಿಂದ ಸುಮಲತಾ ಗುಣಮುಖರಾದ್ರಾ? ಈ ಬಗ್ಗೆ ಅವರೇ ಸ್ಪಷ್ಟನೆ ಕೊಟ್ಟಿದ್ದು ಹೀಗೆ

Published : Jul 17, 2020, 06:37 PM ISTUpdated : Jul 17, 2020, 06:42 PM IST
ಕೊರೋನಾದಿಂದ ಸುಮಲತಾ ಗುಣಮುಖರಾದ್ರಾ? ಈ ಬಗ್ಗೆ ಅವರೇ ಸ್ಪಷ್ಟನೆ ಕೊಟ್ಟಿದ್ದು ಹೀಗೆ

ಸಾರಾಂಶ

ಕೊರೋನಾ ಸೋಂಕಿನಿಂದ ಸಂಸದೆ ಹಾಗು ನಟಿ ಸುಮಲತಾ ಅಂಬರೀಷ್ ಗುಣಮುಖರಾಗಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ಸ್ವತಃ ಸುಮಲತಾ ಅವರು ಸ್ಪಷ್ಟನೆ ಕೊಟ್ಟಿದ್ದಾರೆ. 

ಬೆಂಗಳೂರು, (ಜುಲೈ.17): ಮಂಡ್ಯ ಸಂಸದೇ ಸುಮಲತಾ ಅಂಬರೀಶ್ ಅವರಿಗೆ ಕೊರೋನಾ ಸೋಂಕು ತಗುಲಿದ್ದು, ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೊರೋನಾ ಸೋಂಕಿನಿಂದ ಸಂಸದೆ ಸುಮಲತಾ ಅಂಬರೀಶ್ ಗುಣಮುಖರಾಗಿದ್ದಾರೆ. ನಿತ್ಯದ ಕೆಲಸಕ್ಕೆ ಹಾಜರಾಗುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಈ ಹಿನ್ನೆಲೆಯಲ್ಲಿ ಸುಮಲತಾ ಅವರು ಈ ಬಗ್ಗೆ ಫೇಸ್‌ಬುಕ್ ಮೂಲಕ ಸ್ಪಷ್ಟನೆ ಕೊಟ್ಟಿದ್ದಾರೆ.

ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ಗೂ ತಗುಲಿದ ಕೊರೋನಾ ವೈರಸ್

ಸುಮಲತಾ ಅಂಬರೀಶ್ ಸ್ಪಷ್ಟನೆ 
ಸಂಪೂರ್ಣವಾಗಿ ಗುಣಮುಖವಾಗಿರುವುದು, ಕ್ವಾರಂಟೈನ್ ಅವಧಿ ಮುಗಿದು, ಪರೀಕ್ಷೆಯ ಬಳಿಕವೇ ತಿಳಿಯಲಿದೆ ಎಂದು ಹೇಳಿದ್ದಾರೆ. ಸದ್ಯಕ್ಕೆ ಔಷಧಿ ಹಾಗೂ ಸುಶ್ರುಷೆ ಮುಂದುವರೆದಿದೆ. ಗುಣಮುಖ ಆಗಲೆಂದು ನೀವೆಲ್ಲರೂ ಮಾಡಿದ ಆಶೀರ್ವಾದ, ಹಾರೈಕೆಗಳಿಗೆ ಋಣಿ. ಇನ್ನು ಕೆಲವೇ ದಿನಗಳಲ್ಲಿ ಗುಣಮುಖ ಆಗುವ ಭರವಸೆ ಇದೆ ಎಂದು ಹೇಳಿದ್ದಾರೆ

ಕೊರೋನಾ ಸೋಂಕಿತರನ್ನ ಅಪರಾಧಿಗಳ ರೀತಿ ಕಾಣುವುದು, ಸಾಮಾಜದ ನಿಂದನೆಗೆ ಗುರಿ ಮಾಡುವುದು ಸರಿಯಲ್ಲ. ಇದು ಒಂದು ಯುದ್ಧ, ಕೊರೋನಾ ವಿರುದ್ಧ ಎಲ್ಲರೂ ಒಟ್ಟಾಗಿ ಹೋರಾಡಬೇಕಿದೆ. ಮುಖ್ಯವಾಗಿ, ಸೊಂಕಿತರು ಕ್ವಾರಂಟೈನ್ ಅವಧಿಯನ್ನು ಮತ್ತು ಸರ್ಕಾರದ ಎಲ್ಲಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅತ್ಯಗತ್ಯ ಹಾಗೂ ಅದು ನಮ್ಮ ಜವಾಬ್ದಾರಿ ಎಂದು ಹೇಳಿದ್ದಾರೆ.

ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ತಪ್ಪದೆ ಮುಖಕ್ಕೆ ಮಾಸ್ಕ್ ಧರಿಸುವುದನ್ನ ಮರಿಯಬೇಡಿ ಎನ್ನುವ ಸಲಹೆಯನ್ನು ಸಹ ಅವರು ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್